ವೈಭವದ ಹೇಮಗುಡ್ಡ ಅಂಬಾರಿ ಮೆರವಣಿಗೆ


Team Udayavani, Oct 15, 2021, 2:17 PM IST

dasara festival

ಗಂಗಾವತಿ :ನಾಡಹಬ್ಬ ದಸರಾ ಸಕಲ ಜೀವರಾಶಿಗಳಿಗೆ ಒಳಿತನ್ನು ಮಾಡಲಿ ಜಗತ್ತನ್ನು ಕಾಡುತ್ತಿರುವ ಕೊರೋನಾ ಮಹಾಮಾರಿ ಬೇಗನೆ ದೂರವಾಗಲಿ ದುರ್ಗಾಪರಮೇಶ್ವರಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಮಾಜಿ ಸಂಸದ ಎಚ್. ಜಿ .ರಾಮುಲು ಹೇಳಿದರು .

ತಾಲ್ಲೂಕಿನ ಸುಕ್ಷೇತ್ರ ಹೇಮಗುಡ್ಡದಲ್ಲಿ ಶರನ್ನವರಾತ್ರಿ ನಿಮಿತ್ತ ದಸರಾ ಆನೆ ಮೇಲೆ ಅಂಬಾರಿ ಮೆರವಣಿಗೆಗೆ ಪೂಜೆ ಮಾಡುವ ಮೂಲಕ  ಚಾಲನೆ ನೀಡಿ ಮಾತನಾಡಿದರು

ನಾಡಹಬ್ಬ ದಸರಾ ಆಚರಣೆ ಮಾಡಿದ್ದು ಮೊದಲು ಕುಮ್ಮಟ ದುರ್ಗದ ಅರಸರು ನಂತರ ವಿಜಯನಗರ ಇದೀಗ ಮೈಸೂರಿನಲ್ಲಿ ಸರ್ಕಾರದ ಪರವಾಗಿ ನಾಡಹಬ್ಬದ ಆಚರಣೆ ಮಾಡಲಾಗುತ್ತಿದೆ .ದಸರಾ ಹಬ್ಬ ಕನ್ನಡ ನಾಡಿನ ಅಸ್ಮಿತೆಯ ಪ್ರತೀಕವಾಗಿದ್ದ ನಾಡು ನುಡಿ ಸಂಸ್ಕೃತಿಯ ಅನಾವರಣ ಈ ಹಬ್ಬದಲ್ಲಿ ಆಗುತ್ತದೆ .ಸರಕಾರ ಈ ಹಬ್ಬಕ್ಕೆ ಇನ್ನಷ್ಟು ಮೆರುಗು ನೀಡಲು ದಸರಾ ಹಬ್ಬವನ್ನು ಕುಮ್ಮಟ ದುರ್ಗದಿಂದ ಆರಂಭಿಸಿ ವಿಜಯನಗರ ನಂತರ ಮೈಸೂರಿನಲ್ಲಿ ನಿರಂತರವಾಗಿ ಆಚರಣೆ ಮಾಡುವಂತಾಗಬೇಕು .ಹೇಮಗುಡ್ಡದ ಶ್ರೀದುರ್ಗಾಪರಮೇಶ್ವರಿ ಕುಮ್ಮಟ ದುರ್ಗದ ಮತ್ತು ಕನಕಗಿರಿ ದೊರೆಗಳ ಅಧಿದೈವವಾಗಿದ್ದಾಳೆ .ಮನುಷ್ಯ ಆಧ್ಯಾತ್ಮಿಕ ಧಾರ್ಮಿಕವಾಗಿ ಒಳ್ಳೆಯ ನಡತೆಯುಳ್ಳವನು ಆದರೆ ಅವನ ಜೀವನವು ಒಳ್ಳೆಯದಾಗುತ್ತದೆ ಎಂದರು .

