ಪ್ರೇಯಸಿ ಶವ ಕೊಳವೆ ಬಾವಿಯಲ್ಲಿ ಹೂತಿಟ್ಟ ಪ್ರೇಮಿ
Team Udayavani, Jun 25, 2021, 8:54 PM IST
ಯಲಬುರ್ಗಾ: ಅಪ್ರಾಪ್ತ ಯುವತಿಯನ್ನು ಪ್ರೇಮಿಯೇ ಹತ್ಯೆ ಮಾಡಿ ಶವವನ್ನು ಕೊಳವೆ ಬಾವಿಯಲ್ಲಿ ಹೂತಿಟ್ಟ ಘಟನೆ ತಾಲೂಕಿನ ಹುಲೆಗುಡ್ಡ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಮೃತಪಟ್ಟವಳನ್ನು ಹುಲೆಗುಡ್ಡ ಗ್ರಾಮದ ಮದ್ದಾನವ್ವಾ (17) ಎಂದು ಗುರುತಿಸಲಾಗಿದೆ. ಸಂಬಂಧಿಕಾರದ ಹುಲೆಗುಡ್ಡ ಗ್ರಾಮದ ಯುವಕ ಯಲ್ಲಪ್ಪ ಭೂಮನಗೌಡ್ರ ಹಾಗೂ ಮದ್ದಾನವ್ವಾ ಪರಸ್ಪರ ಪ್ರೀತಿಸುತ್ತಿದ್ದರು. ಇನ್ನೆರೆಡು ತಿಂಗಳ ನಂತರ ಯುವತಿಗೆ 18 ವರ್ಷ ವಯಸ್ಸಾದ ಮೇಲೆ ಮದುವೆ ಮಾಡುವುದಾಗಿ ಮನೆಯವರು ತಿಳಿಸಿದ್ದರು. ಆದ್ದರಿಂದ ಮದ್ದಾನವ್ವಳನ್ನು ಯಲ್ಲಪ್ಪ ಒಂದು ವರ್ಷದಿಂದ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದ. ಈ ನಡುವೆ ಯುವತಿ ಮೇಲೆ ಅನುಮಾನಗೊಂಡು ಕತ್ತು ಹಿಸಕಿ ಹತ್ಯೆಗೈದಿದ್ದಾನೆ. ನಂತರ ಯುವತಿ ಶವವನ್ನು ಹುಲೆಗುಡ್ಡ ಗ್ರಾಮದ ಪಕ್ಕದಲ್ಲಿರುವ ಮುರಡಿ ಗ್ರಾಮದ ಹೊರವಲಯದಲ್ಲಿರುವ ಕೆರೆ ಪಕ್ಕದ ಜಮೀನಿನಲ್ಲಿ ಕೊರೆಸಿದ್ದ ವಿಫಲ ಕೊಳವೆಬಾವಿಯಲ್ಲಿ ಹೂತಿದ್ದಾನೆ. ಇದಕ್ಕೆ ಯುವಕನ ಸಹೋದರ ರಮೇಶ ಕೈ ಜೋಡಿದ್ದಾನೆ ಎನ್ನಲಾಗಿದೆ.
ಯುವತಿ ಕಾಣೆಯಾಗಿದ್ದನ್ನು ಗಮನಿಸಿದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಯಲ್ಲಪ್ಪನನ್ನು ಬಂಧಿಸಿದ್ದು, ತಲೆಮರೆಸಿಕೊಂಡ ರಮೇಶನ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಯಲಬುರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೆಸಿಬಿ ಮೂಲಕ ಯುವತಿ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ಕಳಿಸಲಾಗಿದೆ. ಡಿವೈಎಸ್ಪಿ ಗೀತಾ, ಎಸಿ ನಾರಾಯಣ ಕನಕರಡ್ಡಿ, ಸಿಪಿಐ ಎಂ. ನಾಗರಡ್ಡಿ, ಪಿಎಸ್ಐ ಶಿವಕುಮಾರ ಮುಗ್ಗಳ್ಳಿ ಶವ ಶೋಧ ಕಾರ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
MUST WATCH
ಹೊಸ ಸೇರ್ಪಡೆ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR