ದಿವಾಳಿ ಅಂಚಿಗೆ ಬಂದು ನಿಂತಿದೆ ಕಾಂಗ್ರೆಸ್‌; ಅಶ್ವತ್ಥ ನಾರಾಯಣ ವ್ಯಂಗ್ಯ

ಪ್ರಧಾನಿ ಮೋದಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದ್ದಾರೆ.

Team Udayavani, Oct 2, 2021, 5:15 PM IST

ದಿವಾಳಿ ಅಂಚಿಗೆ ಬಂದು ನಿಂತಿದೆ ಕಾಂಗ್ರೆಸ್‌; ಅಶ್ವತ್ಥ ನಾರಾಯಣ ವ್ಯಂಗ್ಯ

ಕಾರಟಗಿ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ ಅಧಿಕಾರ ವಹಿಸಿಕೊಂಡು ವರ್ಷಕ್ಕೂ ಹೆಚ್ಚು ಕಾಲವಾದರೂ ಈವರೆಗೂ ಪದಾಧಿ ಕಾರಿಗಳ ನೇಮಕ ಮಾಡಿಲ್ಲ. ಸುದೀರ್ಘ‌ ಇತಿಹಾಸ ಹೊಂದಿರುವ ಕಾಂಗ್ರೆಸ್‌ಗೆ ಸ್ವತಂತ್ರವಾಗಿ ಪದಾಧಿಕಾರಿಗಳ ನೇಮಕಾತಿ ಮಾಡುವುದಕ್ಕೂ ಕ್ಲಿಷ್ಟಕರ ಸ್ಥಿತಿ ನಿರ್ಮಾಣವಾಗಿ ಇದೀಗ ದಿವಾಳಿ ಅಂಚಿಗೆ ಬಂದು ನಿಂತಿದೆ. ಕಾಂಗ್ರೆಸ್‌ ಅವನತಿಗೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕೆ? ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಅಶ್ವತ್‌ ನಾರಾಯಣ ವ್ಯಂಗ್ಯವಾಡಿದರು.

ಪಟ್ಟಣದ ಪದ್ಮಶ್ರೀ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ರಾಯಚೂರು, ಕೊಪ್ಪಳ ಜಿಲ್ಲೆಗಳ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ಕ್ಷೇತ್ರದಿಂದ ವಿಧಾನ ಪರಿಷತ್‌ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ನಡೆದ ಪೂರ್ವಭಾವಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ ಅಧಿಕಾರ ಅನುಭವಿಸುತ್ತ ಕಾರ್ಯಕರ್ತರನ್ನು ಮರೆತಿದೆ. ಇಂದು ಅದರ ಸಂಘಟನೆ ಪಾತಾಳಕ್ಕೆ ಕುಸಿದಿದೆ ಎನ್ನುವುದಕ್ಕೆ ಇತ್ತೀಚಿನ ಪಂಜಾಬ ಹಾಗೂ ರಾಜಸ್ಥಾನದಲ್ಲಿ ನಡೆದಿರುವ ಘಟನೆಗಳೇ ಸಾಕ್ಷಿ. ಕಳೆದ ಬಾರಿ ವಿಧಾನ ಪರಿಷತ್‌ ಸದಸ್ಯರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ಸಿಗರು ಈ ಬಾರಿ ಚುನಾವಣೆಗೆ ನಿಲ್ಲಲ್ಲ ಎಂದು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಕಾಂಗ್ರೆಸ್‌ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ ಎನ್ನುವುದನ್ನು ನೀವೇ ಊಹಿಸಿ ಎಂದರು.

