ಕಾಂಗ್ರೆಸ್ನಲ್ಲಿ ಹಿರಿತನಕ್ಕೆ ಗೌರವವಿಲ್ಲ… ಶೀಘ್ರ ರೆಡ್ಡಿ ಪಾರ್ಟಿ ಸೇರುತ್ತೇನೆ :ವಿರೂಪಾಕ್ಷ ಗೌಡ
Team Udayavani, Jan 6, 2023, 7:26 PM IST
ಗಂಗಾವತಿ: ಕಾಂಗ್ರೆಸ್ ಪಕ್ಷದಲ್ಲಿ ಹಿರಿತನಕ್ಕೆ ಬೆಲೆ ಇಲ್ಲಆದ್ದರಿಂದ ಶೀಘ್ರವೇ ಅಪಾರ ಬೆಂಬಲಿಗ ರೊಂದಿಗೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸೇರ್ಪಡೆಯಾಗಲಿರುವುದಾಗಿ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಜಿ.ಪಂ. ಮಾಜಿ ಉಪಾಧ್ಯಕ್ಷ ವಿರೂಪಾಕ್ಷಗೌಡ ಹೇರೂರು ತಿಳಿಸಿದ್ದಾರೆ.
ಅವರು ಸದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಚಿವರಾದ ಇಕ್ಬಾಲ್ ಅನ್ಸಾರಿ ಹಾಗೂ ಶಿವರಾಜ ತಂಗಡಗಿ ನಿರ್ಲಕ್ಷ್ಯಕ್ಕೆ ಪಕ್ಷದ ಹಲವು ಕಾರ್ಯಕರ್ತರು ಬೇಸತ್ತಿದ್ದು ಕಾಂಗ್ರೆಸ್ ಪಕ್ಷಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ಭವಿಷ್ಯವಿಲ್ಲ. ನಾವೆಲ್ಲ ಕಳೆದ 40 ವರ್ಷಗಳಿಂದ ಮಾಜಿ ಸಚಿವ ಶ್ರೀರಂಗದೇವರಾಯಲು ಕಾಲದಿಂದಲೂ ಕಾಂಗ್ರೆಸ್ ಪಕ್ಷದ ಸಂಘಟನೆ ಮಾಡಿ ಗ್ರಾ.ಪಂ.ನಿಂದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದು ಇತ್ತೀಚಿನ ಪಕ್ಷದ ಮುಖಂಡರ ವರ್ತನೆಗೆ ಬೇಸರ ವ್ಯಕ್ತವಾಗುತ್ತಿದೆ. ಈಗಾಗಲೇ ಮೊಬೈಲ್ ಮೂಲಕ ರೆಡ್ಡಿಯವರೊಂದಿಗೆ ಮಾತನಾಡಿದ್ದು, ಶೀಘ್ರವೇ ಆಪ್ತರ ಜತೆ ಮಾತುಕತೆ ನಡೆಸಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸೇರಿ ಜನಾರ್ದನ ರೆಡ್ಡಿ ಗೆಲುವಿಗೆ ಶ್ರಮಿಸುವುದಾಗಿ ವಿರೂಪಾಕ್ಷಗೌಡ ಹೇರೂರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