Constitution ಮೊದಲು, ಎಲ್ಲಾ ಸಾರ್ವಜನಿಕರು ಅಧಿವೇಶನ ವೀಕ್ಷಿಸಬೇಕು: ಸ್ಪೀಕರ್ ಖಾದರ್
Team Udayavani, Feb 8, 2024, 10:21 AM IST
ಗಂಗಾವತಿ: ದೇಶಕ್ಕೆ ಸಂವಿಧಾನವೇ ಮೊದಲು ನಂತರ ಉಳಿದೆಲ್ಲವೂ, ಸಂವಿಧಾನದಲ್ಲಿ ದೇಶದ ಸಮಸ್ಯೆಗಳಿಗೆ ಪರಿಹಾರವಿದೆ. ರಾಜಕಾರಣಿಗಳು ಸಂವಿಧಾನ ಬಿಟ್ಟು ಹೋಗಬಾರದು. ವಿಧಾನಸಭೆಯ ಅಧಿವೇಶನ ವಿಕ್ಷಿಸಲು ಎಲ್ಲಾರು ಬನ್ನಿ, ಸಂವಿಧಾನ ತಿಳಿದುಕೊಳ್ಳಿರಿ ಎಂದು ವಿದಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ರಾಯಚೂರಿನಿಂದ ಹೊಸಪೇಟೆಗೆ ಹೋಗುನ ಮಾರ್ಗದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರ ನಿವಾಸದಲ್ಲಿ ಸನ್ಮಾನಿತಗೊಂಡು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಸರಕಾರದ ಯೋಜನೆಗಳ ಬಗ್ಗೆ ಚರ್ಚೆಯಾಗುತ್ತಿವೆ. ಅಧಿವೇಶನದಲ್ಲಿ ಪ್ರಮುಖ ವಿಷಯಗಳು ಚರ್ಚೆಯಾಗುತ್ತಿವೆ. ಇದನ್ನು ಗಮನಿಸಲು ವಿದ್ಯಾರ್ಥಿಗಳು ಸೇರಿ ಸರ್ವರೂ ಆಗಮಿಸಬೇಕು ಎಂದರು.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ವೈದ್ಯಕೀಯ ಮಂತ್ರಿಯಾಗಿದ್ದ ಸಂದರ್ಭ ರಾಜ್ಯದಲ್ಲಿ ಹಲವಾರು ವೈದ್ಯಕೀಯ ಕಾಲೇಜುಗಳನ್ನು ಪ್ರಾರಂಭಿಸಿದ್ದರು. ಅಲ್ಲದೇ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸಿದ ಕೀರ್ತಿ ಅನ್ಸಾರಿಗೆ ಸಲ್ಲುತ್ತದೆ. ಅವರು ಸೋತರು ಅಷ್ಟೇ ಗೆದ್ದರೂ ಅಷ್ಟೇ, ಜನಪರ ಕಾರ್ಯದಲ್ಲಿ ಇರುತ್ತಾರೆ. ಅವರು ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ, ಜಿ. ಪಂ. ಮಾಜಿ ಸದಸ್ಯ ಅಮರೇಶ ಗೋನಾಳ್, ಕಾಂಗ್ರೆಸ್ ಮುಖಂಡರಾದ ವಿಠಾಲಾಪುರ ಯಮನಪ್ಪ, ಎಪಿಎಂಸಿ ಮಾಜಿ ಅದ್ಯಕ್ಷ ಸಣ್ಣಕ್ಕಿ ನೀಲಪ್ಪ, ಎಸ್.ಬಿ.ಖಾದ್ರಿ, ನವಲಿ ಯಮಯನಪ್ಪ ದಳಪತಿ, ನಗರಸಬಾ ಸದಸ್ಯ ಮನೋಹರಸ್ವಾಮಿ ಹಿರೇಮಠ, ಎಸ್ ಟಿ.ಘಟಕ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ.ಗೊಂಡಬಾಳ, ಮಂಜುನಾಥ ಗೊಂಡಬಾಳ, ನ್ಯಾಯವಾದಿ ಹುಸೇನಪ್ಪ ಹಂಚಿನಾಳ ಭೀಮೇಶ ಬೇಡ್ಕರ ನಗರ, ವಿಶ್ವನಾಥ ಮಾಲೀಪಾಟೀಲ್, ರಾಚಪ್ಪ ಗುಂಜಳ್ಳಿ, ಮಾರೇಶ, ಬಸವರಾಜ ಚಿಲ್ಕವಾಡಿ ಕಿನ್ನಾಳ ಸೇರಿದಂತೆ ಪ್ರಮುಖರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್