ಬಾಕಿ ತೆರಿಗೆ ವಸೂಲಿಗೆ ಡಿಸಿ ಸೂಚನೆ


Team Udayavani, Nov 3, 2019, 4:12 PM IST

kopala-tdy-1

ಗಂಗಾವತಿ: ನಗರದಲ್ಲಿ ಬಾಕಿ ಇರುವ ಲಕ್ಷಾಂತರ ರೂ. ತೆರಿಗೆ ವಸೂಲಿ ಮಾಡಲು ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಸೂಚನೆ ನೀಡಿದ್ದಾರೆ.

ಅವರು ಶನಿವಾರ ನಗರಸಭೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಹಲವು ದಶಕಗಳಿಂದ ನಗರದಲ್ಲಿ ಕೆಲವರು ನಗರಸಭೆಯ ತೆರಿಗೆ ಪಾವತಿ ಮಾಡಿಲ್ಲ. ಇದರಿಂದ ನಗರಸಭೆ ಸಂಪನ್ಮೂಲ ಇಲ್ಲದಂತಾಗಿದ್ದು ಪೌರಕಾರ್ಮಿಕರಿಗೆ ಕೊಡಬೇಕಾದ 60 ಲಕ್ಷಕ್ಕೂ ಅ ಧಿಕ ವೇತನ ಬಾಕಿ ಉಳಿದಿದೆ. ಕೂಡಲೇ ಕಠಿಣ ಕ್ರಮಕೈಗೊಂಡು ರೈಸ್‌ ಮಿಲ್‌, ಖಾಸಗಿ ಶಾಲಾ-ಕಾಲೇಜು, ಚಿತ್ರಮಂದಿರ, ಮನೆಯ ತೆರಿಗೆ ಹಾಗೂ ನಗರಸಭೆ ವಾಣಿಜ್ಯ ಮಳಿಗೆಗಳ ಬಾಕಿ ವಸೂಲಿ ಮಾಡಲು ಕ್ರಮ ಕೈಗೊಂಡು ವರದಿ ನೀಡಬೇಕು. ರೈಸ್‌ ಮಿಲ್‌ ಹಾಗೂ ಇತರ ಕೆಲವರು ಹಳೆಯ ತೆರಿಗೆ ಬಾಕಿ ಕುರಿತು ಕೋರ್ಟ್‌ ಮೊರೆ ಹೋಗಿದ್ದು, ಇತ್ತೀಚಿನ ವರ್ಷದ ಬಾಕಿ ತೆರಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಟ್ರೇಡ್‌ ಲೈಸೆನ್ಸ್‌: ವಾಣಿಜ್ಯವಾಗಿ ಬೆಳೆದಿರುವ ನಗರದಲ್ಲಿ ಕೇವಲ 1800 ಟ್ರೇಡ್‌ ಲೈಸೆನ್ಸ್‌ ನೀಡಲಾಗಿದೆ. ನಗರಸಭೆ ಲೈಸೆನ್ಸ್‌ ನೀಡುವ ವಿಭಾಗ ಸರಿಯಾಗಿ ಕಾರ್ಯ ಮಾಡುತ್ತಿಲ್ಲ. ಕೂಡಲೇ ನಗರದಲ್ಲಿ ವ್ಯಾಪಾರ, ವಹಿವಾಟು ಮಾಡುವ ಪ್ರತಿಯೊಬ್ಬ ವ್ಯಾಪಾರಿ ಟ್ರೇಡ್‌ ಲೈಸೆನ್ಸ್‌ ತೆಗೆದುಕೊಳ್ಳುವುದು ಕಡ್ಡಾಯ ಮಾಡಿ 10 ಸಾವಿರಕ್ಕೂ ಅಧಿಕ ಟ್ರೇಡ್‌ ಲೈಸೆನ್ಸ್‌

