ಬೆಳೆ-ಮನೆ ಹಾನಿ ಪರಿಹಾರ: ತ್ವರಿತ ಕ್ರಮ ವಹಿಸಿ

ದಿಶಾ ಸಮಿತಿ ಸಭೆಯಲ್ಲಿ ಸಂಸದ ಕರಡಿ ಸೂಚನೆ; ರಸ್ತೆ ಹಾನಿಯಾಗದಂತೆ ಭಾರೀ ವಾಹನ ಸಂಚಾರದ ಮೇಲೆ ನಿಗಾ

Team Udayavani, Oct 15, 2022, 4:50 PM IST

20

ಕೊಪ್ಪಳ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಕೃಷಿ, ತೋಟಗಾರಿಕೆ ಬೆಳೆ ಸೇರಿ ಮನೆಗಳಿಗೆ ಹಾನಿಯಾಗಿದೆ. ಈ ಕುರಿತು ಅಧಿಕಾರಿಗಳು ತ್ವರಿತಗತಿಯಲ್ಲಿ ಕ್ರಮ ವಹಿಸಿ ರೈತರಿಗೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ದಿಶಾ ಸಮಿತಿ ಅಧ್ಯಕ್ಷ ಹಾಗೂ ಸಂಸದ ಸಂಗಣ್ಣ ಕರಡಿ ಹೇಳಿದರು.

ಜಿಪಂ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ 2022-23ನೇ ಸಾಲಿನ 1ನೇ ಮತ್ತು 2ನೇ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ನಿರಂತರ ಸುರಿದ ಮಳೆಯಿಂದ ಹಾನಿಗೊಳಗಾದ ಕೃಷಿ-ತೋಟಗಾರಿಕೆ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ಕ್ರಮ ಒದಗಿಸಿ. ಬೆಳೆ ಹಾನಿ ಮಹಿತಿ ತಂತ್ರಾಂಶದಲ್ಲಿ ನಮೂದಿಸಿ, ರೈತರಿಗೆ ತ್ವರಿತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಸಾರ್ವಜನಿಕರಿಂದ ದೂರುಗಳು ಬರದಂತೆ ನೋಡಿಕೊಂಡು ಸಾರ್ವಜನಿಕರಿಗೆ ಯೋಜನೆ ಲಾಭ ತಲುಪಿಸಬೇಕು ಎಂದರು.

ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರದ ಮೇಲೆ ಸಾರಿ ಇಲಾಖೆ ಅಧಿಕಾರಿಗಳು ನಿಗಾವಹಿಸಬೇಕು. ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯ ರಸ್ತೆಗಳು ಹೆಚ್ಚಾಗಿ ಸಣ್ಣ ಗಾತ್ರದಲ್ಲಿದ್ದು, ಭಾರೀ ವಾಹನಗಳ ಹೆಚ್ಚಿನ ಓಡಾಟದಿಂದ ರಸ್ತೆಗಳು ಹಾಳಾಗುತ್ತವೆ. ನಿಗದಿತ ರಸ್ತೆಗಳಲ್ಲಿ ಮಾತ್ರ ಭಾರೀ ವಾಹನ ಸಂಚರಿಸುವ ವ್ಯವಸ್ಥೆಯಾಗಬೇಕು. ಆರ್‌ಟಿಒ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಗ್ರಾಮೀಣ ರಸ್ತೆಗಳ ಕಾಳಜಿ ವಹಿಸಿ ತ್ವರಿತ ಕ್ರಮ ವಹಿಸಬೇಕು ಎಂದರು.

