ಕೋವಿಡ್ 19: ಗಂಟಲ ದ್ರವ ಮಾದರಿ ಸಂಗ್ರಹ ಕಿಯಾಸ್ಕ್ ಕೊಡುಗೆ
Team Udayavani, Apr 20, 2020, 9:47 PM IST
ಗಂಗಾವತಿ: ಕೋವಿಡ್-19 ರೋಗ ಲಕ್ಷಣವಿರುವ ವ್ಯಕ್ತಿಗಳ ಗಂಟಲ ದ್ರವ ಮಾದರಿ ಸಂಗ್ರಹ ಬೂತ್ ನ್ನು ಯುವ ಕಾಂಗ್ರೆಸ್ ಮುಖಂಡ ಅಸೀಫ್ ಅಲಿ ಅವರು ಸರಕಾರಿ ಉಪ ವಿಭಾಗ ಆಸ್ಪತ್ರೆಗೆ ದೇಣಿಗೆಯಾಗಿ ನೀಡಿದ್ದಾರೆ.
ಕೋವಿಡ್-19 ರೋಗ ಲಕ್ಷಣಗಳಿರುವ ಜನರ ಗಂಟಲು ದ್ರವ ಸಂಗ್ರಹ ಮಾಡುವ ಸಂದರ್ಭದಲ್ಲಿ ವೈದ್ಯರು ಪ್ರಯೋಗಾಲಯದ ಸಿಬ್ಬಂದಿ ಮಾದರಿ ಸುರಕ್ಷಿತ ಬೂತ್ ನಲ್ಲಿ ನಿಂತು ವೈಜ್ಞಾನಿಕ ರೀತಿಯಲ್ಲಿ ಕೈಗಳಿಗೆ ಗ್ಲೌಸ್ ಮತ್ತು ಮುಖಕ್ಕೆ ರಕ್ಷಾ ಕವಚ ಧರಿಸಿ ಗಂಟಲು ದ್ರವ ಸಂಗ್ರಹ ಮಾಡುವುದರಿಂದ ವೈದ್ಯರು ಮತ್ತು ಸಿಬ್ಬಂದಿಯವರಿಗೆ ಕೋವಿಡ್-19 ರೋಗದ ಸೋಂಕು ತಗಲುವ ಭಯ ಇರುವುದಿಲ್ಲ.
ಯುವ ಕಾಂಗ್ರೆಸ್ ಮುಖಂಡ ಅಸೀಫ್ ಅಲಿ ಹಾಗೂ ಗೆಳೆಯರು ಇದನ್ನು ಕೊಡುಗೆಯಾಗಿ ನೀಡಿದ್ದು ಇದಕ್ಕೆ45 ಸಾವಿರ ರೂಪಾಯಿ ವೆಚ್ಚ ತಗುಲಿದೆ. ಕೋವಿಡ್ ವೈರಸ್ ನಿಯಂತ್ರಣ ಮಾಡಲು ಎಲ್ಲರೂ ಜಾತಿ-ಮತಗಳ ಬೇಧವಿಲ್ಲದೆ ಸರಕಾರದ ಜತೆ ಕೈಜೋಡಿಸುವ ಮೂಲಕ ಸಹಕಾರ ನೀಡಬೇಕು ಎಂದು ಅಸಿಫ್ ಆಲಿ ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
ಈ ಹೋರಾಟದಲ್ಲಿ ವೈದ್ಯರು ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತರು ಹೋಂಗಾರ್ಡ್ಸ್ ಮತ್ತು ಪೊಲೀಸರು ಯೋಧರಂತೆ ಕೆಲಸ ಮಾಡುತ್ತಿದ್ದು ಅವರ ಸುರಕ್ಷತೆ ಮತ್ತು ಆರೋಗ್ಯ ಕಾಪಾಡುವುದು ಎಲ್ಲ ಕರ್ತವ್ಯ. ತಾವು ಗೆಳೆಯರೆಲ್ಲಾ ಸೇರಿಕೊಂಡು ಗಂಟಲು ದ್ರವ ಸುರಕ್ಷಿತ ಸಂಗ್ರಹ ಕಿಟ್ ವಿತರಿಸಿದ್ದು ಸರ್ವರೂ ಕೋವಿಡ್-19 ಹೋರಾಟದಲ್ಲಿ ಕೈಜೋಡಿಸುವಂತೆ ಅಸೀಫ್ ಅಲಿ ಅವರು ಉದಯವಾಣಿಯ ಮೂಲಕ ಜನತೆಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು