ಕೋತಿಗಳಿಗೂ ತಟ್ಟಿದ ಕೋವಿಡ್ 19 ಬಿಸಿ


Team Udayavani, Mar 24, 2020, 6:44 PM IST

ಕೋತಿಗಳಿಗೂ ತಟ್ಟಿದ ಕೋವಿಡ್ 19 ಬಿಸಿ

ಗಂಗಾವತಿ: ಕೋವಿಡ್ 19 ವೈರಸ್‌ ಹರಡದಂತೆ ಎಚ್ಚರಿಕೆ ವಹಿಸಿ ಕಿಷ್ಕಿಂದಾ ಅಂಜನಾದ್ರಿ ಹಾಗೂ ಸುತ್ತಲಿನ ದೇಗುಲಗಳನ್ನು ಜಿಲ್ಲಾಡಳಿತ ಬಂದ್‌ ಮಾಡಿರುವುದರಿಂದ ಇಲ್ಲಿರುವ ನೂರಾರು ಕೋತಿಗಳು ಆಹಾರವಿಲ್ಲದೇ ಪರದಾಡುತ್ತಿವೆ.

ಕಿಷ್ಕಿಂದಾ ಅಂಜನಾದ್ರಿ ಪ್ರದೇಶ ಏಳು ಬೆಟ್ಟಗಳಿಂದ ಕೂಡಿದ್ದು, ಇಲ್ಲಿಯ ಬೆಟ್ಟಗುಡ್ಡಗಳಲ್ಲಿ ಸಾವಿರಾರು ವರ್ಷಗಳಿಂದ ಕೆಂಪು ಮತ್ತು ಕರಿ ಕೋತಿಗಳಿವೆ. ಸುತ್ತಮುತ್ತಲ್ಲಿರುವ ತೋಟ ಮತ್ತು ಬೆಟ್ಟಗಳಲ್ಲಿ ಸಿಗುವ ಹಣ್ಣು, ಹಂಪಲು ಮತ್ತು ಗಿಡದ ತಪ್ಪಲು ತಿಂದು ಕೋತಿಗಳು ಇದುವರೆಗೂ ಜೀವನ ನಡೆಸುತ್ತಿದ್ದವು. ಕಳೆದ 20 ವರ್ಷಗಳಿಂದ ಅಂಜನಾದ್ರಿ ಬೆಟ್ಟ, ವಾಲೀಕಿಲ್ಲ ಆದಿಶಕ್ತಿ ದೇಗುಲ, ಪಂಪಾ ಸರೋವರ, ಋಷಿಮುಖ ಪರ್ವತ ಹಾಗೂ ಹಂಪಿ ಮಾಲ್ಯವಂತ ಬೆಟ್ಟಕ್ಕೆ ಪ್ರತಿದಿನ ಬರುವ ಭಕ್ತರು, ಪ್ರವಾಸಿಗರು ಕೊಡುವ ಬಾಳೆ ಹಣ್ಣು ಹಾಗೂ ಇತರೆ ಆಹಾರ ಸೇವಿಸಿ ಕೋತಿಗಳು ಇಲ್ಲೇ ವಾಸ ಮಾಡುತ್ತಿದ್ದವು. ಜನರು ಕೊಡುವ ಆಹಾರದಿಂದಾಗಿ ಸುತ್ತಲಿರುವ ತೋಟಗಳಿಗೆ ಹೋಗುವುದನ್ನು ಮರೆತ್ತಿದ್ದವು. ಇದೀಗ ಕೋವಿಡ್ 19 ವೈರಸ್‌ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಂಪಿ ವಿರೂಪಾಕ್ಷೇಶ್ವರ, ಕೋದಂಡರಾಮ ದೇಗುಲ ಅಂಜನಾದ್ರಿ ಬೆಟ್ಟ, ಪಂಪಾಸರೋವರ ವಾಲೀಕಿಲ್ಲಾ ಆದಿಶಕ್ತಿ ಚಿಂತಾಮಣಿ ಮಠಗಳ ಬಾಗಿಲು ಹಾಕಲಾಗಿದ್ದು ಭಕ್ತರು ಆಗಮಿಸುವುದನ್ನು ನಿರ್ಬಂಧಿಸಲಾಗಿದೆ.

ಇದರಿಂದ ವಾರದಿಂದ ಇಲ್ಲಿರುವ ಕೋತಿಗಳು ಆಹಾರವಿಲ್ಲದಂತಾಗಿದೆ. ಇನ್ನೂ ಹಂಪಿ ಭಾಗದಿಂದ ತುಂಗಭದ್ರಾ ನದಿ ದಾಟಿ ಬರುವ ಕೋತಿಗಳಿಂದ ಇಲ್ಲಿಯ ಬಾಳೆ ತೋಟ ಮತ್ತು ಹಣ್ಣಿನ ಗಿಡಗಳನ್ನು ಸಂರಕ್ಷಣೆ ಮಾಡುವುದು ರೈತರಿಗೆ ಕಷ್ಟವಾಗುತ್ತಿದೆ. ಅಂಜನಾದ್ರಿಬೆಟ್ಟ , ಪಂಪಾ ಸರೋವರ, ಋಷಿಮುಖ, ಆದಿಶಕ್ತಿ ದೇಗುಲದ ಸುತ್ತಲು ನೂರಾರು ಕೋತಿಗಳಿದ್ದು ಅವುಗಳ ಆಹಾರಕ್ಕಾಗಿ ಚೀರುವ ಧ್ವನಿ ಮನ ಕಲುಕುತ್ತಿದೆ. ಇಲ್ಲಿ ಪುರಾತನ ವಿಜಯನಗರ ಕಾಲುವೆ ಹರಿಯುವುದರಿಂದ ಕುಡಿಯುವ ನೀರಿಗೆ ಅನುಕೂಲವಿದ್ದು ಆಹಾರಕ್ಕಾಗಿ ಕಷ್ಟಪಡುತ್ತಿವೆ. ದೇಗುಲ ಕಮಿಟಿಯವರು ಹಣ್ಣು ಅಥವಾ ಕೋತಿಗಳು ತಿನ್ನುವ ಆಹಾರವನ್ನು ಕೆಲ ದಿನಗಳವರೆಗೆ ಪೂರೈಕೆ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇನ್ನೂ ಸಂಘ ಸಂಸ್ಥೆಯವರು ಸಹ ಕೋತಿಗಳಿಗೆ ಆಹಾರ ಪೂರೈಕೆ ಮಾಡುವ ಮೂಲಕ ಮಾನವೀಯತೆ ತೋರಬೇಕಿದೆ.

 

-ಕೆ.ನಿಂಗಜ್ಜ

ಟಾಪ್ ನ್ಯೂಸ್

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.