ಪ್ರವಾಸಿ ತಾಣದಲ್ಲಿಲ್ಲ ಕೋವಿಡ್ ಭಯ!

­ಮುನ್ನೆಚ್ಚರಿಕೆ ಇಲ್ಲದೇ ನಿತ್ಯವೂ ಸಾವಿರಾರು ಜನರ ಆಗಮನ! ­ಸಬ್‌ರಿಜಿಸ್ಟರ್‌ ಕಚೇರಿಯಲ್ಲಿಲ್ಲ ಸಾಮಾಜಿಕ ಅಂತರ

Team Udayavani, Apr 20, 2021, 8:29 PM IST

ghfghrr

ವರದಿ : ಕೆ.ನಿಂಗಜ್ಜ

ಗಂಗಾವತಿ: ಕೊರೊನಾ ಎರಡನೇ ಅಲೆ ಜೋರಾಗಿದ್ದು, ತಾಲೂಕಿನ ಪ್ರವಾಸಿ ಕೇಂದ್ರಗಳಾದ ಕಿಷ್ಕಿಂದಾ ಅಂಜನಾದ್ರಿ ಬೆಟ್ಟ ಪಂಪಾಸರೋವರ ಆನೆಗೊಂದಿಗೆ ನಿತ್ಯವೂ ಸಾವಿರಾರು ಜನ ಪ್ರವಾಸಿಗರು ಹನುಮಮಾಲಾಧಾರಿಗಳು ಕೋವಿಡ್ ಮುನ್ನೆಚ್ಚರಿಕೆಯ ಮಾರ್ಗಸೂಚಿ ಪಾಲನೆ ಮಾಡದೇ ಆಗಮಿಸುತ್ತಿದ್ದಾರೆ.

ಎಲ್ಲ ಪ್ರವಾಸಿ ಕೇಂದ್ರಗಳಲ್ಲಿ ಸ್ಥಳೀಯ ಆಡಳಿತವು ಕೊರೊನಾ ಮಾರ್ಗಸೂಚಿ ಪಾಲನೆ ಮತ್ತು ಸಾಮಾಜಿಕ ಅಂತರ ಕಾಪಾಡುವಂತೆ ಪ್ಲೇಕ್ಸ್‌ ಸೂಚನೆ ಹಾಕಿದ್ದರೂ ಇಲ್ಲಿಗೆ ಬರುವವರು ಇವುಗಳನ್ನು ಪಾಲನೆ ಮಾಡುವಲ್ಲಿ ಅಸಡ್ಡೆ ತೋರುತ್ತಿದ್ದಾರೆ.

ತಾಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟಕ್ಕೆ ದೂರ ಊರುಗಳಿಂದ ಶನಿವಾರ ಮತ್ತು ಮಂಗಳವಾರ ಸಾವಿರಾರು ಜನ ಹನುಮಭಕ್ತರು ಹಾಗೂ ಹನುಮಮಾಲಾಧಾರಿಗಳು ಆಗಮಿಸುತ್ತಿದ್ದಾರೆ. ಬೆಟ್ಟದ ಕೆಳಗೆ ವಾಹನ ಹಾಗೂ ಹಣ್ಣು ಹೂವು ತೆಂಗಿನಕಾಯಿ ಮಾರಾಟ ಮಾಡುವವರು ಅಧಿ ಕ ಸಂಖ್ಯೆಯಲ್ಲಿರುತ್ತಾರೆ. ಇಲ್ಲಿ ಯಾರೊಬ್ಬರೂ ಮಾಸ್ಕ್ ಧರಿಸುವುದಿಲ್ಲ. ಸ್ಯಾನಿಟೈಸರ್‌ ಸೇರಿ ಅಗತ್ಯ ಸುರಕ್ಷ ಕ್ರಮ ಇಲ್ಲದೇ ವ್ಯವಹಾರ ಮಾಡುತ್ತಾರೆ. ಇದರಿಂದ ಕೊರೊನಾ ರೋಗ ಹರಡುವ ಭಯ ಹೆಚ್ಚಾಗಿದೆ. ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ಸುಮಾರು 6 ತಿಂಗಳ ಕಾಲ ಅಂಜನಾದ್ರಿ ಬೆಟ್ಟ ಸೇರಿ ಇಲ್ಲಿಯ ಎಲ್ಲ ಪುಣ್ಯ ಕ್ಷೇತ್ರಗಳಿಗೆ ಜನರ ಪ್ರವೇಶ ನಿಷೇಧ ಮಾಡಲಾಗಿತ್ತು.

ಕಳೆದ ಭಾರಿ ಹನುಮ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಹನುಮಮಾಲಾಧಾರಿಗಳು ಅಂಜನಾದ್ರಿಗೆ ಆಗಮಿಸದೇ ತಮ್ಮ ತಮ್ಮ ಊರುಗಳಲ್ಲಿ ಮಾಲಾ ವಿಸರ್ಜನೆ ಮಾಡುವಂತೆ ಜಿಲ್ಲಾಡಳಿತ ಮನವಿ ಮಾಡಿತ್ತು. ಪುನಃ ಎರಡನೇ ಅಲೆ ಜೋರಾಗಿದ್ದು ಈಗಲೂ ಸಾವಿರಾರು ಯುವಕರು ಹನುಮಮಾಲೆ ಧರಿಸಿದ್ದು ಏ.27 ರಂದು ಹನುಮಜಯಂತಿ ಜರುಗಲಿದೆ. ಸಾವಿರಾರು ಹನುಮಮಾಲಾಧಾರಿಗಳು ಆಗಮಿಸುವ ನಿರೀಕ್ಷೆ ಇದೆ. ಈಗಾಗಲೇ ಹನುಮ ಭಕ್ತರು ಕಳೆದ ಭಾರಿ ಹನುಮಮಾಲಾಧರಿಗಳಿಗೆ ಅಂಜನಾದ್ರಿಯಲ್ಲಿ ಮಾಲೆ ವಿಸರ್ಜನೆಗೆ ಅವಕಾಶ ನೀಡಿರಲಿಲ್ಲ. ಈ ಬಾರಿ ಕೊರೊನಾ ಮಾರ್ಗಸೂಚಿ ಅನ್ವಯ ಅವಕಾಶ ಕಲ್ಪಿಸುವಂತೆ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಸಬ್‌ರಿಜಿಸ್ಟರ್‌, ನಗರಸಭೆಯಲ್ಲಿ ಜನಜಂಗುಳಿ: ಕೋವಿಡ್ ಎರಡನೇ ಅಲೆಯ ಮಧ್ಯೆದಲ್ಲೂ ಸಾರ್ವಜನಿಕರು ತಮ್ಮ ಸರಕಾರದ ಕೆಲಸ ಕಾರ್ಯಗಳಿಗೆ ಸಬ್‌ರಿಜಿಸ್ಟರ್‌, ತಹಶೀಲ್‌ ಕಚೇರಿ ಮತ್ತು ನಗರಸಭೆಗೆ ನಿತ್ಯವೂ ನೂರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದು ಕೊರೊನಾ ಮಾರ್ಗಸೂಚಿ ಅನುಸರಿಸುತ್ತಿಲ್ಲ. ಇದರಿಂದ ಕೊರೊನಾ ರೋಗ ಹರಡುವ ಸಂಭವವಿದ್ದು, ಕೊರೊನಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಗೆ ಕ್ರಮ ಅಗತ್ಯವಾಗಿದೆ.

ನರೇಗಾ ಕೂಲಿಕಾರರಲ್ಲಿ ಜಾಗೃತಿ: ತಾಲೂಕಿನ ಹಲವು ಗ್ರಾ.ಪಂಗಳ ವ್ಯಾಪ್ತಿಯ ಜನರಿಗೆ ಉದ್ಯೋಗಖಾತ್ರಿ ಯೋಜನೆಯಡಿ ಕೂಲಿ ಕೆಲಸವನ್ನು ಗ್ರಾ.ಪಂಗಳು ನೀಡುತ್ತಿವೆ. ಕೂಲಿಕಾರರು ತಮ್ಮ ಗ್ರಾಮಗಳಿಂದ ಕೆರೆ ಹೂಳೆತ್ತಲು ಬೇರೆ ಕಡೆ ಟ್ರಾÂಕ್ಟರ್‌ಗಳಲ್ಲಿ ಗುಂಪಾಗಿ ಕೊರೊನಾ ಮಾರ್ಗಸೂಚಿ ಇಲ್ಲದೇ ಮಾಸ್ಕ್ ಧರಿಸದೇ ಹೋಗುತ್ತಿರುವುದು ಕಂಡು ಬರುತ್ತಿದೆ. ಇಂತಹ ಪ್ರಕರಣಗಳು ಜರುಗದಂತೆ ಗ್ರಾ.ಪಂ ಪಿಡಿಒಗಳು ಸಂಬಂಧಪಟ್ಟವರು ಕೂಲಿಕಾರರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.