ವಸತಿ ಶಾಲೆ ಉದ್ಘಾಟನೆ ವಿಳಂಬ


Team Udayavani, Dec 13, 2021, 12:36 PM IST

ವಸತಿ ಶಾಲೆ ಉದ್ಘಾಟನೆ ವಿಳಂಬ

ಕುಕನೂರು: ತಾಲೂಕಿನ ಮಂಗಳೂರು-ರ್ಯಾವಣಕಿ ಮಧ್ಯೆದಲ್ಲಿ ಇಂದಿರಾ ಗಾಂಧಿ  ವಸತಿ ಶಾಲೆ ಕಟ್ಟಡ ನಿರ್ಮಾಣವಾಗಿ ಬರೊಬ್ಬರಿ 2 ವರ್ಷಗಳೇ ಗತಿಸಿವೆ.ಆದರೂ ಉದ್ಘಾಟನೆ ಭಾಗ್ಯವನ್ನೇ ಕಂಡಿಲ್ಲ. ಈಗಲೂವಸತಿ ನಿಲಯದ ವಿದ್ಯಾರ್ಥಿಗಳು ಬಾಡಿಗೆ ಕಟ್ಟಡದಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ. ಬಾಡಿಗೆ ಕಟ್ಟಡದಲ್ಲಿ ಸರಿಯಾದ ಸೌಲಭ್ಯಗಳು ಇಲ್ಲ ಎನ್ನುವ ಆಪಾದನೆ ಕೇಳಿ ಬಂದಿವೆ.

ಬಡ ವಿದ್ಯಾರ್ಥಿಗಳಿಗೆ ನೆರವಾಗಲಿ, ಅವರಿಗೆ ಗುಣಮಟ್ಟದ ಶಿಕ್ಷಣ ದೊರೆಯಲಿ. ಯಾವುದೇಆರ್ಥಿಕತೆಯ ಸಮಸ್ಯೆಯು ವಿದ್ಯಾರ್ಥಿಗಳ ಶೈಕ್ಷಣಿಕ ಅಭ್ಯಾಸದ ಮೇಲೆ ಪರಿಣಾಮ ಬೀರದಿರಲಿ ಎಂಬಉದ್ದೇಶದಿಂದಾಗಿ ಸರ್ಕಾರವು ವಸತಿ ನಿಲಯದಪರಿಕಲ್ಪನೆ ಜಾರಿ ತಂದಿದೆ. ಅದರಂತೆ 2016-17ರಲ್ಲಿ ಮಂಗಳೂರು ಹಾಗೂ ರ್ಯಾವಣಕಿ ಮಧ್ಯ ಇಂದಿರಾ ಗಾಂಧಿ ವಸತಿ ಶಾಲೆ ಮಂಜೂರು ಮಾಡಿದೆ. ಕಟ್ಟಡ ನಿರ್ಮಾಣವಾಗಿ ಬರೊಬ್ಬರಿ ಎರಡು ವರ್ಷ ಗತಿಸಿವೆ.ಆದರೆ ಆ ಶಾಲೆಯ ವಿದ್ಯಾರ್ಥಿಗಳು ಇಂದಿಗೂ ಬಾಡಿಗೆ ಕಟ್ಟಡದಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ.

ಸ್ವಂತ ಕಟ್ಟಡವಿದ್ದರೂ ಬಾಡಿಗೆ ಯಾಕೆ?: ಪ್ರಸ್ತುತ ಕುಕನೂರಿನ ಖಾಸಗಿ ಗೋದಾಮಿನಲ್ಲಿ ವಸತಿ ಶಾಲೆ6ರಿಂದ 10ನೇ ತರಗತಿವರೆಗೂ 245 ವಿದ್ಯಾರ್ಥಿಗಳುಅಭ್ಯಾಸ ಮಾಡುತ್ತಿದ್ದಾರೆ. ಇದರಲ್ಲೇ ನಾಲ್ಕು ವಿಭಾಗ ಮಾಡಿ ಒಂದೊಂದು ಕಡೆ ವಿದ್ಯಾರ್ಥಿಗಳಿಗೆ ಮತ್ತೂಂದು ಕಡೆ ವಿದ್ಯಾರ್ಥಿನಿಯರಿಗೆ ಪಾಠ ಮಾಡಲಾಗುತ್ತಿದೆ. ವಿದ್ಯಾರ್ಥಿನಿಯರು ಇರುವ ಗೋದಾಮಿನ ಪಕ್ಕದಲ್ಲಿಅಡುಗೆ ಕೋಣೆಯಿದೆ. ಊಟ ತಯಾರಿಸುವಾಗ ಹೊಗೆಬರುತ್ತದೆ. ಇದರಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೂ ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳಿರುವ ಸ್ಥಳದಪಕ್ಕದಲ್ಲಿ ಶೌಚಾಲಯ ಮತ್ತು ಸ್ನಾನಗೃಹಗಳಿದ್ದು,ದರ್ವಾಸನೆ ಮಧ್ಯೆ ಅಭ್ಯಾಸ ಮಾಡಬೇಕಿದೆ. ಮಕ್ಕಳಿಗೆಆಟದ ಮೈದಾನವಿಲ್ಲ. ತಗಡಿನ ಮೇಲ್ಛಾವಣಿ ಕೆಳಗೆಮಕ್ಕಳು ಮಳೆ, ಬಿಸಿಲು, ಚಳಿಗಾಲದಲ್ಲಿ ಅಭ್ಯಾಸ ಮಾಡಬೇಕಾಗಿದೆ.