ಜಿಲ್ಲೆಗೊಂದು ಸರ್ಕಾರಿ ಗೋಶಾಲೆ ಯೋಜನೆಯಡಿ ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲೆಗೂ ಒಂದು ಗೋಶಾಲೆ ಮಂಜೂರಾಗಿದೆ. ಗೋಶಾಲೆ ತ್ವರಿತವಾಗಿ ಉದ್ಘಾಟಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು. ಅಲ್ಲದೇ ಕೊಪ್ಪಳ ನಗರ ಸೇರಿದಂತೆ ವಿವಿಧ ನಗರ ಪ್ರದೇಶಗಳಲ್ಲಿ ಬಿಡಾಡಿ ದನಗಳ ಸಂಖ್ಯೆ ಹೆಚ್ಚಾಗಿ, ಜನರ ಓಡಾಟ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದು, ಪಶು ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆ ಸೇರಿ ಬಿಡಾಡಿ ದನಗಳನ್ನು ಗೋಶಾಲೆಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ| ಎಚ್‌. ನಾಗರಾಜ ಮಾತನಾಡಿ, ಚರ್ಮಗಂಟು ರೋಗ ಸಾಂಕ್ರಾಮಿಕವಾಗಿದ್ದು, “ಕ್ಯಾಪ್ರಿ ಫಾಕ್ಸ್‌’ ಎಂಬ ವೈರಾಣುವಿನಿಂದ ದನ-ಎಮ್ಮೆಗಳಲ್ಲಿ ಕಂಡುಬರುತ್ತದೆ. ಈ ರೋಗ ಕಚ್ಚುವ ಕೀಟಗಳಾದ ಸೊಳ್ಳೆ, ಉಣ್ಣೆ, ನೊಣ ಇತ್ಯಾದಿಗಳಿಂದ ತೀವ್ರವಾಗಿ ಹರಡುತ್ತದೆ. ರಾಜ್ಯಾದ್ಯಂತ ಹರಡಿದ ಚರ್ಮಗಂಟು ರೋಗಕ್ಕೆ ನಿರ್ದಿಷ್ಟ ಔಷಧ ಇಲ್ಲದಿದ್ದರೂ ಕುರಿ, ಮೇಕೆಗೆ ನೀಡುವ ಮೇಕೆ ಸಿಡುಬು ಲಸಿಕೆಯನ್ನೇ ಹಸು, ಎಮ್ಮೆ, ಕರು, ಕೋಣ, ಎತ್ತುಗಳಿಗೆ ನೀಡಲಾಗುತ್ತಿದೆ.

ಜಿಲ್ಲೆಯ ಒಟ್ಟು 2976 ಜಾನುವಾರುಗಳಲ್ಲಿ ರೋಗ ಕಾಣಿಸಿದ್ದು, ಈ ವರೆಗೂ ಒಟ್ಟು 55 ಜಾನುವಾರುಗಳು ಮೃತಪಟ್ಟಿವೆ. ರೋಗಗ್ರಸ್ಥ ಜಾನುವಾರುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ. ಚರ್ಮಗಂಟು ರೋಗ ಹತೋಟಿಗೆ ಬರುವ ಹಂತದಲ್ಲಿದೆ. ಸರ್ಕಾರಿ ಗೋಶಾಲೆ ಕಾಮಗಾರಿ ಪೂರ್ಣಗೊಂಡಿದ್ದು, ಸಂಪರ್ಕ ರಸ್ತೆ ಮಾತ್ರ ಅಭಿವೃದ್ಧಿಯಾಗಬೇಕಿದೆ. ಶೀಘ್ರ ಗೋಶಾಲೆ ಉದ್ಘಾಟನೆ ಮಾಡಲಾಗುವುದು ಎಂದರು.

ಸಭೆಯಲ್ಲಿ ಡಿಸಿ ಎಂ. ಸುಂದರೇಶ ಬಾಬು, ಜಿಪಂ ಸಿಇಒ ಫೌಜಿಯಾ ತರನ್ನುಮ್‌, ಎಡಿಸಿ ಸಾವಿತ್ರಿ ಬಿ.ಕಡಿ, ಜಿ.ಪಂ ಉಪ ಕಾರ್ಯದರ್ಶಿ ಸಮೀರ್‌ ಮುಲ್ಲಾ, ಯೋಜನಾ ನಿರ್ದೇಶಕ ಟಿ. ಕೃಷ್ಣಮೂರ್ತಿ ಸೇರಿದಂತೆ ದಿಶಾ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಕುರಿ, ಮೇಕೆ ಹಾಗೂ ದನಕರುಗಳು ರೈತರ ಆಸ್ತಿಯಾಗಿದ್ದು, ಅವುಗಳನ್ನು ರಕ್ಷಿಸಬೇಕಿದೆ. ದನಕರುಗಳಲ್ಲಿ ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿದ್ದು, ರೋಗ ನಿಯಂತ್ರಣಕ್ಕೆ ಪಶುಪಾಲನಾ ಇಲಾಖೆ ಕ್ರಮ ಕೈಗೊಳ್ಳುವ ಜೊತೆಗೆ ರೈತರಲ್ಲಿ ಜಾಗೃತಿ ಮೂಡಿಸಬೇಕು.  –ಸಂಗಣ್ಣ ಕರಡಿ, ಸಂಸದ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.