ಲಾಕ್‌ಡೌನ್‌ನಲ್ಲೂ ಬೆಳೆ ರಕ್ಷಿಸಿದ ರೈತ


Team Udayavani, Apr 21, 2020, 5:27 PM IST

ಲಾಕ್‌ಡೌನ್‌ನಲ್ಲೂ ಬೆಳೆ ರಕ್ಷಿಸಿದ ರೈತ

ಕೊಪ್ಪಳ: ಪ್ರಸ್ತುತ ಕೋವಿಡ್ 19 ವೈರಸ್‌ ನಿಂದಾಗಿ ರೈತರ ಬೆಳೆಗೆ ಮಾರುಕಟ್ಟೆ ಸಿಗದೆ ಸಂಕಷ್ಟ ಎದುರಾಗುತ್ತಿದೆ. ಆದರೆ ಇಲ್ಲೊಬ್ಬ ರೈತ ಲಾಕ್‌ಡೌನ್‌ನಂತಹ ಪರಿಸ್ಥಿತಿಯಲ್ಲೂ ತನ್ನ ಬೆಳೆಯನ್ನು ಸಂರಕ್ಷಣೆ ಮಾಡಿಕೊಂಡು ಮುಂದೆ ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದಾನೆ.

ಜಿಲ್ಲೆಯ ಯಲಬುರ್ಗಾ ತಾಲೂಕಿನ ಕಟಗಿಹಳ್ಳಿಯ ಕೃಷಿಕ ಭೀಮರಾವ್‌ ದೇಶಪಾಂಡೆ ಅವರು ತಮ್ಮ ಹೊಲದಲ್ಲಿ ಬೆಳೆದಿರುವ ದ್ರಾಕ್ಷಿಯನ್ನು ಹಾಳಾಗದಂತೆ ಹೊಲದಲ್ಲಿಯೇ ಶೆಡ್‌ಗಳಲ್ಲಿ ಸಂಗ್ರಹಣೆ ಮಾಡಿ ಸಂರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ. ಕೋವಿಡ್‌- 19ನಿಂದಾಗಿ ದೇಶದಾದ್ಯಂತ ಲಾಕ್‌ಡೌನ್‌ ಜಾರಿಯಾಗಿದೆ. ಆರಂಭಿಕ ದಿನದಿಂದ ಇವರೆಗೂ ರೈತ ತನ್ನ ಉತ್ಪ ನ್ನವನ್ನು ಮಾರುಕಟ್ಟೆಗೆ ಸಾಗಾಟ ಮಾಡಲು ನೂರೆಂಟು ಕಷ್ಟ ಎದುರಿಸುತ್ತಿದ್ದಾನೆ. ರಸ್ತೆಗಳಲ್ಲಿ ತಮ್ಮ ವಾಹನಗಳ ಸಂಚಾರಕ್ಕೂ ಅಡ್ಡಿಯಾಗುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಮಾರುಕಟ್ಟೆಯಲ್ಲಿ ತಮ್ಮ ಬೆಳೆಗೆ ಬೆಲೆಯೂ ಸಿಗುತ್ತಿಲ್ಲ. ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದ್ದರೂ ಖರೀದಿದಾರರು ರೈತರ ಉತ್ಪನ್ನವನ್ನು ಬೇಕಾಬಿಟ್ಟಿ ದರಕ್ಕೆ ಕೇಳುತ್ತಿದ್ದಾರೆ. ಇದರಿಂದ ಅನ್ನದಾತನಿಗೆ ಸಂಕಷ್ಟ ಎದುರಾಗುತ್ತಲೇ ಇವೆ.

