ಜೈನ ಸಿಮೀತರ್ ಶಿಖರ್ ಕ್ಷೇತ್ರ ಪ್ರವಾಸಿ ಕೇಂದ್ರ ಘೋಷಣೆ ರದ್ದುಗೊಳಿಸಲು ಆಗ್ರಹ
Team Udayavani, Dec 21, 2022, 8:16 PM IST
ಗಂಗಾವತಿ: ಜಾರ್ಖಂಡ್ ರಾಜ್ಯದಲ್ಲಿರುವ ಜೈನರ ಪವಿತ್ರ ಕ್ಷೇತ್ರವಾಗಿರುವ ಜೈನ ಸಿಮೀತರ್ ಶಿಖರ್ ಕ್ಷೇತ್ರವನ್ನು ಪ್ರವಾಸಿಕೇಂದ್ರ ಎಂದು ಘೋಷಣೆ ಮಾಡಿದ್ದನ್ನು ರದ್ದುಗೊಳಿಸಲು ಆಗ್ರಹಿಸಿ ಗಂಗಾವತಿ ಜೈನ ಸಮಾಜ ಹಾಗೂ ಶ್ರೀ ಪಾರ್ಶ್ವನಾಥ ಜೈನ ಶ್ವೇತಾಂಬರ ಮಂದಿರ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿ ಹಾಗೂ ಜಾರ್ಖಂಡ್ ರಾಜ್ಯದ ಸಿಎಂಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜೈನ ಸಮಾಜದ ಮುಖಂಡ ಉಗಮ್ ರಾಜ್ ಬಂಬ್ ಜೈನ್ ಹಾಗೂ ಭವರ್ ಲಾಲ್ ಜೈನ್ ಮಾತನಾಡಿ, ಜಾರ್ಖಂಡ್ ರಾಜ್ಯದಲ್ಲಿರುವ ಜೈನರ ಪವಿತ್ರ ಕ್ಷೇತ್ರವಾಗಿರುವ ಜೈನ್ ಸಿಮೀತರ್ ಶಿಖರ್ ಕ್ಷೇತ್ರವನ್ನು ಪ್ರವಾಸಿಕೇಂದ್ರ ಎಂದು ಘೋಷಣೆ ಮಾಡಿದ್ದು ಸರಿಯಲ್ಲ.ಇದರಿಂದ ಜೈನ ಕ್ಷೇತ್ರ ಅಪವಿತ್ರವಾಗುವ ಸಾಧ್ಯತೆ ಇದೆ. ಈ ಮೊದಲಿನಂತೆ ಜೈನ್ ಕ್ಷೇತ್ರವಾಗಿ ಮಾತ್ರ ಇರಲು ಅನುವು ಮಾಡಿಕೊಡಬೇಕು. ಇದರಿಂದ ಇಲ್ಲಿಯ ಪರಿಸರ ಶುದ್ಧವಾಗಿರಲು ಸಾಧ್ಯವಾಗುತ್ತದೆ. ಕೇಂದ್ರ ಸರಕಾರದ ಆದೇಶ ಕೂಡಲೇ ರದ್ದುಗೊಳಿಸುವಂತೆ ಮನವಿ ಮಾಡಿದರು.
ಉಗಮರಾಜ್, ಬಾಬುಲಾಲ್ ಭಾಂಠಿಯಾ, ಅಜೀತರಾಜ್ ಸುರಾನ್, ಪ್ರಕಾಶ ಛೋಪ್ರಾ, ದಿಲೀಪ್, ಗಣಪತಿರಾಜ್, ಮಹಾವೀರ, ಕಾಂತಿಲಾಲ್, ಉದಯಕುಮಾರ, ನೂತನಕುಮಾರ, ಉದಯ್, ಅಶೋಕ, ಬಾಹುಬಲಿ ಜೈನ್,ರಾಕೇಶ, ನಿರ್ಮಲ್, ಸುಭಾಸ, ದೀರೇಶ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್