ಬೆಳೆವಿಮಾ: ರೈತರಿಗಿಂತ ಕಂಪನಿಗೆ ಹೆಚ್ಚು ಲಾಭ

ರಾಜ್ಯಾದ್ಯಂತ ಜಿಲ್ಲೆಗಳ ಅಂಕಿ ಅಂಶಗಳ ಲೆಕ್ಕಾಚಾರವೇ ಬೇರೆ ಇದೆ.

Team Udayavani, Jul 5, 2023, 6:34 PM IST

ಬೆಳೆವಿಮಾ: ರೈತರಿಗಿಂತ ಕಂಪನಿಗೆ ಹೆಚ್ಚು ಲಾಭ

ಕೊಪ್ಪಳ: ಕೇಂದ್ರ ಸರ್ಕಾರವು ರೈತರ ಬೆಳೆ ಭದ್ರತೆಗೆ ಜಾರಿ ತಂದಿರುವ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ರೈತರಿಗೆ ಒಂದು ರೀತಿಯ ವರದಾನವಾಗುತ್ತದೆ ಎನ್ನುವ ಮಾತು ಕೇಳಿ ಬಂದರೂ ರೈತರಿಂತ ವಿಮಾ ಕಂಪನಿಗೇ ಹೆಚ್ಚು ಲಾಭವಾಗಿರುವುದು ಜಿಲ್ಲೆಗೆ ಬಂದ ಬೆಳೆ ವಿಮೆ ಪರಿಹಾರ ಮೊತ್ತದ ಅಂಕಿ ಅಂಶಗಳಿಂದ ಗೋಚರವಾಗುತ್ತಿದೆ.

ಹೌದು. ಕೇಂದ್ರದಲ್ಲಿ 2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಕ್ಷಣ ರೈತರ ಬೆಳೆಗೆ ಭದ್ರತೆ ಒದಗಿಸಬೇಕೆಂಬ ಸದುದ್ದೇಶದಿಂದ ಪ್ರಧಾನ ಮಂತ್ರಿ ಫಸಲ್‌ ಬಿಮಾ ಯೋಜನೆ ಜಾರಿಗೊಳಿಸಿ ವಿಮಾ ಕಂಪನಿಗಳ ಮೂಲಕ ವಿಮೆ ಕೊಡಿಸಲು ವಿಮಾ ಯೋಜನೆ ಜಾರಿಗೊಳಿಸಿತು. ಈ ಯೋಜನೆ ಆರಂಭದಲ್ಲಿ ರೈತರಿಗೆ ಹೆಚ್ಚು ವರದಾನವಾಗುತ್ತದೆ ಎಂದರೂ ಕಂಪನಿಗಳಿಗೆ ಕೋಟಿ ಕೋಟಿ ಲಾಭವಾಗಿರುವುದು ಎಲ್ಲರ ಗಮನ ಸೆಳೆದಿದೆ.

ಕೊಪ್ಪಳ ಜಿಲ್ಲೆಯಲ್ಲಿನ ಅಂಕಿ ಅಂಶಗಳೇ ಇದನ್ನು ಸಾರಿ ಸಾರಿ ಹೇಳುತ್ತಿವೆ. ಜಿಲ್ಲಾಡಳಿತ ಆರಂಭದಲ್ಲಿ ಮುಂಗಾರು ಹಂಗಾಮು ಹಾಗೂ ಹಿಂಗಾರು ಹಂಗಾಮಿನಲ್ಲಿ ಬೆಳೆಗಾಗಿ ರೈತರ ಬೆಳೆವಿಮೆ ಪಾವತಿಸಲು ತುಂಬಾ ಆಸಕ್ತಿ ವಹಿಸಿ ವಿಮಾ ನೋಂದಣಿ ಮಾಡಿಸುವ ಕೆಲಸವನ್ನು ಮಾಡಿಸುತ್ತ ಬಂದಿದೆ. ಈ ವಿಮೆ ಯೋಜನೆಯಲ್ಲಿ ರೈತರ ಪಾಲು, ರಾಜ್ಯ ಸರ್ಕಾರದ ಪಾಲು, ಕೇಂದ್ರ ಸರ್ಕಾರದ ವಿಮಾ ಮೊತ್ತದ ಪಾಲನ್ನು ವಿಮಾ ಕಂಪನಿಗೆ ಪಾವತಿ ಮಾಡುತ್ತದೆ.

