ಬರಗಾಲದಲ್ಲೂ ಕ್ಷೀರ ಸಾಗರ 


Team Udayavani, Sep 22, 2018, 4:54 PM IST

22-sepctember-22.jpg

ಕುಷ್ಟಗಿ: ತಾಲೂಕಿನ ಚಳಗೇರಿ ಗ್ರಾಮದ ಮಹಿಳಾ ಹಾಲು ಉತ್ಪಾದಕ ಸಹಕಾರ ಸಂಘವು ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ವ್ಯಾಪ್ತಿಯಲ್ಲಿ 2017-18ನೇ ಸಾಲಿನ ಏಕೈಕ ಅತ್ಯುತ್ತಮ ಸಂಘ ಎಂಬ ಹೆಗ್ಗಳಿಗೆ ಪಾತ್ರವಾಗಿದೆ.

ತಾಲೂಕಿನ ಬರಗಾಲ ಎದುರಾಗಿದ್ದು, ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಇಂತಹ ಪರಿಸ್ಥಿತಿಯಲ್ಲೂ ಚಳಗೇರಿಯ ಮಹಿಳಾ ಹಾಲು ಉತ್ಪಾದಕರ ಸಹಕಾರ ಸಂಘವು ಗಣನೀಯ ಸಾಧನೆ ಮಾಡಿದೆ. ಬರಗಾಲದಲ್ಲೂ ಹಾಲಿನ ಉತ್ಪಾದನೆಯಲ್ಲಿ ಸೈ ಎನಿಸಿಕೊಂಡಿದೆ. ಕಳೆದ ಮೂರು ವರ್ಷಗಳಲ್ಲಿ ಈ ಸಂಘದ ಪ್ರತಿ ದಿನದ 1,100 ನಿಂದ 1,200 ಲೀಟರ್‌ ಹಾಲು ಉತ್ಪಾದನೆ ಮಾಡುತ್ತಿದೆ. 283 ಶೇರುದಾರರನ್ನು ಹೊಂದಿದ್ದು, ಇವರಲ್ಲಿ 131 ರೈತ ಕುಟುಂಬಗಳಿಗೆ ಹೈನುಗಾರಿಕೆ ಉಪಕಸುಬಾಗಿದೆ.

ಸಂಘಕ್ಕೆ ಹಾಲು ಉತ್ಪಾದಕ ಸದಸ್ಯರಿಗೆ ಪ್ರತಿ 15 ದಿನಕ್ಕೊಮ್ಮೆ ತಪ್ಪದೇ ಹಾಲಿನ ಮೊತ್ತವನ್ನು ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡುತ್ತಿದೆ. ಹಾಲು ಹಾಕುವವರಿಗೆ ಸಂಘದಿಂದ ಹಾಲಿನ ಪ್ರಮಾಣ ಆಧರಿಸಿ ಸ್ಟೀಲ್‌ ಕ್ಯಾನ್‌, ಬೋನಸ್‌ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಸಂಘ ಸ್ವಂತ ಕಟ್ಟಡ ಹೊಂದುವ ಅಭಿಲಾಷೆಯ ಹಿನ್ನೆಲೆಯಲ್ಲಿ 9,24,192 ರೂ. ಬೋನಸ್‌ ಹಣವನ್ನು ಸ್ವಂತಕ್ಕೆ ಬಳಸಿಕೊಳ್ಳದೇ ಕಟ್ಟಡದ ನಿಧಿಗೆ ಕಾಯ್ದಿರಿಸಿದೆ.

