ಹೊದ್ದು ಮಲಗಿದೆ ದನಕನದೊಡ್ಡಿ ಜನ


Team Udayavani, Oct 2, 2019, 12:53 PM IST

kopala-tdy-1

ಕೊಪ್ಪಳ: ತಾಲೂಕಿನ ದನಕನದೊಡ್ಡಿ ಗ್ರಾಮದಲ್ಲಿ 80ಕ್ಕೂ ಹೆಚ್ಚು ಜನರು ಜ್ವರ ಬಾಧೆಯಿಂದ ಹೊದ್ದು ಮಲಗಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯರು ಜನರಲ್ಲಿ ಶಂಕಿತ ಡೆಂಘೀ ಜ್ವರ ಎನ್ನುವ ಮಾತನ್ನಾಡುತ್ತಿದ್ದಾರೆ. ಆದರೆ ಸರ್ಕಾರಿ ವೈದ್ಯರು ಮಾತ್ರ ಏಕಾ ಏಕಿ ಡೆಂಘೀ ಎಂದು ಒಪ್ಪಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಗ್ರಾಮದ ಜನರ ನರಳಾಟ ತಪ್ಪುತ್ತಿಲ್ಲ.

ದನಕನದೊಡ್ಡಿ ಗ್ರಾಮದಲ್ಲಿ ಕಳೆದೊಂದು ವಾರದಿಂದ ಜನರಲ್ಲಿ ಜ್ವರ ಬಾಧೆ ಕಾಣಿಸಿಕೊಳ್ಳುತ್ತಿದೆ. ರೋಗ ಬಾಧೆಯಿಂದ ಜನತೆ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೊದಲು ಕೆಮ್ಮು, ನಗಡಿ ಎಂದರೆ, ಬಳಿಕ ಮೈಕೈ ನೋವು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಸುಮಾರು 80ಕ್ಕೂ ಹೆಚ್ಚು ಜನರು ನಗರದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯರು ರೋಗಿಯಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಶಂಕಿತ ಡೆಂಘೀ ಇದೆ ಎನ್ನುವ ಮಾತನ್ನಾಡುತ್ತಿರುವುದು ರೋಗಿಗಳಲ್ಲಿ ಮತ್ತಷ್ಟು ಆತಂಕ ಮೂಡುತ್ತಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಯಾವುದೇ ಡೆಂಘೀ ಇಲ್ಲ. ಸೋಂಕಿನಿಂದ ಜ್ವರ ಕಾಣಿಸಿಕೊಂಡಿವೆ. ಯಾವುದೇ ತೊಂದರೆಯಿಲ್ಲ. ಸುಮ್ಮನೆ ಖಾಸಗಿ ಆಸ್ಪತ್ರೆ ವೈದ್ಯರು ಜನರಲ್ಲಿ ಭಯ ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎನ್ನುತ್ತಿದ್ದಾರೆ.

ಗ್ರಾಮದ ಜನತೆ ಮಾತ್ರ, ನಮ್ಮೂರಲ್ಲಿ ಯಾರೂ ಸರಿಯಾಗಿ ವೈದ್ಯರು ಬರುತ್ತಿಲ್ಲ. ರೋಗ ಬಾಧೆ ಹೆಚ್ಚಾದಾಗಿನಿಂದ ಯಾವುದೇ ಕ್ಯಾಂಪ್‌ಗ್ಳನ್ನು ಮಾಡುತ್ತಿಲ್ಲ. ವೃದ್ಧರು, ಮಹಿಳೆಯರು, ಮಕ್ಕಳಿಗೆ ಗ್ರಾಮದಲ್ಲಿ ಚಿಕಿತ್ಸೆ ನೀಡುತ್ತಿಲ್ಲ. ಕಾಟಾಚಾರಕ್ಕೆ ಒಂದೆರಡು ಸಲ ಬಂದು ಜನರಿಗೆ ಚಿಕಿತ್ಸೆ ನೀಡಿ ತೆರಳುತ್ತಿದ್ದಾರೆ ಎಂದು ಸರ್ಕಾರಿ ವೈದ್ಯರ ವಿರುದ್ಧವೇ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಆರೋಗ್ಯ ಇಲಾಖೆ ಮಾತ್ರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದೆ. ನದಿಯಿಂದ ನೇರವಾಗಿ ಗ್ರಾಮಕ್ಕೆ ನೀರು ಪೂರೈಕೆಯಾಗುತ್ತಿದ್ದು, ಶುದ್ಧೀಕರಣ ಇಲ್ಲದ ನೀರನ್ನು ಕುಡಿದು ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸೋಂಕಿನಿಂದ ಜನರಿಗೆ ಜ್ವರ ಕಾಣಿಸಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎನ್ನುತ್ತಿದ್ದಾರೆ.

ದನಕನದೊಡ್ಡಿ ಗ್ರಾಮದಲ್ಲಿ ಡೆಂಘೀ ಕಾಣಿಸಿಕೊಂಡಿಲ್ಲ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದೆಯಂತೆ. ನದಿಯಿಂದ ನೀರು ಪೂರೈಕೆಯಾಗುತ್ತಿದ್ದು, ಅದೇ ನೀರನ್ನು ಕುಡಿದು ಜನರಲ್ಲಿ ಸೋಂಕು ಕಾಣಿಸಿಕೊಂಡು ಜ್ವರ ಬಾಧೆ ಉಲ್ಬಣಿಸಿದೆ. ಖಾಸಗಿ ವೈದ್ಯರು ಜನರಿಗೆ ಡೆಂಘೀ ಇದೆ ಹೇಳಿರಬಹುದು. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ರಕ್ತ ತಪಾಸಣೆ ಮಾಡಿಸಲಿ. ಅಲ್ಲದೇ, ತಾಲೂಕು ವೈದ್ಯಾ ಕಾರಿಗಳಿಗೆ ಸೂಚನೆ ನೀಡಿದ್ದು, ಗ್ರಾಮದಲ್ಲಿನ ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ತಿಳಿಸಿದ್ದೇನೆ.– ಡಾ| ರಾಜಕುಮಾರ ಯರಗಲ್‌, ಡಿಎಚ್‌ಒ, ಕೊಪ್ಪಳ

 

-ದತ್ತು ಕಮ್ಮಾರ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.