ಕಳೆದ 40 ವರ್ಷಗಳಿಂದಲೂ ಬಿಜೆಪಿ ಸಂಘಟನೆಗೆ ಹೆಚ್ಚು ಮಹತ್ವ ಕೊಟ್ಟಿದೆ. ಕಾರ್ಯಕರ್ತರ ಪಾತ್ರ, ಅವರ ಮಹತ್ವ ಅರಿತುಕೊಂಡೇ ಮುನ್ನಡೆಯುತ್ತಿದೆ. ಆ ಕಾರಣಕ್ಕೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುವುದು ಇಂದಿನ ಪೂರ್ವಭಾವಿ ಸಭೆಯಲ್ಲಿ ಸೇರಿದವರ ಜವಾಬ್ದಾರಿಯಾಗಿದೆ ಎಂದರು. ಸಂಸದರಾದ ಸಂಗಣ್ಣ ಕರಡಿ ಹಾಗೂ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಪ್ರಧಾನಿ ಮೋದಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದ್ದಾರೆ.

ಮನೆ-ಮನೆಗೆ ಕುಡಿವ ನೀರೊದಗಿಸುವ ಜಲಜೀವನ್‌ ಮಿಷನ್‌ (ಜೆಜೆಎಂ) ಯೋಜನೆ ಮೂಲಕ ರಾಜ್ಯಕ್ಕೆ 6800 ಕೋಟಿ ರೂ. ನೀಡಿದ್ದಾರೆ. ರಾಯಚೂರು ಜಿಲ್ಲೆಗೆ ಪ್ರತ್ಯೇಕವಾಗಿ ಜಲಧಾರೆ ಯೋಜನೆಯಡಿ 1980 ಕೋಟಿ ರೂ.ನೀಡುವ ಮೂಲಕ ಕೃಷ್ಣಾ ನದಿಯಿಂದ ನೇರವಾಗಿ ಶುದ್ಧ ಕುಡಿವ ನೀರೊದಗಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಇಂತಹ ಮಹತ್ವದ ಯೋಜನೆಗಳ ಬಗ್ಗೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರಿಗೆ ಮಾಹಿತಿ ನೀಡಿ ಗೆಲುವು ಸಾಧಿಸಬೇಕಿದೆ ಎಂದರು.

ಈ ವೇಳೆ ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ್‌, ಬಿಜೆಪಿ ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೊಲ್ಲಾ ಶೇಷಗಿರಿರಾವ್‌, ಶರಣು ತಳ್ಳಿಕೇರಿ, ತಿಪ್ಪೇರುದ್ರಸ್ವಾಮಿ, ಮಾಜಿ ಶಾಸಕರಾದ ಕೆ. ಶರಣಪ್ಪ, ಗಂಗಾಧರ ನಾಯಕ, ಅಮರೇಶ ಕರಡಿ, ಚಂದ್ರಶೇಖರ ಹಲಗೇರಿ, ಭೋಜಪ್ಪ, ಪ್ರಭು ಕಪಗಲ್‌, ನವೀನ್‌ ಗುಳಗಣ್ಣನವರ, ರಮೇಶ ನಾಡಿಗೇರ ಸೇರಿದಂತೆ ರಾಯಚೂರು, ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಇದ್ದರು.

ವಿಧಾನ ಪರಿಷತ್‌ ಚುನಾವಣೆ ಮಹತ್ವದ್ದಾಗಿದೆ. ಕಳೆದ ಬಾರಿ ಕಡಿಮೆ ಅಂತರದಲ್ಲಿ ನಮ್ಮ ಅಭ್ಯರ್ಥಿ ಸಿ.ವಿ. ಚಂದ್ರಶೇಖರ ಪರಾಭವಗೊಂಡಿದ್ದಾರೆ. ಅದಕ್ಕೆ ಈ ಬಾರಿಯೂ ಅತಿಯಾದ ಆತ್ಮವಿಶ್ವಾಸ ಹೊಂದದೇ ವಿರೋಧ ಪಕ್ಷ ಮಣಿಸಲು ತಂತ್ರಕ್ಕೆ ಪ್ರತಿತಂತ್ರ ಹೂಡಿ ಈ ಬಾರಿ ಗೆಲ್ಲಲೇಬೇಕೆಂದು ಪಣ ತೊಟ್ಟಿದ್ದೇವೆ.
ದೊಡ್ಡನಗೌಡ ಪಾಟೀಲ್‌, ಬಿಜೆಪಿ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.