Crocodile: ಕೆರೆ ಬಳಿ ಪತ್ತೆಯಾದ ಮೊಸಳೆಯನ್ನು ಸೆರೆ ಹಿಡಿದು ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು
ತುಂಗಭದ್ರಾ ಎಡದಂಡೆ ಕಾಲುವೆ ಸಾಣಾಪೂರ ಕೆರೆಯ ದಡದಲ್ಲಿ ಮೊಸಳೆ ಪ್ರತ್ಯಕ್ಷ
Team Udayavani, Nov 9, 2023, 9:39 AM IST
ಗಂಗಾವತಿ: ತುಂಗಭದ್ರಾ ಎಡದಂಡೆ ಕಾಲುವೆಯ ಸಾಣಾಪೂರ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರು ಮೊಸಳೆಯನ್ನು ಸಂರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ನಡೆದಿದೆ.
ಹಲವು ದಿನಗಳಿಂದ ಸಾಣಾಪೂರ ಕೆರೆಯ ತಟದಲ್ಲಿ ನಿತ್ಯವೂ ಮೊಸಳೆ ಪ್ರತ್ಯಕ್ಷವಾಗುತ್ತಿತ್ತು . ಕುರಿಗಾಯಿಗಳು, ದನ ಮೇಯಿಸುವವರು, ಪ್ರವಾಸಿಗರು ಮತ್ತು ಜಂಗ್ಲಿ, ರಂಗಾಪೂರಕ್ಕೆ ತೆರಳುವವರು ಭಯಭೀತಗೊಂಡಿದ್ದರು.
ಈ ಕುರಿತು ಗ್ರಾಮಸ್ಥರು ಅರಣ್ಯ ಮತ್ತು ಜಲಸಂಪನ್ಮೂಲ ಇಲಾಖೆಗಳ ಅಧಿಕಸರಿಗಳಿಗೆ ಮಾಹಿತಿ ನೀಡಿದ್ದರು. ಗುರುವಾರ ಬೆಳಗಿನ ಜಾವ ಕೆರೆಯ ತಟದಲ್ಲಿ ಮೊಸಳೆ ಮಲಗಿದ್ದನ್ನು ಕಂಡ ಕೃಷಿ ಕಾರ್ಯಕ್ಕೆ ತೆರಳುವವರು ಮತ್ತು ವಾಕಿಂಗ್ ಗೆ ಆಗಮಿಸಿದವರು ಸೇರಿ ಹಗ್ಗದಿಂದ ಮೊಸಳೆಯನ್ನು ಕಟ್ಟಿ ಹಾಕಿ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯವರು ಮೇಲಾಧಿಕಾರಿಗಳ ಆದೇಶದಂತೆ ಮೊಸಳೆಯನ್ನು ಬೇರೆಡೆ ಬಿಡಲಾಗುತ್ತದೆ ಎಂದು ಉದಯವಾಣಿ ಗೆ ತಿಳಿಸಿದ್ದಾರೆ.
ಇದನ್ನೂ ಓದಿ: Internet Ban: ನಿಲ್ಲದ ಹಿಂಸಾಚಾರ… ಮಣಿಪುರದಲ್ಲಿ ನ.13 ರವರೆಗೆ ಇಂಟರ್ನೆಟ್ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