ಶುದ್ಧ ನೀರಿನ ಘಟಕ ನಿರ್ಮಾಣಕ್ಕೆ ಗಡುವು

•ವಿವಿಧ ಏಜೆನ್ಸಿ-ಕಂಪನಿ ವಿರುದ್ಧ ಆಕ್ರೋಶ•ಅರೆಬರೆ ಕೆಲಸ ಮಾಡಿದವರ ಬಿಲ್ ತಡೆಹಿಡಿಯಿರಿ

Team Udayavani, Jun 14, 2019, 3:01 PM IST

kopala-tdy-3..

ಕೊಪ್ಪಳ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಅವರು ಮಾತನಾಡಿದರು.

ಕೊಪ್ಪಳ: ಜಿಲ್ಲೆಯಲ್ಲಿ ಪ್ಯಾನ್‌ ಏಷಿಯಾ ಸೇರಿದಂತೆ ವಿವಿಧ ಏಜೆನ್ಸಿಗಳು ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದ ಗುತ್ತಿಗೆ ಪಡೆದಿವೆ. ಆದರೆ ಅವುಗಳು ಸಕಾಲಕ್ಕೆ ನಿರ್ಮಾಣ ಮಾಡುತ್ತಿಲ್ಲ. ಹಾಗಾಗಿ ಜನರು ಈಗಲೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಜಿಪಂ ಅಧ್ಯಕ್ಷ ವಿಶ್ವನಾಥರಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಕಚೇರಿ ಆವರಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಗ್ರಾಮಗಳು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಅವಲೋಕಿಸಿ ಅಧಿಕಾರಿಗಳ, ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣ ಮಾಡಲಾಗಿದೆ. ಹಲವು ಕಡೆ ಅವರು ಕೆಟ್ಟು ನಿಂತಿವೆ. ಕೆಲವು ಕಡೆ ಇನ್ನೂ ಯಂತ್ರ ಅಳವಡಿಕೆ ಮಾಡಿಲ್ಲ. ಇನ್ನು ಕೆಲವೆಡೆ ಬೇಸಮೆಂಟ್ ಹಾಕಿ ಕೈ ಬಿಡಲಾಗಿದೆ. ಈ ಬಗ್ಗೆ ಯಾರನ್ನು ಕೇಳಬೇಕೆಂದರೂ ಯಾವುದೂ ಪ್ರತಿಕ್ರಿಯೆ ಸಿಗುತ್ತಿಲ್ಲ. ನನ್ನ ಕ್ಷೇತ್ರದಲ್ಲಿ ನಾನೇ ಕಾರ್ಯಕರ್ತನಿಗೆ ಹಣ ಕೊಟ್ಟು ದುರಸ್ತಿ ಕೆಲಸ ಮಾಡಿಸಿದ್ದೇನೆ. ನೀವೆಲ್ಲ ಏನು ಮಾಡುತ್ತಿದ್ದೀರಿ ಎಂದು ಪ್ಯಾನ್‌ ಏಷಿಯಾ ಸೇರಿ ವಿವಿಧ ಏಜೆನ್ಸಿಗಳ ವಿರುದ್ಧ ಗುಡುಗಿದರು.

ನಾವು ನಿತ್ಯ ಗ್ರಾಮೀಣ ಪ್ರದೇಶದಲ್ಲೇ ಇರೋರು. ಪ್ರತಿದಿನ ಜನತೆ ನೀರಿನ ಸಮಸ್ಯೆ ಬಗ್ಗೆ ನಮ್ಮ ಗಮನಕ್ಕೆ ತರುತ್ತಾರೆ. ನಾವು ಅವರಿಗೆ ಉತ್ತರ ನೀಡಬೇಕಾಗುತ್ತದೆ. ಅಧಿಕಾರಿಗಳು ಈ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಬರಿ ಪ್ರಗತಿಯಲ್ಲಿದೆ ಎನ್ನುವ ಉತ್ತರ ನೀಡುತ್ತಿದ್ದೀರಿ. ಶುದ್ಧ ಘಟಕಗಳ ನಿರ್ಮಾಣದಲ್ಲಿ ಉಪ ಗುತ್ತಿಗೆ ಪಡೆದು ಕಾಮಗಾರಿ ಅರ್ಧ ಮಾಡುತ್ತಿರಿ. ಕೂಡಲೇ ಅರೆಬರೆ ಕೆಲಸ ಮಾಡಿದ ಏಜೆನ್ಸಿಗಳ ಬಿಲ್ಗಳನ್ನು ತಡೆ ಹಿಡಿಯುವಂತೆ ಇಲಾಖೆಯ ಅಭಿಯಂತರಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ನೀರಿನ ಹಾಹಾಕಾರ ಸೃಷ್ಟಿಯಾಯಿತು. ನಮಗೆ ಏನೇ ಸಮಸ್ಯೆ ಇದ್ದರೂ ಜನತೆಗೆ ನೀರು ಕೊಡಬೇಕು. ಬಂದ ಅನುದಾನ ಖರ್ಚು ಆಗುತ್ತಿದೆ. ಆದರೆ ಸಮಸ್ಯೆ ಹಾಗೆ ಉಳಿಯುತ್ತಿದೆ. ನೀರಿನ ಸಮಸ್ಯೆ ನಿವಾರಣೆಗೆ ಸಭೆ ಕರೆದರೆ ನಮಗೆ ಸರಿಯಾದ ಮಾಹಿತಿ ಕೊಡಲ್ಲ. ಅಧಿಕಾರಿಗಳು ಸಕಾಲಕ್ಕೆ ಸಭೆಗೆ ಆಗಮಿಸಲ್ಲ. ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದರು.

