ಹಿರೇವಡ್ರಕಲ್‌ ಗ್ರಾಮದಲ್ಲಿ ವಿಕಾಸ್‌ ವಾಸ್ತವ್ಯ

| ಪ್ರತಿ ತಿಂಗಳು 3ನೇ ಶನಿವಾರ ಡಿಸಿ ಗ್ರಾಮ ವಾಸ್ತವ್ಯ | ವಾಸ್ತವ್ಯಕ್ಕೂ ಮೊದಲೇ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನ

Team Udayavani, Feb 17, 2021, 6:34 PM IST

ಹಿರೇವಡ್ರಕಲ್‌ ಗ್ರಾಮದಲ್ಲಿ ವಿಕಾಸ್‌ ವಾಸ್ತವ್ಯ

ಕೊಪ್ಪಳ: ಆಡಳಿತ ವರ್ಗವು ಜನರ ಮನೆ ಬಾಗಿಲಿಗೆ ತೆರಳಿ ಜನ ಸೇವೆ ಮಾಡಬೇಕೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಮಾಡಬೇಕೆಂದು ಆದೇಶ ಮಾಡಿದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಅವರುಯಲಬುರ್ಗಾ ತಾಲೂಕಿನ ಹಿರೇವಡ್ರಕಲ್‌ ಗ್ರಾಮದಲ್ಲಿ ವಾಸ್ತವ್ಯಕ್ಕೆ ಯೋಜನೆರೂಪಿಸಿದ್ದಾರೆ. ಕಂದಾಯ ಇಲಾಖೆಯಡಿ ಬರುವ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಆಡಳಿತ ವರ್ಗಕ್ಕೆ ಚುರುಕು ಮುಟ್ಟಿಸಲು ಆಡಳಿತವೇ ಜನರ ಮನೆ ಬಾಗಿಲಿಗೆ ತೆರಳುವಂತೆಮಾಡಲು ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳು ಯಲಬುರ್ಗಾತಾಲೂಕಿನ ಹಿರೇ ವಡ್ರಕಲ್‌ ಗ್ರಾಮದಲ್ಲಿ ಫೆ. 20ರಂದು ವಾಸ್ತವ್ಯ ಮಾಡಲಿದ್ದಾರೆ. ಅಲ್ಲದೇ ಪ್ರತಿ ತಿಂಗಳು 3ನೇ ಶನಿವಾರ ಒಂದೊಂದು ತಾಲೂಕಿನ ಗ್ರಾಮದಲ್ಲಿ ಜಿಲ್ಲಾಧಿಕಾರಿ ವಾಸ್ತವ್ಯ ಮಾಡಿ ಜನರ ಸಮಸ್ಯೆ ಆಲಿಸಲಿದ್ದಾರೆ.

ಕಂದಾಯ ಇಲಾಖೆ ಸಮಸ್ಯೆ ಇತ್ಯರ್ಥ:

ಜಿಲ್ಲೆಯಲ್ಲಿ ಹಿರೇವಡ್ರಕಲ್‌ ಗ್ರಾಮದಲ್ಲಿ ರೈತರ ಜಮೀನುಗಳ ಸಮಸ್ಯೆ ಹೆಚ್ಚಿದೆ.ರೈತರ ಪಹಣಿಯಲ್ಲಿ ತಿದ್ದುಪಡಿ ಇರುವುದು,ಲೋಪದೋಷ ಹೆಚ್ಚಿರುವುದು, ಜೊತೆಗೆಭೂಮಿ ಒಂದು ಕಡೆಯಿದ್ದರೆ, ಸರ್ವೇ ನಂಬರ್‌ ಒಂದು ಕಡೆಯಿದೆ. ರೈತರ ಜಮೀನಿನ ಮ್ಯಾಪ್‌ಗ್ಳಲ್ಲಿ ವ್ಯತ್ಯಾಸಗಳು ಹೆಚ್ಚಿರುವುದರಿಂದ ಆ ಗ್ರಾಮವನ್ನೇ ಡಿಸಿಆಯ್ಕೆ ಮಾಡಿದ್ದು, ಗ್ರಾಮಸ್ಥರಿಂದ ಸಮಸ್ಯೆಆಲಿಸಲಿದ್ದಾರೆ. ಅದಕ್ಕೆ ಕಾನೂನಿನಲ್ಲಿ ಏನೆಲ್ಲಾಅವಕಾಶ ಇವೆ.ಪರಿಹಾರವೇನು? ಯಾವರೀತಿ ಸರಿಪಡಿಸಬೇಕು. ಜನರ ಸಮಸ್ಯೆ ನಿವಾರಣೆಗೆ ಪರ್ಯಾಯ ಮಾರ್ಗಗಳೇನು ಎನ್ನುವ ಕುರಿತು ಡಿಸಿ ಸ್ಥಳದಲ್ಲೇ ತಿಳಿಸಲಿದ್ದಾರೆ.

