ಸಿಎಂ ವಿರುದ್ಧ ಸಿದ್ದುಗೆ ಹೇಳ್ತೀನಿ: ಹಿಟ್ನಾಳ್
Team Udayavani, Jul 31, 2018, 6:15 AM IST
ಕೊಪ್ಪಳ: ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಸರ್ಕಾರವಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ಸಾಲ ಮನ್ನಾ ವಿಚಾರದಲ್ಲಿ ಕೊಪ್ಪಳ ರೈತರ ಬಗ್ಗೆ ಮಾತನಾಡಿದ್ದು ನಾನೂ ಗಮನಿಸಿದ್ದೇನೆ. ಈ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಮುನಿರಾಬಾದ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಕುಮಾರಸ್ವಾಮಿ ಅವರು ಕೊಪ್ಪಳದ ಜನರಿಗೆ ಚುನಾವಣೆ ಸಂದರ್ಭದಲ್ಲಿ ಮತ ನೀಡುವ ವೇಳೆ ಈ ಕುಮಾರಸ್ವಾಮಿ ನೆನಪಾಗಲಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಮೈತ್ರಿ ಸರ್ಕಾರವಿದೆ. ಜಿಲ್ಲೆಯಿಂದ ಇಬ್ಬರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದೇವೆ. ಆಯಾ ಕ್ಷೇತ್ರದ ಜನರು ನಮಗೆ ಮತ ಹಾಕಿದ್ದಾರೆ. ನಾವು ಸಿಎಂಗೆ ಮತ ಹಾಕಿದ್ದೇವೆ. ಅಂದರೆ ಪರೋಕ್ಷವಾಗಿ ಈ ಕ್ಷೇತ್ರದ ಜನ ಸಿಎಂಗೆ ಮತ ಹಾಕಿದಂತೆ. ಈ ಹೇಳಿಕೆ ವಿಚಾರದ ಕುರಿತು ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ. ಶೀಘ್ರದಲ್ಲೇ ತುಂಗಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಲು ಆಗಮಿಸುವ ನಿರೀಕ್ಷೆಯಿದೆ. ಅವರನ್ನೇ ಈ ಪ್ರಶ್ನೆ ಕೇಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