ಡ್ಯಾಂ ಭರ್ತಿಯಾದರೂ ಕೊನೆಯಾಗದ ರೈತರ ಕಷ್ಟ
ರೈತರ ಸಂಕಷ್ಟಕ್ಕೆ ಅಧಿಕಾರಿ-ಜನಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ
Team Udayavani, Aug 18, 2019, 1:37 PM IST
ಗಂಗಾವತಿ: ಎಡದಂಡೆ ಕಾಲುವೆಯ ಮೈಲ್ 28ರಲ್ಲಿ ದುರಸ್ತಿ ಕಾರ್ಯ ಭರದಿಂದ ಸಾಗಿದೆ.
ಗಂಗಾವತಿ: ಮುಂಗಾರು ಮಳೆ ತಡವಾಗಿ ಬಂದಿದ್ದರೂ ಜೀವನಾಡಿ ತುಂಗಭದ್ರಾ ಡ್ಯಾಂ ಭರ್ತಿಯಾಗಿ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಗೆ ಬಿಡಲಾಗುತ್ತಿದೆ. ಅಧಿಕಾರಿಗಳ ಮತ್ತು ಜನಪ್ರತಿನಿಧುಗಳ ನಿರ್ಲಕ್ಷ್ಯದಿಂದ ಎಡದಂಡೆ ಕಾಲುವೆ ವ್ಯಾಪ್ತಿಯ ರೈತರು ಇನ್ನೂ ಯಾವುದೇ ಕೃಷಿ ಚಟುವಟಿಕೆ ನಡೆಸದೇ ಕಾಲುವೆಗೆ ಯಾವಾಗ ನೀರು ಹರಿಸುತ್ತಾರೆಂದು ಕಾಯುತ್ತಿದ್ದಾರೆ.
ಆಗಸ್ಟ್ ಮೊದಲ ವಾರದಲ್ಲಿ ಡ್ಯಾಂನ ಬಲ ಮತ್ತು ಎಡದಂಡೆ ಮೇಲ್ಮಟ್ಟ ಮತ್ತು ಕೆಳಮಟ್ಟದ ಕಾಲುವೆಗಳಿಗೆ ನೀರು ಹರಿಸಲಾಗಿತ್ತು. ದುರದೃಷ್ಟವಶಾತ್ ಎಡದಂಡೆ ಕಾಲುವೆ ಗಂಗಾವತಿ ತಾಲೂಕಿನ ಮಸಾರಿ ಕ್ಯಾಂಪ್ 23ನೇ ವಿತರಣಾ ಕಾಲುವೆ ಹತ್ತಿರ ಬೋಂಗಾ ಬಿದ್ದ ಪರಿಣಾಮ ಕಾಲುವೆಯಲ್ಲಿ ನೀರು ನಿಲ್ಲಿಸಿ ದುರಸ್ತಿ ಕಾರ್ಯ ಮಾಡಿ ಪುನಃ ನೀರು ಹರಿಸಲಾಯಿತು. ಮತ್ತೂಂದು ಆಘಾತ ಎಂಬಂತೆ ಡ್ಯಾಂ ಹತ್ತಿರ ಎಡದಂಡೆ ಕಾಲುವೆಯ ಮೇಲ್ಮಟ್ಟದ ಕಾಲುವೆ ಗೇಟ್ ಕಿತ್ತು ಹೋಗಿದ್ದರಿಂದ ಎಡದಂಡೆ ಕಾಲುವೆಯಲ್ಲಿ ನೀರು ಪುನಃ ನಿಲ್ಲಿಸಲಾಯಿತು. ಈಗಾಗಲೇ ಬಲದಂಡೆ ಕಾಲುವೆ ರೈತರು ನಾಟಿ ಮಾಡಿದ ಭತ್ತದ ಬೆಳೆ ಉತ್ತಮವಾಗಿ ಬೆಳೆದಿದ್ದು ಎಡದಂಡೆ ಕಾಲುವೆ ರೈತರು ಇನ್ನೂ ತೊಂದರೆ ಅನುಭವಿಸುತ್ತಿದ್ದಾರೆ.