ನೀಡಿ ತೆರಿಗೆ ವಸೂಲಿ ಮಾಡಬೇಕು. ನಗರದಲ್ಲಿರುವ ನಗರಸಭೆಯ ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ನೀಡಲು ಹರಾಜು ಕರೆಯಬೇಕು. ಬಾಕಿ ಇರುವ ಬಾಡಿಗೆ ವಸೂಲಿ ಮಾಡಬೇಕು ಇಲ್ಲವೇ ಖಾಲಿ ಮಾಡಲು ಕ್ರಮ ಕೈಗೊಳ್ಳಬೇಕು. 14ನೇ ಹಣಕಾಸು ಯೋಜನೆ ಕಾಮಗಾರಿ ನಡೆಯದಂತೆ ಕೋರ್ಟ್‌ ಮೂಲಕ ತಡೆಯಾಜ್ಞೆ ತರಲಾಗಿದ್ದರೂ ನ್ಯಾಯಾಲಯಕ್ಕೆ ಅಗತ್ಯ ಮಾಹಿತಿ ರವಾನೆ ಮಾಡಿ ಕೂಡಲೇ ಕಾಮಗಾರಿ ಆರಂಭಕ್ಕೆ ಕ್ರಮ ವಹಿಸಲಾಗುತ್ತದೆ. ಹಿಂದಿನ 14ನೇ ಹಣಕಾಸು ಯೋಜನೆಯಲ್ಲಿ ಇನ್ನೂ ಹಣ ಉಳಿದಿದ್ದು, ಅನುದಾನ ಹಂಚಿಕೆಯಾಗದ ವಾರ್ಡ್‌ಗಳಿಗೆ ಅನುದಾನ ವಿತರಣೆ ಮಾಡಲಾಗುತ್ತದೆ.

ನಗರದ ಮಹಾವೀರ ವೃತ್ತ ಸೇರಿ ಪ್ರಮುಖ ಐದು ವೃತ್ತಗಳಲ್ಲಿ ಸುಲಭ ಶೌಚಾಲಯ ನಿರ್ಮಿಸಲು ಟೆಂಡರ್‌ ಕರೆಯಲಾಗುತ್ತದೆ. ಒಳಚರಂಡಿ ಕಾಮಗಾರಿ ಬಹುತೇಕ ಮುಗಿದಿದ್ದು, ಮನೆಯಿಂದ ಯುಜಿಡಿ ಟ್ಯಾಂಕ್‌ ಗಳಿಗೆ ಸಂಪರ್ಕ ಕಲ್ಪಿಸಲು ನಗರಸಭೆ ಶೀಘ್ರ ಕಾರ್ಯಾರಂಭ ಮಾಡಲಿದೆ. ನಗರದಲ್ಲ ಬೀದಿದೀಪ ದುರಸ್ತಿ ಕಾರ್ಯವಾಗದ ಕುರಿತು ಹಲವು ದೂರುಗಳಿದ್ದು, ಹೊಸ ಟೆಂಡರ್‌ ಕರೆದು ಇದನ್ನು ಸರಿಪಡಿಸಲಾಗುತ್ತದೆ. ನಗರದಲ್ಲಿ ಹಾಕುವ ಫ್ಲೆಕ್ಸ್‌ ಹಾಗೂ ದೊಡ್ಡಮಟ್ಟದ ಜಾಹೀರಾತು ಫಲಕಗಳಿಗೆ ಶುಲ್ಕ ವಿಧಿಸಲು ನಗರಸಭೆಯ ನಿಯಮಗಳಲ್ಲಿ ಅವಕಾಶವಿದ್ದು, ನಗರಸಭೆಯವರು ಶುಲ್ಕ ಹಾಕಿ ಪರವಾನಗಿ ಕೊಡಬೇಕು. ಜನಪ್ರತಿನಿಧಿ ಗಳಿಗೆ ಮನವರಿಕೆ ಮಾಡಿಸುವಂತೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರಭಾರಿ ಪೌರಾಯುಕ್ತ ಗಂಗಧರಪ್ಪ, ತಹಶೀಲ್ದಾರ್‌ ಎಲ್‌.ಡಿ. ಚಂದ್ರಕಾಂತ, ಎಇಇ ಆರ್‌.ಆರ್‌. ಪಾಟೀಲ ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.