ಒಂದು ವೇಳೆ ಜಿಲ್ಲೆಯಲ್ಲಿ ಅತಿವೃಷ್ಟಿ, ಅನಾವೃಷ್ಟಿ ಸಂಭವಿಸಿದಲ್ಲಿ ರೈತರ ಬೆಳೆ ಹಾನಿಗೆ ಪರಿಹಾರವಾಗಿ ವಿಮಾ ಕಂಪನಿ ರೈತನ ವಿಮೆ ಪಾವತಿ ಮಾಡುತ್ತದೆ. ಕೊಪ್ಪಳ ಜಿಲ್ಲೆಯಲ್ಲಿ 2016-17ರಿಂದ 2022-23ನೇ ಸಾಲಿನ ವರೆಗೂ ಕಳೆದ ಏಳು ವರ್ಷದಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮು ಸೇರಿದಂತೆ ರೈತರ ವಂತಿಕೆ 68 ಕೋಟಿ ರೂ ಆಗಿದ್ದರೆ, ರೈತರ ಪರ ರಾಜ್ಯ ಸರ್ಕಾರ 339 ಕೋಟಿ ರೂ., ಕೇಂದ್ರ ಸರ್ಕಾರ 337 ಕೋಟಿ ರೂ. ವಿಮಾ ಮೊತ್ತವನ್ನು ಕಳೆದ 7 ವರ್ಷದಲ್ಲಿ ವಿಮಾ ಕಂಪನಿಗೆ ಪಾವತಿ ಮಾಡಿದೆ.

ರೈತರ ವಂತಿಗೆ, ರಾಜ್ಯ ಹಾಗೂ ಕೇಂದ್ರದ ವಂತಿಕೆ ಸೇರಿ ಒಟ್ಟು 745 ಕೋಟಿ ರೂ. ಹಣ ವಿಮಾ ಕಂಪನಿಗೆ ಇಲ್ಲಿಯವರೆಗೂ ಪಾವತಿಯಾಗಿದ್ದರೆ, ವಿಮಾ ಕಂಪನಿ ರೈತರ ಬೆಳೆ ಹಾನಿ ಪರಿಹಾರವಾಗಿ ಇಲ್ಲಿಯವರೆಗೂ 527 ಕೋಟಿ ರೂ. ಪರಿಹಾರ ಮೊತ್ತ ನೀಡಿದೆ. ಅಂದರೆ 07 ವರ್ಷದಲ್ಲಿ ರೈತರಿಗಿಂತ ವಿಮಾ ಕಂಪನಿಗೆ 218 ಕೋಟಿ ರೂ. ಉಳಿಕೆಯಾಗಿದೆ.

ಕೋಟಿ ಕೋಟಿ ರೂ. ಕಂಪನಿ ಪಾಲು :
ಸರ್ಕಾರವೇನೋ ವಿಮಾ ಕಂಪನಿಗಳಿಗೆ ರೈತರ ಬೆಳೆಗೆ ಭದ್ರತೆಯಾಗಿ ಕೋಟಿ ಕೋಟಿ ಅನುದಾನವನ್ನು ಪಾವತಿಸುತ್ತಿದೆಯೇನೋ ಸರಿ. ಆದರೆ ಇಲ್ಲಿ ರೈತರಿಗಿಂತ ವಿಮೆ ಕಂಪನಿಗೆ ಹೆಚ್ಚೆಚ್ಚು ಲಾಭ ಪಡೆಯುತ್ತಿರುವುದು ಹಲವು ರೀತಿಯಲ್ಲಿ ಚರ್ಚೆಗೆ ಎಡೆಮಾಡಿಕೊಟ್ಟಿದೆ.ಇದು ಕೇವಲ ಕೊಪ್ಪಳ ಜಿಲ್ಲೆಯದಷ್ಟೇ ವಿಮೆಯ ಲೆಕ್ಕಾಚಾರ. ರಾಜ್ಯಾದ್ಯಂತ ಜಿಲ್ಲೆಗಳ ಅಂಕಿ ಅಂಶಗಳ
ಲೆಕ್ಕಾಚಾರವೇ ಬೇರೆ ಇದೆ.

ದತ್ತು ಕಮ್ಮಾರ

ಟಾಪ್ ನ್ಯೂಸ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.