ಕಡಿಮೆಯಾಯ್ತು ಕೊರೊನಾತಂಕ

2ನೇ ಅಲೆಯಲ್ಲಿ ಬರೀ ಕೊರೊನಾದ್ದೇ ಚರ್ಚೆ­ಸಹಜ ಸ್ಥಿತಿಗೆ ಮರಳುತ್ತಿದ್ದಾರೆ ಜಿಲ್ಲೆಯ ಜನ

Team Udayavani, Jun 18, 2021, 7:33 PM IST

story photo

ಕೊಪ್ಪಳ: ಎರಡು ತಿಂಗಳಿಂದ ಜಿಲ್ಲಾದ್ಯಂತ ಜನರ ಜೀವವನ್ನೇ ಹಿಂಡಿ ಹಿಪ್ಪಿ ಮಾಡಿದ್ದ ಕೊರೊನಾ ಎರಡನೇ ಅಲೆಯು ಕೊನೆಗೂ ತನ್ನ ಆರ್ಭಟ ಕಡಿಮೆ ಮಾಡಿದೆ. ಮನೆ ಮನೆಯಲ್ಲೂ ಕೊರೊನಾ ಸದ್ದು ಈಗ ಕಡಿಮೆಯಾಗುತ್ತಿದೆ.

ಜಿಲ್ಲೆಯ ಜನತೆ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೂ ಕೋವಿಡ್‌ ಕರಿ ನೆರಳು ಎಂದಿಗೂ ಮರೆಯದಂತಾಗಿದೆ. ಹೌದು. ಜಿಲ್ಲೆಯಲ್ಲಿ ಮೊದಲ ಅಲೆಯಲ್ಲಿ ಕೊರೊನಾ ಅಷ್ಟೊಂದು ಆತಂಕ ಸೃಷ್ಟಿಸಿರಲಿಲ್ಲ. ಮೊದಲು ಹೊಸ ವೈರಸ್‌ ಬಂದಿದೆ ಎನ್ನುವ ಆತಂಕದಲ್ಲಿದ್ದ ಜನರು ಕ್ರಮೇಣ ಸೋಂಕಿನ ಭಯ ಕಡಿಮೆ ಮಾಡಿಕೊಂಡು ನಿತ್ಯದ ಜೀವನದಲ್ಲಿ ತೊಡಗಿದ್ದರು. ಆದರೆ ಎರಡನೇ ಅಲೆಯ ಆರ್ಭಟ ನಿಜಕ್ಕೂ ಭಯಾನಕತೆ ಸೃಷ್ಟಿಸಿ ಜನರ ಜೀವನವನ್ನೇ ತಲ್ಲಣಗೊಳಿಸಿತು.

ಕಳೆದ ಏಪ್ರಿಲ್‌ ತಿಂಗಳಿಂದ ಆರ್ಭಟವಾದ ಕೋವಿಡ್‌ ಮಹಾಮಾರಿಯ ಎರಡನೇ ಅಲೆ ಬೇಸಿಗೆಯ ಆ ಎರಡು ತಿಂಗಳು ನಿಜಕ್ಕೂ ಜನರಿಗೆ ಕರಾಳ ದಿನಗಳೇ ಎನ್ನುವಂತೆ ಭಾಸವಾಗಿದ್ದವು. ಎಲ್ಲಿ ನೋಡಿದರಲ್ಲಿ ಕೊರೊನಾದ್ದೇ ಮಾತಾಗಿತ್ತು. ಕೊರೊನಾ ವಿಚಾರವೇ ಎಲ್ಲೆಡೆ ಚರ್ಚೆಗೆ ಬರುತ್ತಿತ್ತು. ಅಲ್ಲಿ ಸಾವು, ಇಲ್ಲಿ ಸಾವು ನಮ್ಮ ಮನೆಯ ಪಕ್ಕ ಸಾವು, ಇಷ್ಟು ಜನರಿಗೆ ಸೋಂಕು, ಬಡವರಿಗೆ ಊಟವಿಲ್ಲ ಎನ್ನುವ ನೋವಿನ ಮಾತುಗಳೇ ಕೇಳಿ ಬರುತ್ತಿದ್ದವು. ಏಲ್ಲಿ ನೋಡಿದರೂ ಬರಿ ಸಾವಿನ ಮನೆ ಎನ್ನುವ ಮಾತುಗಳು ಜನರ ನೆಮ್ಮದಿಯನ್ನೇ ಕಸಿದ್ದಿದ್ದವು.

ಎರಡು ತಿಂಗಳ ಬಳಿಕ ಜಿಲ್ಲೆಯಲ್ಲಿ ಕೋವಿಡ್‌ -19 ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಸಾವಿನ ಪ್ರಮಾಣವೂ ಕಡಿಮೆಯಾಗುತ್ತಿರುವುದು ಜನರಲ್ಲೂ ಸ್ವಲ್ಪ ನೆಮ್ಮದಿ ತರಿಸಿದೆ. ಮನೆ ಮನೆಯಲ್ಲೂ ಕೊರೊನಾ ಮಾತು ಸ್ವಲ್ಪ ಕಡಿಮೆಯಾಗುತ್ತಿವೆ. ಅಕ್ಕಪಕ್ಕದ ಮನೆಯವರು ಸ್ವಲ್ಪ ನೆಮ್ಮದಿಯಿಂದ ಹೊರಗಡೆ ಬಂದು ಕುಟುಂಬದ ಸದಸ್ಯರ ಯೋಗಕ್ಷೇಮ ಕೇಳುವಂತ ವಾತಾವರಣ ನಿರ್ಮಾಣವಾಗುತ್ತಿದೆ. ಜನರೀಗ ಬದುಕಿನ ಸಹಜ ಸ್ಥಿತಿಗೆ ಬರಲಾರಂಭಿಸಿದ್ದಾರೆ. ಆದರೆ ಜನರು ಮೈಮರೆತು ಎಲ್ಲೆಂದರಲ್ಲಿ ಸುತ್ತಾಟ ನಡೆಸಬಾರದು. ಸರ್ಕಾರದ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿದರೆ ಮಾತ್ರ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರಲು ಸಾಧ್ಯವಿದೆ. ಜಿಲ್ಲಾಡಳಿತವು ಈಗಷ್ಟೇ ಲಾಕ್‌ಡೌನ್‌ ನಿಯಮ ಸಡಿಲಿಕೆ ಮಾಡಿದೆ.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.