ಅಲ್ಲದೇ ಕಂದಾಯ ಇಲಾಖೆ ತಾಲೂಕು ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಸಮಸ್ಯೆನಿವಾರಿಸಲಿದ್ದಾರೆ. ಇದರೊಟ್ಟಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವಿವಿಧಮಾಸಾಶನ ಸಮಸ್ಯೆ ಕುರಿತು ಜನರೊಂದಿಗೆ ಚರ್ಚೆ ನಡೆಸಲಿದ್ದಾರೆ.

ತಹಶೀಲ್ದಾರ್‌ರು ಭೇಟಿ: ಜನರಿಂದ ಅನಗತ್ಯವಾಗಿ ಆಡಳಿತ ವರ್ಗಕ್ಕೆ ಮುಜುಗುರ ಆಗುವ ಸನ್ನಿವೇಶನ ತಪ್ಪಿಸಲು ಯಲಬುರ್ಗಾ ತಹಶೀಲ್ದಾರ್‌ ಶ್ರೀಶೈಲ ತಳವಾರ ಪೂರ್ವ ತಯಾರಿಯಾಗಿ ಹಿರೇವಡ್ರಕಲ್‌ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಕುಡಿಯುವ ನೀರು, ಶೌಚಾಲಯ, ಚರಂಡಿಗಳ ಸ್ವತ್ಛತೆ, ರಸ್ತೆಸೇರಿದಂತೆ ವಿವಿಧ ಸಮಸ್ಯೆ ಪರಿಹರಿಸುವ ಬಗ್ಗೆ ಗಮನಹರಿಸಿದ್ದಾರೆ. ಜಿಲ್ಲಾಧಿಕಾರಿ ಎದುರುಸಮಸ್ಯೆ ಹೇಳಿಕೊಳ್ಳುವ ಮೊದಲೇ ಅವುಗಳಪರಿಹಾರ ಕಾರ್ಯವು ಭರ್ಜರಿಯಾಗಿ ನಡೆದಿದೆ.

ಪ್ರತಿ 3ನೇ ಶನಿವಾರ ಗ್ರಾಮವಾಸ್ತವ್ಯ:

ಸರ್ಕಾರದ ಆದೇಶದಂತೆ ಪ್ರತಿ ತಿಂಗಳು ಮೂರನೇ ಶನಿವಾರ ಡಿಸಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಇದು ಕೇವಲ ಒಂದು ತಿಂಗಳ ಗ್ರಾಮ ವಾಸ್ತವ್ಯವಲ್ಲ. ಪ್ರತಿ ತಿಂಗಳೂಈ ಪ್ರಕ್ರಿಯೆ ನಡೆಯಲಿದೆ. ಜಿಲ್ಲಾಡಳಿತವುಮೊದಲ ಹಂತದಲ್ಲಿ ಕಂದಾಯ ಇಲಾಖೆಯಸಮಸ್ಯೆಗಳ ಇತ್ಯರ್ಥಕ್ಕೆ ಹೆಚ್ಚಿನ ಆದ್ಯತೆ ನೀಡಿದೆ.ನಂತರದ ದಿನದಲ್ಲಿ ವಿವಿಧ ಇಲಾಖೆಗಳ ಸಮಸ್ಯೆ ಬಗೆಹರಿಸುವ ಕಾರ್ಯಕ್ಕೂ ಮುಂದಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಸರ್ಕಾರ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆ ಇತ್ಯರ್ಥಕ್ಕೆ ಒತ್ತು ನೀಡುವಂತಹ ಜನಪರ ನಿರ್ಧಾರ ಕೈಗೊಂಡಿರುವುದು ಗಮನ ಸೆಳೆದಿದೆ.ಹಿರೇವಡ್ರಕಲ್‌ ಗ್ರಾಮಸ್ಥರು ಜಿಲ್ಲಾಧಿಕಾರಿ ಮುಂದೆ ತಮ್ಮ ಸಮಸ್ಯೆ ಹೇಳಿಕೊಳ್ಳಲು ಕಾಯುತ್ತಿದ್ದಾರೆ.