ತರಗತಿ ನಡೆಯುವ ವೇಳೆ ಕೋತಿಗಳು ತಗಡಿನ ಮೇಲೆ ಹಾರಾಡಿದರೆ ಬೆಚ್ಚಿ ಬೀಳುವಂತಾಗುತ್ತದೆ. ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಕೋಟಿ ಕೋಟಿಖರ್ಚು ಮಾಡುತ್ತಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಸ್ವಂತಕಟ್ಟಡವೂ ನಿರ್ಮಾಣವಾಗಿದೆ. ಆದರೆ ಅಲ್ಲಿಗೆ ತೆರಳಿ ಅಭ್ಯಾಸ ಮಾಡುವಂತಿಲ್ಲ. ಏಕೆಂದರೆ ಕಟ್ಟಡವನ್ನು ಇನ್ನು ಇಲಾಖೆಗೆ ಹಸ್ತಾಂತರ ಮಾಡಿಲ್ಲ. ಹಾಗಾಗಿ ಸರ್ಕಾರಿಕಟ್ಟಡ ಉದ್ಘಾಟನೆಯ ಭಾಗ್ಯವನ್ನು ಕಂಡಿಲ್ಲ. ಇನ್ನು ವಸತಿ ಶಾಲೆಗೆ ಸ್ವಂತ ಕಟ್ಟಡವಿದ್ದರೂ ಬಾಡಿಗೆ ಕಟ್ಟಡದಲ್ಲಿ ಇನ್ನೂ ಮುಂದುವರಿಯುತ್ತಿರುವುದು ಏಕೆ? ಎನ್ನುವ ಅನುಮಾನ ಮೂಡಿದೆ. ಇಲ್ಲಿ ಬಾಡಿಗೆ ಕಟ್ಟಡಕ್ಕೆ ಸರ್ಕಾರಎರಡು ವರ್ಷದಿಂದ ಸುಮ್ಮನೆ ಲಕ್ಷಾಂತರ ರೂ. ವ್ಯಯಿಸುವುದು ಮಾತ್ರ ಸುಳ್ಳಲ್ಲ. ಜಿಲ್ಲಾ ಮಂತ್ರಿಗಳು, ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟ ತಪ್ಪಿಸಬೇಕಿದೆ.ವಿದ್ಯಾರ್ಥಿಗಳಿಗೆ ಸಕಲ ಸೌಲಭ್ಯ ಇರುವ ಸ್ವಂತ ಸರ್ಕಾರಿಕಟ್ಟಡವನ್ನು ಉದ್ಘಾಟಿಸಿ ಅವರ ಶಿಕ್ಷಣಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕಿದೆ.

 

ಕಟ್ಟಡ ಕಾಮಗಾರಿ ಮುಗಿದು ಎರಡು ವರ್ಷಕಳೆದಿವೆ. ನಾವು ಇಲಾಖೆಗೆ ಕಟ್ಟಡಹಸ್ತಾಂತರಿಸಲು ತೆರಳಿದರೆ ಅವರು ತೆಗೆದುಕೊಳ್ಳುತ್ತಿಲ್ಲ. ಬೇಕಿದ್ದರೆ ನಮ್ಮ ಕಟ್ಟಡದ ಕಾಮಗಾರಿ ಕಳಪೆಯಾಗಿದ್ದರೆ ಅದನ್ನುಪರಿಶೀಲನೆ ಮಾಡಲಿ. ಅವರು ಏಕೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ನಮಗೂ ಗೊತ್ತಿಲ್ಲ.  –ಪ್ರವೀಣ, ಗುತ್ತಿಗೆದಾರ

 

ವಸತಿ ಶಾಲೆ ನಿರ್ಮಾಣಗೊಂಡಿರುವ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಚುನಾವಣೆ ಮುಗಿದ ತಕ್ಷಣ ಉದ್ಘಾಟನೆ ದಿನಾಂಕ ನಿಗದಿಗೊಳಿಸಿ ಪ್ರಾರಂಭಿಸುವ ಸಿದ್ಧತೆ ನಡೆದಿದೆ.– ರವಿಶಂಕರ್‌, ಎಇಇ

 

ವಸತಿ ಶಾಲೆ ಕಟ್ಟಡ ನಿರ್ಮಾಣದ ಕಾಮಗಾರಿ ಮುಗಿದಿದೆ ಎಂದು ಗುತ್ತಿಗೆದಾರರು ಹೇಳಿದ್ದಾರೆ. ನಾವೂ ಸಹ ಬಾಡಿಗೆ ಕಟ್ಟಡದಲ್ಲಿನ ಸಮಸ್ಯೆಗಳ ಕುರಿತು ಜಿಲ್ಲಾ ಅಧಿಕಾರಿಗಳ ಗಮನಕ್ಕೆತಂದಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಲೋಕಾರ್ಪಣೆ ದಿನಾಂಕ ನೀಡಲಾಗುವುದು ಎಂದು ತಿಳಿಸಿದ್ದಾರೆ. -ಗುರುಪಾದಪ್ಪ ಸೂಡಿ, ವಸತಿ ಶಾಲೆ ಪ್ರಾಚಾರ್ಯ

-ಬಸವರಾಜ ಕೊನ್ನಾರಿ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.