ಹಣ ತುಂಬಿದ ಎಲ್ಲರಿಗೂ ಬೆಳೆವಿಮೆ ದೊರಕಿಸಿ


Team Udayavani, Jun 26, 2021, 11:09 AM IST

ಹಣ ತುಂಬಿದ ಎಲ್ಲರಿಗೂ ಬೆಳೆವಿಮೆ ದೊರಕಿಸಿ

ಕೊಪ್ಪಳ: ಹಣ ತುಂಬಿದ ಎಲ್ಲ ರೈತರಿಗೆ ಬೆಳೆ ವಿಮೆ ಸಿಗಬೇಕು. ಆಧಾರ್‌ ಸೇರಿದಂತೆ ಎಲ್ಲ ದಾಖಲೆಗಳು ಹೊಂದಾಣಿಕೆ ಆಗುವಂತೆ ಮಾಡಿ, ಇದರಲ್ಲಿ ಗ್ರಾಮ ಲೆಕ್ಕಾಧಿಕಾರಿಗಳನ್ನು ಬಳಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಭೀಮಾ ಯೋಜನೆ ಕುರಿತು ಶುಕ್ರವಾರ ಆಯೋಜಿಸಿದ್ದ ಬೆಳೆವಿಮೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಳೆವಿಮೆ ನೀಡುವ ವಿಮಾ ಸಂಸ್ಥೆಗಳು ರೈತರಿಂದ ಕಂತು ಪಾವತಿಗೆ ತೋರುವ ಆಸಕ್ತಿ ಬೆಳೆವಿಮೆ ನೀಡುವಲ್ಲಿ ತೋರಿಸುವುದಿಲ್ಲ. ಆದ್ದರಿಂದ ವಿಮಾ ಸಂಸ್ಥೆಗಳು ವಿಮೆ ಪಡೆಯುವ ಕುರಿತು ರೈತರಿಗೆ ಜಾಗೃತಿ ಮೂಡಿಸಬೇಕು. ಆಗ ಮಾತ್ರ ಹೆಚ್ಚಿನ ರೈತರು ಬೆಳೆವಿಮೆಗೆ ನೋಂದಣಿ ಮಾಡಿಕೊಳ್ಳುತ್ತಾರೆ. ವಿಮಾ ಕಂತನ್ನು ಸಹ ಪಾವತಿ ಮಾಡುತ್ತಾರೆ. ಆದರೆ ಬೆಳೆ ನಷ್ಟವಾದಾಗ ಅದಕ್ಕೆ ತಕ್ಕ ವಿಮೆಯನ್ನು ಬಹಳಷ್ಟು ರೈತರು ಪಡೆಯುವುದಿಲ್ಲ. ಕೃಷಿ ಇಲಾಖೆ ಸಿಬ್ಬಂದಿ, ತಹಶೀಲ್ದಾರ್‌ರು ಈ ಬಗ್ಗೆ ರೈತರಿಗೆ ಅಗತ್ಯ ಮಾಹಿತಿ ನೀಡಿ, ವಿಮೆ ಮೊತ್ತ ಪಡೆಯಲು ಸಹಾಯ ಮಾಡಬೇಕು ಎಂದರು.

ಬೆಳೆವಿಮೆ ಕುರಿತಾಗಿ ಬೆಳೆ ಸಮೀಕ್ಷೆಗೆ ನಿಯೋಜಿಸಿದ ಮೂಲ ಕಾರ್ಯಕರ್ತರೇ ಕಡ್ಡಾಯವಾಗಿ ಜಮೀನಿಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಬೇಕು. ಈ ವೇಳೆ ವಿಮಾ ಕಂಪನಿಯ ಪ್ರತಿನಿಧಿ ಗಳೂ ಹಾಜರಿರಬೇಕು. ಗ್ರಾಮದ ರೈತ ಮುಖಂಡರು ಸಮೀಕ್ಷೆಯ ಮೂಲ ಕಾರ್ಯಕರ್ತರೊಂದಿಗೆ ರೈತರ ಜಮೀನಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ, ಬೆಳೆವಿಮೆ ಪಡೆಯುವ ವಿಧಾನದ ಕುರಿತು ರೈತರಿಗೆ ಅರಿವು ಮೂಡಿಸಬೇಕು. ಬೆಳೆ ಸಮೀಕ್ಷೆಗೆ ಹೋದಾಗ ಕನಿಷ್ಟ ಸೌಲಭ್ಯಗಳನ್ನು ಬಳಸಿಕೊಂಡು ಸಾಧಾರಣ ಬೆಳೆ ಬೆಳೆಯುವ ರೈತರನ್ನು ಗುರುತಿಸಬೇಕು. ಅರ್ಹ ರೈತರಿಗೆಬೆಳೆವಿಮೆ ಲಾಭ ದೊರೆಯುವಂತಾಗಬೇಕು ಎಂದರು.