ಹೀಗಾಗಿ ತಮ್ಮ ಜಮೀನಿನಲ್ಲಿ ಬೆಳೆ ಸಂರಕ್ಷಣೆಗೆ ಹರಸಾಹಸ ಪಡುವಂತಾಗಿದೆ. ಭೀಮರಾವ್‌ ದೇಶಪಾಂಡೆ ಅವರು ತಮ್ಮ ಗ್ರಾಮದಲ್ಲಿ 3 ಎಕರೆ ಜಮೀನಿನಲ್ಲಿ ಸೋನಾಕಾ ಹಾಗೂ ಇತರೇ ತಳಿಯ ದ್ರಾಕ್ಷಿ ಬೆಳೆದಿದ್ದಾರೆ. 2016 ರಲ್ಲಿ ದ್ರಾಕ್ಷಿ ಬೆಳೆಯಲು ಕ್ರಮ ಕೈಗೊಂಡಿದ್ದು, ಕಳೆದ ವರ್ಷ 10 ಲಕ್ಷಕ್ಕೂ ಅಧಿಕ ಆದಾಯ ಪಡೆದಿದ್ದರು. ಆದರೆ ಈ ಸಾರಿ ಹವಾಮಾನ ವೈಪರೀತ್ಯದಿಂದಾಗಿ ದ್ರಾಕ್ಷಿ ಬೆಳೆ ತಡವಾಗಿ ಕಟಾವಿಗೆ ಬಂದಿದೆ.

ಬೇಡಿಕೆ ಇರದೆ ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟದಲ್ಲಿದ್ದರು. ಇದಲ್ಲದೇ ಕೋವಿಡ್ 19  ಮಹಾಮಾರಿಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಯಿತು. ಈ ವೇಳೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಲಿಂಗನಗೌಡ ಪೊಲೀಸ್‌ ಪಾಟೀಲ್‌ ಅವರ ಮುಂದೆ ತಮ್ಮ ಸಮಸ್ಯೆ ಪ್ರಸ್ತಾಪ ಮಾಡಿದ್ದಾರೆ. ಪಾಟೀಲರು ರೈತರಿಗೆ ಒಣದ್ರಾಕ್ಷಿ ಮಾಡುವ ಶೆಡ್‌ ನಿರ್ಮಿಸಿಕೊಂಡು ಮೌಲ್ಯವರ್ಧನೆಮಾಡಿದರೆ ವರ್ಷಾನುಗಟ್ಟಲೇ ಶೇಖರಿಸಿಟ್ಟು ಉತ್ತಮ ಬೆಲೆ ಬಂದಾಗ ಮಾರಿಕೊಂಡು ಉತ್ತಮ ಲಾಭ ಗಳಿಸಬಹುದು ಎಂದು ಸಲಹೆ ನೀಡಿದ್ದಾರೆ. ಹಾಗಾಗಿ ಭೀಮರಾವ್‌ ಅವರು ಮಣೂಕ ಮಾಡುವ ವಿಧಾನವನ್ನು ಕೃಷಿ ವಿಸ್ತರಣಾ ಶಿಕ್ಷಣಾ ಕೇಂದ್ರದ ವಿಜ್ಞಾನಿಗಳಿಂದ ಹಾಗೂ ಹಿರೇವಡ್ರಕಲ್‌ ಗ್ರಾಮದ ರೈತ ಬಸವರಾಜ ಕಾಡಾಪುರ ಮಾರ್ಗದರ್ಶನದಲ್ಲಿ ಈ ಬಗ್ಗೆ ತಿಳಿದುಕೊಂಡು ಕೂಡಲೇ ಕಾರ್ಯಪ್ರವೃತ್ತರಾಗಿದ್ದಾರೆ.

ಈ ವೇಳೆ ಹಣಕಾಸಿನ ಅಭಾವವಿದ್ದರೂ ಸಾಲ ಮಾಡಿ ಹಿರೇವಂಕಲಕುಂಟಾ ಹೋಬಳಿಯ ತೋಟಗಾರಿಕೆ ಅಧಿಕಾರಿ ಮಾಬುಸಾಬ ಪಾಟೀಲ್‌ ಅವರ ಮಾರ್ಗದರ್ಶನದಲ್ಲಿ ಮಣೂಕ ಶೆಡ್‌ ನಿರ್ಮಾಣ ಮಾಡಿಕೊಂಡು ಏಪ್ರಿಲ್‌ ಮೊದಲ ವಾರದಲ್ಲಿ ಹಣ್ಣುಗಳನ್ನು ಕಟಾವು ಮಾಡಿ ಒಣ ದ್ರಾಕ್ಷಿ ಮಾಡಲು ಸಿದ್ಧಪಡಿಸಿದ್ದಾರೆ. ಸದ್ಯ ಒಣ ದ್ರಾಕ್ಷಿ ಸಿದ್ಧವಾಗಿದ್ದು, ವರ್ಗಿಕರಿಸಿ ಪ್ಯಾಕಿಂಗ್‌ ಮಾಡಿ ಶೈತ್ಯಾಗಾರದಲ್ಲಿ ಇಟ್ಟಲ್ಲಿ ಉತ್ತಮ ಬೆಲೆ ಬಂದಾಗ ಮಾರಾಟ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ದ್ರಾಕ್ಷಿ ಬೆಳೆ ಮಾರುಕಟ್ಟೆ ಇಲ್ಲದೇ ಸಂಕಷ್ಟದಲ್ಲಿದ್ದೆ. ಆಗ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮಣೂಕಾ ಶೆಡ್‌ ನಿರ್ಮಿಸಿಕೊಂಡು ಒಣ ದ್ರಾಕ್ಷಿ ಮಾಡಲು ಸಲಹೆ ನೀಡಿದರು. ಅದರಂತೆ ನಾನು ಕಾರ್ಯಪ್ರವೃತ್ತನಾಗಿ ಸುಮಾರು 30 ಟನ್‌ನಷ್ಟು ದ್ರಾಕ್ಷಿ ಹಣ್ಣನ್ನು ಮಣೂಕ ಮಾಡಲು ನಿರ್ಧರಿಸಿದೆ. ಕೋವಿಡ್ 19 ಇದ್ದರೂ ನಮ್ಮ ಬೆಳೆ ಹಾನಿಯಾಗುತ್ತಿಲ್ಲ. ಅದನ್ನು ವೈಜ್ಞಾನಿಕವಾಗಿ ಸಂರಕ್ಷಣೆ ಮಾಡಿಕೊಳ್ಳುತ್ತಿದ್ದೇನೆ. ಈ ಸದ್ಯ 5 ರಿಂದ 6 ಟನ್‌ ಒಣ ದ್ರಾಕ್ಷಿ ಸಿದ್ಧವಾಗಿದ್ದು, ಮುಂಬರುವ ದಿನಗಳಲ್ಲಿ ಉತ್ತಮ ಬೆಲೆ ದೊರೆಯುವ ನಿರೀಕ್ಷೆಯಲ್ಲಿದ್ದೇನೆ. –ಭೀಮರಾವ್‌ ದೇಶಪಾಂಡೆ, ರೈತ

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ತೋಟಗಾರಿಕೆ ಇಲಾಖೆ ಕಾರ್ಯ ಶ್ಲಾಘನೀಯ. ರೈತರು ಬೆಳೆದ ತರಕಾರಿ ಹಣ್ಣುಗಳನ್ನು ಗ್ರಾಹಕರಿಗೆ ನೇರವಾಗಿ ತಲುಪಿಸುವಲ್ಲಿ ತೋಟಗಾರಿಕೆ ಇಲಾಖೆ ಅತ್ಯಂತ ಮಹತ್ವದ ಪಾತ್ರ ವಹಿಸಿ ರೈತರನ್ನು ಸಂಕಷ್ಟದಿಂದ ಕಾಪಾಡುವಲ್ಲಿ ಮುಂದಾಗಿದೆ.  -ಎಂ.ಬಿ. ಪಾಟೀಲ್‌, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ.

 

-ವಿಶೇಷ ವರದಿ

 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.