ಕುಡುಕನ ಕಿತಾಪತಿ; ಗಾಂಧೀಜಿ ಪುತ್ಥಳಿಗೆ ಧಕ್ಕೆ
ಬಸಾಪುರದಲ್ಲಿ ಕುಡುಕನ ಕೃತ್ಯ ಸ್ಥಳಕ್ಕೆ ಡಿಎಸ್ಪಿ, ತಹಶೀಲ್ದಾರ್ ಭೇಟಿ-ಪರಿಶೀಲನೆ ಮುನಿರಾಬಾದ್ ಠಾಣೆ ವ್ಯಾಪ್ತಿಯಲ್ಲಿ ಘಟನೆ
Team Udayavani, Jun 17, 2021, 6:22 PM IST
ಕೊಪ್ಪಳ: ತಾಲೂಕಿನ ಬಸಾಪುರ ಗ್ರಾಮದಲ್ಲಿ ಮದ್ಯವ್ಯಸನಿಯೊಬ್ಬ ಮಹಾತ್ಮ ಗಾಂ ಧೀಜಿ ಪ್ರತಿಮೆ ಕೆಡವಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಜರುಗಿದ್ದು, ಸ್ಥಳಕ್ಕೆ ಡಿಎಸ್ಪಿ ಹಾಗೂ ಕೊಪ್ಪಳ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೃತ್ಯ ಎಸಗಿದ ವ್ಯಕ್ತಿಯನ್ನು ಮುನಿರಾಬಾದ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪುತ್ಥಳಿ ಧ್ವಂಸಗೊಳಿಸಿದ ವ್ಯಕ್ತಿಯನ್ನು ಮಹೇಶ ಕಲ್ಯಾಣಪ್ಪ ಓಜಿನಹಳ್ಳಿ ಎಂದು ಗುರುತಿಸಲಾಗಿದೆ. ಈತ ಎಂದಿನಂತೆಯೇ ಬುಧವಾರ ಮದ್ಯ ಸೇವಿಸಿ ಗ್ರಾಮದಲ್ಲಿನ ಗಾಂಧಿ ವೃತ್ತದ ಬಳಿ ಆಗಮಿಸಿದ್ದಾನೆ. ಬಾಯಿ ಮಾಡುತ್ತಲೇ ವೃತ್ತದ ಮೇಲ್ಭಾಗಕ್ಕೆ ತೆರಳಿ ಗಾಂಧಿ ಪ್ರತಿಮೆಯನ್ನು ಹಿಡಿದು ಎಳೆದಾಡಿದ್ದಾನೆ. ಗಾಂಧೀಜಿ ಕೈಯಲ್ಲಿನ ಕೋಲು ಹಗುರವಾಗಿದ್ದರಿಂದ ಅದು ಕಿತ್ತು ಬಂದಿದೆ. ಬೆತ್ತ ಕಿತ್ತು ಬೀಳುತ್ತಿದ್ದಂತೆ ಮೂರ್ತಿಯೂ ಭಾರ ತಾಳದೆ ಕುಸಿದಿದೆ. ಕೂಡಲೇ ಸ್ಥಳೀಯರು ಈತನನ್ನು ಹಿಡಿದು ಥಳಿಸಿ, ಪೊಲೀಸ್ ಠಾಣೆ, ತಾಲೂಕು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಪ್ರತಿಮೆ ಕೆಡವಿದ ಪ್ರಕರಣ ಊರಲ್ಲಿ ಸುದ್ದಿಯಾಗಿ ಏನೋ ವಿವಾದ ಎದ್ದಿದೆ ಎಂದು ಗ್ರಾಮಸ್ಥರು ಗುಸುಗುಸು ಮಾತನಾಡುತ್ತಿದ್ದರು. ಬಳಿಕ ಸ್ಥಳಕ್ಕೆ ಮುನಿರಾಬಾದ್ ಠಾಣೆ ಪಿಎಸ್ಐ ಪ್ರಶಾಂತ ಅವರು ಆಗಮಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಲ್ಲದೇ, ಸ್ಥಳೀಯ ಮುಖಂಡರಿಂದಲೂ ಮಾಹಿತಿ ಪಡೆದಿದ್ದಾರೆ. ಮದ್ಯ ವ್ಯಸನಿಯನ್ನು ಠಾಣೆಯ ಸುಪ ರ್ದಿಗೆ ಪಡೆದಿದ್ದಾರೆ. ಅಲ್ಲದೇ, ಭಗ್ನಗೊಂಡ ಮೂರ್ತಿಯನ್ನು ಸ್ಥಳೀಯ ಮುಖಂಡರು ಗ್ರಾಮದಲ್ಲಿನ ಗೋದಾಮಿನಲ್ಲಿ ಇರಿಸಿದ್ದಾರೆ.
ಗಾಂಧೀಜಿ ಪ್ರತಿಮೆ ಕೆಡವಿದ ಘಟನೆಯ ಬೆನ್ನಲ್ಲೇ ಕೊಪ್ಪಳ ಡಿಎಸ್ಪಿ ಗೀತಾ, ತಹಶೀಲ್ದಾರ್ ಅಮರೇಶ ಬಿರಾದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡುಕ ಮಹೇಶ ಓಜಿನಳ್ಳಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಗ್ರಾಮಸ್ಥರು ಈ ಕೃತ್ಯದ ಹಿಂದೆ ಯಾರದ್ದಾದರೂ ಕೈವಾಡವಿದೆಯೋ ಅಥವಾ ಆತನೇ ಇದನ್ನು ಕೆಡವಿದ್ದಾನೋ ಎನ್ನುವ ಕುರಿತು ತನಿಖೆ ಮಾಡುವಂತೆಯೂ ಒತ್ತಾಯಿಸಿದ್ದಾರೆ. ಮದ್ಯ ವ್ಯಸನಿ ಮಹೇಶ ಓಜಿನಹಳ್ಳಿಯನ್ನು ಮುನಿರಾಬಾದ್ ಠಾಣೆಯ ಪೊಲೀಸರು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದು, ಆತನ ಮಾನಸಿಕ ಸ್ಥಿತಿಯ ಸಮಾಲೋಚನೆಯೂ ನಡೆದಿದೆ. ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