ಕೋಟಿ ದಾಟಿದ ಅಂಜನಾದ್ರಿಬೆಟ್ಟದ ಹುಂಡಿ ಹಣ
Team Udayavani, Jul 31, 2019, 12:38 PM IST
ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದೆ ಅಂಜನಾದ್ರಿ ಬೆಟ್ಟದ ಭಕ್ತರ ಹುಂಡಿ ಹಾಗೂ ಇತರೆ ದೇಣಿಗೆ ಸೇರಿ ಕಳೆದೊಂದು ವರ್ಷದಲ್ಲಿ ಒಂದು ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ.
ಸರ್ಕಾರದ ವ್ಯಾಪ್ತಿಗೆ ದೇವಾಲಯ ಒಳಪಟ್ಟ ನಂತರ ಪ್ರತಿಯೊಂದು ಕಾರ್ಯವನ್ನು ತಹಶೀಲ್ದಾರ್ ನೇತೃತ್ವದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ನಿರ್ವಹಿಸುತ್ತಿದ್ದಾರೆ. ಪ್ರತಿ ಎರಡ್ಮೂರು ತಿಂಗಳಿಗೊಮ್ಮೆ ಹುಂಡಿ ಎಣಿಕೆ ಮಾಡಿ ದೇವಾಲಯದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ.
ಕಳೆದ ಹಲವು ದಶಕಗಳಿಂದ ದೇವಾಲಯದ ಆಡಳಿತವನ್ನು ಆನೆಗೊಂದಿ ರಾಜಮನೆತನದವರು ನಿರ್ವಹಿಸುತ್ತಿದ್ದರು. ಹತ್ತು ವರ್ಷಗಳ ಹಿಂದೆ ದೇವಾಲಯದ ಧಾರ್ಮಿಕ ಕಾರ್ಯ ನಿರ್ವಹಿಸಲು ರಾಜವಂಶಸ್ಥರು ಮತ್ತು ಸ್ಥಳೀಯರು ಉತ್ತರ ಭಾರತದ ಮಹಾಂತ ವಿದ್ಯಾದಾಸ ಬಾಬಾ ಎನ್ನುವ ಅರ್ಚಕರನ್ನು ನೇಮಕ ಮಾಡಿದ ನಂತರ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಾಗಿವೆ. ಇಲ್ಲಿಯ ಧಾರ್ಮಿಕ ಕಾರ್ಯಗಳ ಕುರಿತು ವ್ಯಾಪಕ ಪ್ರಚಾರ ಆಗಿದ್ದರಿಂದ ಇಲ್ಲಿಗೆ ಆಗಮಿಸುವವರ ಸಂಖ್ಯೆ ದ್ವಿಗುಣಗೊಂಡಿದೆ. ಬಜರಂಗದಳ ಪ್ರತಿ ವರ್ಷ ಹನುಮಮಾಲೆ ಧಾರಣೆ ಕಾರ್ಯಕ್ರಮ ಆಯೋಜಿಸುವ ಮೂಲಕ ರಾಜ್ಯ, ಅಂತಾರಾಜ್ಯಗಳಿಂದ ಹನುಮಭಕ್ತರು ಇಲ್ಲಿಗೆ ಆಗಮಿಸುತ್ತಿದ್ದಾರೆ.
ಅಂಜನಾದ್ರಿ ಬೆಟ್ಟದ ಕುರಿತು ಮಹಾಭಾರತ, ರಾಮಾಯಣದಲ್ಲಿ ವಿವರಿಸಲಾಗಿದೆ. ಶ್ರೀರಾಮ ಲಕ್ಷ್ಮಣರು ವನವಾಸಕ್ಕಾಗಿ ಕಿಷ್ಕಿಂದೆ ಪ್ರದೇಶಕ್ಕೆ ಆಗಮಿಸಿದ್ದ ವೇಳೆ ಹನುಮಂತ ಇವರನ್ನು ಸುಗ್ರೀವನಿಗೆ ಪರಿಚಯಿಸಿದ್ದ. ವಾಲಿ-ಸುಗ್ರೀವರ ಯುದ್ಧ, ಶಬರಿ ಗುಹೆ, ಚಿಂತಾಮಣಿ ಹೀಗೆ ರಾಮಾಯಣದಲ್ಲಿ ಉಲ್ಲೇಖೀಸಿದ ಅನೇಕ ಸ್ಥಳಗಳು ಇಲ್ಲಿ ಕಂಡು ಬರುತ್ತವೆ. ದೇಶ-ವಿದೇಶಿಗರು ಪ್ರತಿ ದಿನ ಇಲ್ಲಿಗೆ ಭೇಟಿ ನೀಡುತ್ತಾರೆ.
ಮಾಲೀಕತ್ವದ ವಿವಾದ: ಅಂಜನಾದ್ರಿ ಬೆಟ್ಟದ ಮಾಲೀಕತ್ವ ತಮಗೆ ಸೇರಿದ್ದು ಎಂದು ಆನೆಗೊಂದಿ ರಾಜಮನೆತನ ಹಾಗೂ ಸ್ಥಳೀಯರು ವಾದಿಸುತ್ತಾರೆ. ಅರ್ಚಕರಾಗಿ ನೇಮಕಗೊಂಡಿದ್ದ ಮಹಾಂತ ವಿದ್ಯಾದಾಸ ಬಾಬಾ ಅವರು ತಾವು ಆಗಮಿಸಿದ ನಂತರ ಅಂಜನಾದ್ರಿ ಬೆಟ್ಟ ಅಭಿವೃದ್ಧಿಯಾಗಿದ್ದು, ತಾವೇ ಎಲ್ಲ ಆಡಳಿತ ನಡೆಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ರಾಜಮನೆತನದವರು ಮತ್ತು ಬಾಬಾನ ಭಕ್ತರ ನಡುವೆ ಗೊಂದಲವುಂಟಾಗಿತ್ತು. ಭಾರಿ ವಾದ-ವಿವಾದಗಳು ನಡೆದು ಪರಿಸ್ಥಿತಿ ವಿಕೋಪಕ್ಕೂ ಹೋಗಿತ್ತು. ಪೊಲೀಸ್, ಕಂದಾಯ ಇಲಾಖೆ ವರದಿ ಆಧರಿಸಿ 2018, ಜು.23ರಂದು ಜಿಲ್ಲಾಡಳಿತ ದೇವಾಲಯವನ್ನು ತನ್ನ ಸುಪರ್ದಿಗೆ ಪಡೆದು ತಹಶೀಲ್ದಾರ್ ಅವರನ್ನು ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ಮತ್ತು ಮುಜರಾಯಿ ಇಲಾಖೆಯ ಸಿ.ಎಸ್.ಚಂದ್ರಮೌಳಿ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್