300ಕ್ಕೂ ಹೆಚ್ಚು ಹಳ್ಳಿಗಳು ಕುಡಿಯುವ ನೀರಿನ ಸಮಸ್ಯಾತ್ಮಕ ಎಂದು ಹೇಳುತ್ತೀರಿ. ಆದರೆ ಅವುಗಳಿಗೆ ಏನು ಪರಿಹಾರ ತಗೆದುಕೊಂಡಿದ್ದೀರಿ? ಎಲ್ಲಿ ಕೆಲಸ ಮಾಡಿದ್ದೀರಿ ನನಗೆ ವರದಿ ಕೊಡಬೇಕು. ಪ್ಯಾನ್‌ ಏಷಿಯಾ ಸೇರಿ ಎಲ್ಲ ಏಜೆನ್ಸಿಗಳ ಬಿಲ್ ತಡೆ ಹಿಡಿದು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಬಾಕಿ ಕೆಲಸ ಮಾಡಿದರಷ್ಟೇ ಹಣ ಬಿಡುಗಡೆ ಮಾಡಬೇಕು ಎಂದರಲ್ಲದೇ, ನೀರಿನ ಸಮಸ್ಯೆ ಬಗ್ಗೆ ನಾನು ಜಿಪಂ ಸಭೆಯಲ್ಲಿ ಸದಸ್ಯರಿಗೆ ಉತ್ತರ ಕೊಡಬೇಕು ಎಂದರು.

ಬಹುಗ್ರಾಮ ಯೋಜನೆಗೆ ಗರಂ: ಇನ್ನೂ ಕೊಪ್ಪಳ ತಾಲೂಕಿನ 64 ಹಳ್ಳಿಗಳ ಕುಡಿಯುವ ನೀರಿನ ಯೋಜನೆ ಹಲವು ವರ್ಷದಿಂದ ನನೆಗುದಿಗೆ ಬಿದ್ದಿದೆ ಎಂದು ಮಾಧ್ಯಮದವರು ಪ್ರಶ್ನೆ ಮಾಡುತ್ತಿದ್ದಾರೆ. ಅದು ಡಿಸೈನ್‌ ಫೇಲ್ ಆಗಿದೆ ಎಂದು ಹೇಳುತ್ತಿದ್ದೀರಿ. ಅದಕ್ಕೆ ಮುಂದೆ ಪರಿಹಾರವೇನು? ಏಕೆ ಅರ್ಧಕ್ಕೆ ನಿಂತಿದೆ ಎಂಬ ಉತ್ತರ ಬೇಕು. ಸುಮ್ಮನೆ ಹಾರಿಕೆಯ ಉತ್ತರ ಹೇಳಬೇಡಿ. ನಾನೇ ಅಲ್ಲಿಗೆ ತೆರಳಿ ಪರಿಶೀಲನೆ ಮಾಡುವೆ ಎಂದರಲ್ಲದೇ, ಯಲಬುರ್ಗಾ-ಕುಷ್ಟಗಿ ತಾಲೂಕಿನ 700 ಕೋಟಿ ರೂ. ಮೊತ್ತದ ಬಹು ದೊಡ್ಡ ಕುಡಿಯುವ ನೀರಿನ ಯೋಜನೆಗೆ ಹುನಗುಂದ ಭಾಗದಲ್ಲಿ ತೊಂದರೆಯಾಗುತ್ತಿದೆ. ಅಲ್ಲಿ ಏನು ಸಮಸ್ಯೆ ಎಂಬುದು ಪಕ್ಕಾ ತಿಳಿಯಬೇಕು. ನಮ್ಮ ಜನರಿಗೆ ನೀರಿನ ಸಮಸ್ಯೆಯಾಗದಂತೆ ಸರ್ಕಾರದ ಮಟ್ಟದಲ್ಲಿ ಜಿಪಂನಿಂದ ಒತ್ತಡ ಹಾಕಿ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಬೇಕೆಂದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಎನ್‌.ಕೆ. ತೊರವಿ, ಕುಡಿಯುವ ನೀರು ಸರಬರಾಜು ಉಪ ವಿಭಾಗದ ಅಭಿಯಂತರ ತಿರಕನಗೌಡರ್‌ ಸೇರಿದಂತೆ ವಿವಿಧ ತಾಲೂಕಿನ ಎಇಇಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.