ಭಯ ಹುಟ್ಟಿಸಿದ ಸೋಂಕಿತರ ಓಡಾಟ
Team Udayavani, May 15, 2021, 9:14 PM IST
ತಾವರಗೇರಾ: ಸಮೀಪದ ಜುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡವಿಭಾವಿ ಗ್ರಾಮದಲ್ಲಿ ಕೊರೊನಾ ಸೋಂಕಿತರು ಗ್ರಾಮದಲ್ಲಿ ಓಡಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಭಯಭೀತಿರಾದ ಘಟನೆ ಜರುಗಿದೆ.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಭೇಟಿ ನೀಡಿದ ಗ್ರಾಪಂ ಲೆಕ್ಕಸಹಾಯಕ ಮುದೇಗೌಡ ಪುಂಡಗೌಡರ, ಮನೆಯಿಂದ ಅನಾವಶ್ಯಕವಾಗಿ, ಹೊರ ಬರದೇ ಆರೋಗ್ಯ ಇಲಾಖೆಯ ಆದೇಶ ಪಾಲಿಸಬೇಕು. ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಲಾಗುವುದು. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದರು.
ಗ್ರಾಮದ ಮೂರು ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಆರೋಗ್ಯ ಇಲಾಖೆಯವರು ಸೋಂಕಿತರನ್ನು ಹೋಂ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಿದ್ದು, ಸೋಂಕು ತಡೆಗೆ ಗ್ರಾಮದ ಎಲ್ಲ ರಸ್ತೆಗಳಿಗೂ ಸೋಂಕು ನಿವಾರಕ ದ್ರಾವಣವನ್ನು ಪಂಚಾಯಿತಿ ವತಿಯಿಂದ ಸಿಂಪಡಿಸಲಾಗುತ್ತದೆ ಎಂದು ಹೇಳಿದರು. ಕರ ವಸೂಲಿಗಾರ ಲಕ್ಷ್ಮಣ ನಾಯಕ ಹಾಗೂ ಅಂಗನವಾಡಿ ಕಾರ್ಯಕರ್ತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