ಶಾಸಕ ಪರಣ್ಣ ಮುನವಳ್ಳಿ ಈ ಸಂದರ್ಭದಲ್ಲಿ ಮಾತನಾಡಿ ಹೇಮಗುಡ್ಡದಲ್ಲಿ ಮಾಜಿ ಸಂಸದ ಎಚ್ ಜಿ ರಾಮುಲು ಅವರ ಕುಟುಂಬದವರು ಕಳೆದ ಮೂವತ್ತು ವರ್ಷಗಳಿಂದ ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದಾರೆ .ಕಳೆದ 2 ವರ್ಷಗಳಿಂದ ಕೊರೋನಾ ಮಹಾಮಾರಿಯ ಪರಿಣಾಮ ಇಲ್ಲಿ ಸರಳವಾಗಿ ಆಚರಣೆ ಮಾಡಲಾಗುತ್ತಿದೆ ಆದರೂ ಈ ಬಾರಿ ಆನೆಯ ಮೇಲೆ ಅಂಬಾರಿಯಲ್ಲಿ ದುರ್ಗಾಪರಮೇಶ್ವರಿಯನ್ನು  ಪ್ರತಿಷ್ಠಾಪಿಸಿ ನಾಡಿನ ವಿವಿಧ ಜಾನಪದ ಕಲಾ ತಂಡಗಳು ಸಾಂಸ್ಕೃತಿಕ ಅನಾವರಣ ಮಾಡುವ ಮೂಲಕ ಮೆರವಣಿಗೆ ಜರುಗುತ್ತದೆ ಆದ್ದರಿಂದ ನಾಡಹಬ್ಬ ಎಲ್ಲರಿಗೂ ಒಳಿತನ್ನು ಮಾಡಲಿ ಎಂದರು .

ಇದನ್ನೂ ಓದಿ:ನನ್ನ ತಂದೆ ರಾಷ್ಟ್ರೀಯವಾದಿ : ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ತಿರುಗೇಟು

ದಸರಾ 9 ದಿನಗಳ ಕಾಲ ಹೇಮಗುಡ್ಡದಲ್ಲಿ ದೇವಿಯ ಪ್ರವಚನ ನಿತ್ಯವೂ ತ್ರಿಕಾಲ ಪೂಜೆ ಅನ್ನಸಂತರ್ಪಣೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ದಸರಾವನ್ನು ಆಚರಣೆ ಮಾಡಲಾಗುತ್ತದೆ .

9 ದಿನಗಳ ಕಾಲ ಮಾಜಿ ಸಂಸದ ಎಚ್. ಜಿ. ರಾಮುಲು ಹಾಗೂ ಎಚ್. ಆರ್. ಶ್ರೀನಾಥ್ ಕುಟುಂಬದವರು ಹೇಮಗುಡ್ಡದಲ್ಲಿ ಮೊಕ್ಕಾಂ ಹೂಡಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಾರೆ  .

ಕೊರೋನಾ ಇದ್ದ ಕಾರಣ ಕಳೆದ ವರ್ಷ ಮತ್ತು ಈ ಬಾರಿ ಉಚಿತ ಸಾಮೂಹಿಕ ವಿವಾಹಗಳು ನೆರವೇರಿಸಲಾಗಲಿಲ್ಲ .

ಆನೆ ಮೇಲೆ ಅಂಬಾರಿ ಮೆರವಣಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಶಾಸಕರಾದ ಪರಣ್ಣ ಮುನವಳ್ಳಿ,  ಮಾಜಿ ಎಂಎಲ್ಸಿ ಎಚ್. ಆರ್ .ಶ್ರೀನಾಥ್ ಮುಖಂಡರಾದ ಸಿದ್ದಪ್ಪ ನೀರಲೂಟಿ ,ಇಲಿಯಾಸ್ ಬಾಬಾ, ಜೋಗದ ಹನುಮಂತಪ್ಪ ,ಕೆಲೋಜಿ ಸಂತೋಷ್ ,ರೆಡ್ಡಿ ಶ್ರೀನಿವಾಸ್ ,ಬಿ. ಕೃಷ್ಣಪ್ಪ ನಾಯಕ್ ,ಎಚ್ ಆರ್ ಭರತ್ ,ಅಯೂಬ್ ಖಾನ್  ಸೇರಿ ಹೇಮಗುಡ್ಡ, ಚಿಕ್ಕಬೆಣಕಲ್, ಎಚ್ ಆರ್ ಜಿ ನಗರ, ಮುಕ್ಕುಂಪಿ ಸೇರಿದಂತೆ ತಾಲ್ಲೂಕಿನ ಮತ್ತು ಜಿಲ್ಲೆಯ ವಿವಿಧ ಗ್ರಾಮಗಳ ಗ್ರಾಮಸ್ಥರು ನಾಡಹಬ್ಬ ದಸರಾದಲ್ಲಿ ಪಾಲ್ಗೊಂಡಿದ್ದರು .

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.