ಜಿಲ್ಲೆಯಲ್ಲಿ ಜಿಂಕೆವನ ಸ್ಥಾಪಿಸಿ
Team Udayavani, Jul 12, 2021, 8:05 PM IST
ಕೊಪ್ಪಳ: ಜಿಲ್ಲೆಯಲ್ಲಿ ಜಿಂಕೆ ಹಾವಳಿ ಹೆಚ್ಚಾಗುತ್ತಿದ್ದು, ಸರ್ಕಾರಕ್ಕೆ ಜಿಂಕೆ ವನ ಸ್ಥಾಪನೆ ಮಾಡಿ ಎಂದು ಹಲವು ಬಾರಿ ಒತ್ತಾಯ ಮಾಡಲಾಗಿದೆ. ಆದರೂ ಸರ್ಕಾರ ಕಾಳಜಿ ವಹಿಸಿಲ್ಲ. ಇನ್ನಾದರೂ ರೈತರ ಸಮಸ್ಯೆ ಅರಿತು ಜಿಂಕೆವನ ಸ್ಥಾಪಿಸಿ ರೈತರ ಹಿತ ಕಾಪಾಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಅಧ್ಯಕ್ಷ ಅಂದಪ್ಪ ರುದ್ರಪ್ಪ ಕೋಳೂರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ರೈತರು ತಮ್ಮ ಹೊಲಗಳಲ್ಲಿ ಬೆಳೆಗಳನ್ನು ಉಳಿಸಿಕೊಳ್ಳಲು, ಜಿಂಕೆ ಹಾವಳಿ ತಪ್ಪಿಸಲು ಪ್ಲಾಸ್ಟಿಕ್ ಹಾಳೆಯನ್ನು ಹೊಲದ ಸುತ್ತಲು ಕಟ್ಟುತ್ತಿದ್ದಾರೆ. ಇದರಿಂದ ಜಿಂಕೆಗಳು ಹಾಳೆಯ ಶಬ್ಧಕ್ಕೆ ಹೆದರಿ ಬರುವುದಿಲ್ಲ. ಕೆಲವರು ಹೊಲದಲ್ಲಿ ಗೊಂಬೆಗಳನ್ನು ಮಾಡಿಸಿ ನಿಲ್ಲಿಸುತ್ತಿದ್ದಾರೆ. ರೈತರು ವಿವಿಧ ಯತ್ನ ನಡೆಸಿ ಬೆಳೆ ರಕ್ಷಣೆಗೆ ಮುಂದಾದರೂ ಜಿಂಕೆಗಳು ಹೊಲದಲ್ಲಿ ಹಗಲು-ರಾತ್ರಿ ಸುತ್ತಾಡಿ ಬೆಳೆ ಹಾನಿ ಮಾಡುತ್ತಿವೆ. ಇದರಿಂದ ಬೆಳೆ ಕೈಗೆ ಬರುವ ಹಂತದಲ್ಲಿಯೇ ಎಲ್ಲವೂ ಹಾನಿಗೀಡಾಗುತ್ತಿದೆ. ಇಲ್ಲಿನ ಬೆಳೆ ಹಾನಿಯ ಕುರಿತು ಜನಪ್ರತಿನಿಧಿಗಳಿಗೆ ಗೊತ್ತಿದ್ದರೂ ಮೌನವಾಗಿ ಕುಳಿತಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಜಮೀನಿಗೆ ಬಂದು ನೋಡುತ್ತಿಲ್ಲ. ರೈತರ ಸಂಕಷ್ಟ ಆಲಿಸುತ್ತಿಲ್ಲ. ಸರ್ಕಾರ ಇಂತ ಸಮಸ್ಯೆ ಅರಿತು ಕೂಡಲೇ ಜಿಂಕೆವನ ನಿರ್ಮಾಣ ಮಾಡಿ ಜಿಂಕೆ ಕಾಟವನ್ನು ತಪ್ಪಿಸಲು ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ
Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