ಗ್ರಾಮ ವಾಸ್ತವ್ಯಕ್ಕೂ ಮೊದಲೇ ಇತ್ಯರ್ಥ! :

ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಅವರು ಗ್ರಾಮ ವಾಸ್ತವ್ಯ ನಿಗದಿ ಯಾಗುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಗ್ರಾಮ ಹಂತದಿಂದ ತಾಲೂಕು ಹಂತದವರೆಗಿನ ಅಧಿಕಾರಿಗಳುಹಿರೇವಡ್ರಕಲ್‌ ಗ್ರಾಮಕ್ಕೆ ಭೇಟಿನೀಡಿ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಒಂದು ವಾರದಿಂದ ತಹಶೀಲ್ದಾರ್‌, ಆರ್‌ಐ, ವಿಎ ಗ್ರಾಮದಲ್ಲಿ ಠಿಕಾಣಿ ಹೂಡಿ ರೈತರ ಪಹಣಿ ಸಮಸ್ಯೆ ಆಲಿಸಿ, ಅದಕ್ಕೆ ಪರಿಹಾರವೇನು? ಎನ್ನುವಮಾರ್ಗೋಪಾಯ ತಿಳಿಸುತ್ತಿದ್ದಾರೆ. ಜೊತೆಗೆ ಕುಡಿಯುವ ನೀರು, ಚರಂಡಿಗಳ ಸ್ವತ್ಛತೆ ಸೇರಿ ಹಲವು ಸಮಸ್ಯೆ ಆಲಿಸಿ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನ ನಡೆಸುತ್ತಿದ್ದಾರೆ.

ಸರ್ಕಾರದ ಆದೇಶದಂತೆ ಪ್ರತಿ ಮೂರನೇ ಶನಿವಾರ ಗ್ರಾಮ ವಾಸ್ತವ್ಯ ಮಾಡಲಿದ್ದು, ಮೊದಲ ಬಾರಿ ಫೆ.20ರಂದು ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್‌ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದೇನೆ. ಅಲ್ಲಿ ರೈತರ ಪಹಣಿದೋಷ, ನಕಾಶೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಅವುಗಳ ಇತ್ಯರ್ಥಕ್ಕೆ ಆದ್ಯತೆ ನೀಡಲಾಗಿದೆ.  -ವಿಕಾಸ್‌ ಕಿಶೋರ್‌, ಜಿಲ್ಲಾಧಿಕಾರಿ

ನಮ್ಮ ಗ್ರಾಮದಲ್ಲಿ 30-40 ವರ್ಷಗಳಿಂದ ಪಹಣಿ ಸಮಸ್ಯೆಗಳಿದ್ದವು. ನಾವು ಬೆಂಗಳೂರುವರೆಗೆ ಹೋದರೂಇತ್ಯರ್ಥವಾಗಿದ್ದಿಲ್ಲ. ಹಾಗಾಗಿ ಭೂಮಿ ಖರೀದಿ, ಮಾರಾಟಕ್ಕೂ ತುಂಬತೊಂದರೆ ಎದುರಿಸಿದ್ದೇವೆ. ಈಗ ಡಿಸಿ ಅವರೇ ನಮ್ಮೂರಲ್ಲಿ ವಾಸ್ತವ್ಯಮಾಡಿ ಕಂದಾಯ ಇಲಾಖೆಯಡಿ ಪಹಣಿ ಸಮಸ್ಯೆಗಳ ಇತ್ಯರ್ಥಕ್ಕೆ ಮುಂದಾಗಿರುವುದು ಖುಷಿ ತಂದಿದೆ. –ಹನುಮೇಶ ಸುಣಗಾರ, ಗ್ರಾಮದ ಮುಖಂಡ

 

ದತ್ತು ಕಮ್ಮಾರ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.