ಸಾಣಾಪುರ ಗಾಂವಠಾಣಾದಲ್ಲಿ ರೆಸಾರ್ಟ್ ನಿರ್ಮಾಣ
ನಿಯಮ ಮೀರಿ ಗಾಂವಠಾಣಾ 2.35 ಎಕರೆ ಭೂಮಿಗೆ ಸಾಗುವಳಿ ಚೀಟಿ; ಜನವಸತಿಗಾಗಿ ಮೀಸಲಿರಿಸಿದ್ದ ಗಾಂವಠಾಣಾ ಅನ್ಯರ ಪಾಲು
Team Udayavani, Jul 21, 2022, 3:04 PM IST
ಗಂಗಾವತಿ: ತಾಲೂಕಿನ ಸಾಣಾಪುರ ಗ್ರಾಮದ 2.35 ಎಕರೆ ಗಾಂವಠಾಣಾ ಭೂಮಿಯನ್ನು ಕೆಲವರು ಒತ್ತುವರಿ ಮಾಡಿ ಅಕ್ರಮವಾಗಿ ರೆಸಾರ್ಟ್ ನಿರ್ಮಿಸಿಕೊಂಡಿದ್ದಾರೆ. ಲಕ್ಷಾಂತರ ರೂ. ಬೆಲೆಬಾಳುವ ಜನವಸತಿಗಾಗಿ ಮೀಸಲಿದ್ದ ಭೂಮಿ ಅನ್ಯರ ಪಾಲಾಗಿದ್ದರೂ ಗ್ರಾಪಂ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ.
ಸಾಣಾಪುರ ಗ್ರಾಮದ ಸರ್ವೇ ನಂಬರ್ 31ರ ಪೈಕಿ 2.35 ಎಕರೆ ಭೂಮಿಯನ್ನು ಸರಕಾರ ಜನವಸತಿಗಾಗಿ ಗಾಂವಠಾಣಾ ಎಂದು ಗುರುತಿಸಿ ಮೀಸಲಿರಿಸಿದ್ದು ಹಲವು ದಶಕಗಳಿಂದ ಕೆಲವರು ಸ್ವಂತ ಭೂಮಿ ಇದ್ದರೂ ಗಾಂವಠಾಣಾ ಭೂಮಿ ಒತ್ತುವರಿ ಮಾಡಿಕೊಂಡು ರೆಸಾರ್ಟ್ ನಿರ್ಮಿಸಿಕೊಂಡಿದ್ದಾರೆ.
ಇದೀಗ ಸಾಣಾಪುರ ಮಧ್ಯೆ ಭಾಗದಲ್ಲಿ ರಾಜ್ಯ ಹೆದ್ದಾರಿ 130ನ್ನು ಚತುಷ್ಪಥ ರಸ್ತೆಯನ್ನಾಗಿ ಮಾರ್ಪಾಡುವ ಮಾಡುವ ಹಂತದಲ್ಲಿ ಯೋಜನೆ ಅನುಷ್ಠಾನ ಮಾಡಲು ಮುಖ್ಯಮಂತ್ರಿಗಳು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಹಿಟ್ನಾಳ-ಗಂಗಾವತಿವರೆಗೆ ಚತುಷ್ಪಥ ರಸ್ತೆ ನಿರ್ಮಿಸುವ ಸಂದರ್ಭದಲ್ಲಿ ಸಾಣಾಪುರದಲ್ಲಿ ನೂರಾರು ಮನೆಗಳು, ಗ್ರಾಪಂ ಕಟ್ಟಡ, ಅಂಗನವಾಡಿ ಹಾಗೂ ಶಾಲಾ ಕಟ್ಟಡಗಳನ್ನು ತೆರವು ಮಾಡಬೇಕಿದೆ. ಸಾಣಾಪುರ ಗ್ರಾಮಕ್ಕೆಂದು ಮೀಸಲಿರುವ ಸರ್ವೇ ನಂಬರ್ 31ರಲ್ಲಿರುವ 2.35 ಎಕರೆ ಗಾಂವಠಾಣಾ ಭೂಮಿಯಲ್ಲಿ ಅಕ್ರಮವಾಗಿ ಈ ಹಿಂದೆ ಸಾಗುವಳಿ ಚೀಟಿ ನೀಡಿದ್ದನ್ನು ಸಹಾಯಕ ಆಯುಕ್ತರು ರದ್ದುಗೊಳಿಸಿ ರಸ್ತೆ ನಿರ್ಮಾಣದಲ್ಲಿ ನಿರಾಶ್ರಿತರಾಗುವವರಿಗೆ ಮನೆಯ ನಿವೇಶನ ಹಾಗೂ ಸರಕಾರಿ ಕಟ್ಟಡಗಳನ್ನು ನಿರ್ಮಾಣ ಮಾಡಲು ಬಳಕೆ ಮಾಡುವಂತೆ ಸಾಣಾಪುರ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಗಾಂವಠಾಣಾ ಭೂಮಿಯನ್ನು ಸಾಗುವಳಿ ಮಾಡಲು ಮಂಜೂರಿ ಮಾಡಲು ಸರಕಾರದ ಹಲವು ನಿಯಮಗಳಿದ್ದರೂ ಅಕ್ರಮ ಸಕ್ರಮ ಕಮಿಟಿಯಲ್ಲಿ ಅರ್ಜಿ ಸಲ್ಲಿಸಿ ಸರ್ವೇ ನಂಬರ್ 31ರಲ್ಲಿರುವ 2.35 ಎಕರೆ ಭೂಮಿಗೆ ಸಾಗುವಳಿ ಚೀಟಿ ಪಡೆಯುವ ಜತೆಗೆ ಅಕ್ಕಪಕ್ಕದಲ್ಲಿರುವ ಪಾರಂಪೋಕ್ ಭೂಮಿಯನ್ನು ಸಹ ಒತ್ತುವರಿ ಮಾಡಿಕೊಂಡಿದ್ದು ಕಂದಾಯ ಇಲಾಖೆ ಅಧಿಕಾರಿಗಳು ಮೌನ ವಹಿಸಿದ್ದಾರೆ. ಅಕ್ರಮ ಸಕ್ರಮ ಕಮಿಟಿ ಮೂಲಕ ಸಾಗುವಳಿ ಚೀಟಿ ಪಡೆದಿರುವವರಿಗೆ ಈ ಮೊದಲು ಸಾಗುವಳಿ ಪಟ್ಟಾ ಭೂಮಿ ಸಾಣಾಪುರ ಹಾಗೂ ಇತರೆ ಗ್ರಾಮಗಳಲ್ಲಿದ್ದರೂ ಭೂಮಿ ರಹಿತರೆಂದು ಅಫಿಡವಿಟ್ ಸಲ್ಲಿಸಿ ಸರಕಾರಿ (ಗಾಂವಠಾಣಾ) ಭೂಮಿಯನ್ನು ಪಡೆಯಲಾಗಿದೆ. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಅಧಿ ಕಾರಿಗಳು ಗಾಂವಠಾಣಾ ಭೂಮಿಯ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಕೈಗೊಂಡು ಖಾಲಿ ಮಾಡಿಸಿ ವಸತಿ ರಹಿತರಿಗೆ ನಿವೇಶನ ಹಂಚಬೇಕಿದೆ.
-ಕೆ. ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