ಡ್ಯಾಂನಲ್ಲಿ ಒಟ್ಟು 105 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಡ್ಯಾಂ ಒಳಹರಿವು ಒಂದು ಲಕ್ಷ ಕ್ಯೂಸೆಕ್ ಇದ್ದು ಎಡದಂಡೆ ಕಾಲುವೆಯನ್ನು ಶೀಘ್ರ ದುರಸ್ತಿ ಮಾಡಿ ನೀರು ಹರಿಸಬೇಕಾಗಿದೆ. ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಸುಮಾರು 4.5 ಲಕ್ಷ ಎಕರೆ ಪ್ರದೇಶ ನೀರಾವರಿಗೆ ಒಳಪಟ್ಟಿದ್ದು, ಕಳೆದ ನಾಲ್ಕೈದು ವರ್ಷಗಳಿಂದ ಮಳೆಯ ಕೊರತೆಯಿಂದ ಒಂದೇ ಬೆಳೆಯನ್ನು ಬೆಳೆದಿದ್ದು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ನಾಲ್ಕೈದು ವರ್ಷಗಳಿಂದ ಡ್ಯಾಂಗೆ ನೀರು ಹರಿದು ಬಂದಿಲ್ಲ. ಕಾಲುವೆಗಳಿಗೆ ನೀರು ಹರಿಸಿಲ್ಲ. ಇದರಿಂದಾಗಿ ಕಾಲುವೆಯಲ್ಲಿ ಉಡಾ, ಇಲಿ ಹೆಗ್ಗಣ ರಂಧ್ರ ಮಾಡಿರುತ್ತವೆ, ಜತೆಗೆ ನೀರು ಹರಿಸುವ ಗೇಟ್ಗಳು ಸಹ ದುರಸ್ತಿಯಾಗಿದ್ದು ಇವುಗಳನ್ನು ಸರಿಪಡಿಸದೇ ಇರುವ ಕಾರಣ ಕಾಲುವೆಯಲ್ಲಿ ಬೋಂಗಾ ಬಿಳುತ್ತಿವೆ. ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕಿದೆ.
ಮುಂಗಾರು ಭತ್ತವನ್ನು ಜುಲೈ ಕೊನೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ನಾಟಿ ಮಾಡಿದರೆ ಉತ್ತಮ ಇಳುವರಿ ಪಡೆಯಲು ಸಾಧ್ಯವಾಗುತ್ತದೆ. ಸೆಪ್ಟೆಂಬರ್ ಮಧ್ಯೆದಲ್ಲಿ ಚಳಿಗಾಲ ಆರಂಭವಾಗುವುದರಿಂದ ಕಾಳು ಕಟ್ಟುವ ಹಂತದಲ್ಲಿರುವ ಭತ್ತ ಜೊಳ್ಳಾಗುತ್ತದೆ. ಇದರಿಂದ ರೈತರಿಗೆ ಇಳುವರಿ ಕಡಿಮೆಯಾಗುವ ಸಾಧ್ಯತೆ ಇರುತ್ತದೆ. ಈ ಭಾರಿ ಮುಂಗಾರು ಮಳೆ ತಡವಾಗಿ ಬಂದಿದ್ದರಿಂದ ಚಳಿಯೂ ತಡವಾಗಿ ಬರುವ ಸಾಧ್ಯತೆ ಇದ್ದು, ಕಾಲುವೆಗೆ ನೀರನ್ನು ಬೇಗನೆ ಹರಿಸಬೇಕೆಂಬುದು ರೈತರ ಅಭಿಪ್ರಾಯವಾಗಿದೆ.
• ಮುಂಗಾರು ಕಳೆದರೂ ಆರಂಭಗೊಳ್ಳದ ಕೃಷಿ ಚಟುವಟಿಕೆ
• ಆಗಸ್ಟ್ ಕೊನೆವರೆಗೂ ಭತ್ತ ನಾಟಿಗೆ ಅನುಕೂಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ
Koppal Lok Sabha Constituency: ಹಿಟ್ನಾಳ್ಗೆ ಹೊಸ ಮುಖ ಡಾ| ಕ್ಯಾವಟರ್ ಸವಾಲು
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
MUST WATCH
ಹೊಸ ಸೇರ್ಪಡೆ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