ಜಿಲ್ಲೆಯಲ್ಲಿ ಬೆಳೆ ವಿಮೆಗಾಗಿ ಫ್ಯೂಚರ್‌ ಜನರಲ್‌ ವಿಮಾ ಸಂಸ್ಥೆ ಆಯ್ಕೆಯಾಗಿದ್ದು, ಬೆಳೆ ಸಮೀಕ್ಷೆ ವೇಳೆ ಮೂಲ ಕಾರ್ಯಕರ್ತರು, ಕೃಷಿ ಇಲಾಖೆ, ಕಂದಾಯ ಇಲಾಖೆ, ಗ್ರಾಮ, ಹೋಬಳಿ ಮಟ್ಟದ ಅಧಿಕಾರಿಗಳ ಜಂಟಿ ಸಮೀಕ್ಷೆಯಲ್ಲಿ ವಿಮಾ ಸಂಸ್ಥೆ ಪ್ರತಿನಿಧಿಗಳು ಭಾಗವಹಿಸಬೇಕು. ವಿಮೆ ಕುರಿತು ರೈತರಿಗೆ ಸರಿಯಾದ ಮಾಹಿತಿ ನೀಡಬೇಕು ಎಂದರು.

ಜಂಟಿ ಕೃಷಿ ನಿರ್ದೇಶಕ ಶಿವಕುಮಾರ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಕಳೆದ ವರ್ಷ 83 ಸಾವಿರ ಜನರು ಪ್ರಿಮಿಯಂ ಹಣ ತುಂಬಿದ್ದರು. ಈ ವರ್ಷ ಜೂ. 25ರವರೆಗೆ 3,103 ರೈತರು ಪ್ರಿಮಿಯಂ ಹಣ ತುಂಬಿದ್ದಾರೆ. ಬೆಳೆವಿಮೆ ನೋಂದಾಯಿಸಲು ಇನ್ನೂ ಕಾಲಾವಕಾಶವಿದ್ದು, ರೈತರು ಬೆಳೆವಿಮೆ ನೋಂದಾಯಿಸಿಕೊಳ್ಳಬೇಕು. ಫ್ಯೂಚರ್‌ ಜನರಲ್‌ ವಿಮಾಸಂಸ್ಥೆಯು ಕೊಪ್ಪಳ ಹೊಸಪೇಟೆ ರಸ್ತೆಯ ನಸ್ವಾಲೆ ಬಿಲ್ಡಿಂಗ್‌ನ ಮೊದಲನೇ ಮಹಡಿಯಲ್ಲಿ (ಮೊ.9591238940) ಕಾರ್ಯನಿರ್ವಹಿಸುತ್ತಿದೆ. ರೈತರು ಈ ವಿಳಾಸದಲ್ಲಿ ಪ್ರತಿನಿಧಿ  ಗಳನ್ನು ಭೇಟಿ ಮಾಡಬಹುದು ಎಂದರು. ಕಾರ್ಯಕರ್ತರಿಗೆ ಮೊಬೈಲ್‌: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆಗೆ ಸಂಬಂ ಧಿಸಿದಂತೆ ಬೆಳೆ ಕಟಾವು ಸಮೀಕ್ಷೆ ಕೈಗೊಳ್ಳುವ ಮೂಲ ಕಾರ್ಯಕರ್ತರಿಗೆ ಮೊಬೈಲ್‌ ವಿತರಿಸಲಾಯಿತು.

ಜಿಲ್ಲಾ ಸಾಂಖ್ಯೀಕ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಕೃಷಿ ಇಲಾಖೆ ಉಪನಿರ್ದೇಶಕ ಸಿದ್ದೇಶ್ವರ ಇತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.