ಕುಷ್ಟಗಿ ತಾಲೂಕಿನಲ್ಲಿ ಹೈನೋದ್ಯಮಕ್ಕೆ ಉತ್ತೇಜನ ನೀಡಿ ಶ್ರೇಯಸ್ಸು ದಿ. ಗೋಪಾಲಪ್ಪಯ್ಯ ದೇಸಾಯಿ ಅವರಿಗೆ ಸಲ್ಲುತ್ತದೆ. ಅವರ ಇಚ್ಛಾಶಕ್ತಿಯ ಹಿನ್ನೆಲೆಯಲ್ಲಿ ಸ್ಟೆಪ್‌ (ಸಪೋರ್ಟ್‌ ಟ್ರೇನ್ಸ್‌ ಎಂಪ್ಲಾಯಿಮೆಂಟ್‌ ಪ್ರೋಗ್ರಾಂ) ಯೋಜನೆಯನ್ವಯ 2000-2001ರಲ್ಲಿ ಚಳಗೇರಾದಲ್ಲಿ ಮಹಿಳಾ ಸಂಘಟನೆ ಸ್ಥಾಪಿಸಿದ್ದು, ಆರಂಭದಲ್ಲಿ 50-60 ಲೀಟರ್‌ ಇದ್ದ ಹಾಲಿನ ಉತ್ಪಾದನೆ ಈಗ 1,200 ರಷ್ಟಾಗಿದೆ. ಅಲ್ಲದೇ ಇವರ ಹೆಸರು ಚಿರಸ್ಥಾಯಿಯಾಗಿ ಉಳಿಸುವ ಉದ್ದೇಶದಿಂದ ಅವರ ಪುತ್ರ ವೆಂಕಪ್ಪಯ್ಯ ದೇಸಾಯಿ ಅವರು, ಚಳಗೇರಾ ಗ್ರಾಮದಲ್ಲಿ ಎರಡು ಗುಂಟೆ ಜಾಗೆಯನ್ನು ದಾನವಾಗಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರವೇ ಸಂಘದ ಸ್ವಂತ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸಲಾಗುತ್ತದೆ. 

ಪ್ರತಿದಿನ 1,200 ಲೀಟರ್‌ ಹಾಲು ಉತ್ಪಾದಿಸುವ ಹಿನ್ನೆಲೆಯಲ್ಲಿ ಈ ಸಂಘಕ್ಕೆ ಸ್ವಂತ ಕಟ್ಟಡ ಹೊಂದಲು 2 ಗುಂಟೆ ಜಮೀನು ದಾನವಾಗಿ ಸಿಕ್ಕಿದೆ. ಇಲ್ಲಿನ ಹಾಲಿನ ಉತ್ಪಾದನೆ ಆಧರಿಸಿ ಬಿಎಂಸಿ (ಬಲ್ಕ ಮಿಲ್ಕ್ ಕೂಲರ್‌) ಆರಂಭಿಸುವ ಉದ್ದೇಶ ಹೊಂದಲಾಗಿದೆ.
∙ಬಸವರಾಜ್‌ ಯರದೊಡ್ಡಿ, ವಿಸ್ತೀರ್ಣಾಧಿಕಾರಿ ಕೆಎಂಎಫ್‌.

ಸಂಘದ ಶೇರುದಾರರಿಗೆ ಲಾಭಾಂಶ, ಹಾಲು ಹಾಕುವವರಿಗೆ ಬೋನಸ್‌ ನೀಡಲಾಗುತ್ತಿದೆ. ಸಂಘದ ನಿರ್ದೇಶಕರಿಗಾಗಿ ಅಧ್ಯಯನ ಪ್ರವಾಸ, ವೃತ್ತಿ ನೈಪುಣ್ಯತೆ ಹೆಚ್ಚಿಸಲು ತರಬೇತಿ ಕಾರ್ಯಕ್ರಮ, ಕೃಷಿ ಮೇಳಕ್ಕೆ ಕಳುಹಿಸಿ ಕಾರ್ಯಕ್ಷಮತೆ ಹೆಚ್ಚಿಸಲಾಗಿದೆ.
∙ಕಲಾವತಿ ಕೋನಾಪುರ,
ಹಾಲು ಉತ್ಪಾದಕರ ಮಹಿಳಾ ಸಂಘ
ಚಳಗೇರಿ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.