ಗಂಗಾವತಿ: ಕೋವಿಡ್-19 ಸೋಂಕು ಪೀಡಿತ ನರ್ಸ್ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
Team Udayavani, Jun 22, 2020, 1:11 PM IST
ಗಂಗಾವತಿ: ಕೋವಿಡ್-19 ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇಲ್ಲಿಯ ಸರಕಾರಿ ಆಸ್ಪತ್ರೆಯ ಸ್ಟಾಫ್ ನರ್ಸ್ ಸೋಂಕಿನಿಂದ ಗುಣಮುಖರಾಗಿ ಸೋಮವಾರ ಬಿಡುಗಡೆಯಾಗಿ ಮನೆಗೆ ತೆರಳಿದರು.
ಕೋವಿಡ್ ಸೋಂಕಿನಿಂದ ಗುಣಮುಖರಾದ ಸ್ಟಾಪ್ ನರ್ಸ್ ಇವರಿಗೆ ಶಾಸಕ ಪರಣ್ಣ ಮುನವಳ್ಳಿ ಹಾಗೂ ಸರಕಾರಿ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ವರ್ಗದವರು ಹೂಗುಚ್ಛ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಕೋವಿಡ್ ರೋಗ ಕಾಣಿಸಿಕೊಂಡಿದ್ದ ನರ್ಸ್ ಗುಣಮುಖರಾಗಿದ್ದಾರೆ. ಅವರ 8 ತಿಂಗಳ ಮಗುವಿನ ಗಂಟಲು ದ್ರವ ಪಡೆದು ಪರೀಕ್ಷೆ ಮಾಡಲಾಗಿದ್ದು, ನೆಗೆಟಿವ್ ಬಂದಿದೆ. ತಾಯಿ ಮಗುವನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದರು.
ಭೌತಿಕ ಅಂತರ, ಸ್ಯಾನಿಟೈಜರ್ ಬಳಕೆ ಮತ್ತು ಜಾಗೃತಿಯಿಂದ ಇದ್ದರೆ ಕೋವಿಡ್-19 ರೋಗದಿಂದ ದೂರ ಇರಲು ಸಾಧ್ಯ. ಜನರು ಭಯಪಡಬಾರದು ಜಾಗೃತಿಯಿಂದ ಜೀವನ ನಡೆಸಬೇಕೆಂದರು.
ಡಾ.ಲಿಂಗರಾಜು, ಡಾ.ಸವಡಿ, ಡಾ.ಗೌರಿಶಂಕರ, ಡಾ.ಮಲ್ಲಿಕಾರ್ಜುನ ಸೇರಿ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ಉಪಸ್ಥಿತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು