ವೇತನ ವಿಳಂಬ ಖಂಡಿಸಿ ಸಾಮೂಹಿಕ ರಜೆಗೆ ಆಗ್ರಹ
Team Udayavani, Nov 15, 2018, 5:31 PM IST
ಯಲಬುರ್ಗಾ: ಸ್ಥಳೀಯ ಪಟ್ಟಣದ ಪಪಂ ಕಚೇರಿಯ ವಿವಿಧ ವಿಭಾಗಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರ ನೌಕರರ ವೇತನ ವಿಳಂಬ ಖಂಡಿಸಿ ಪೌರ ಸೇವಾ ನೌಕರರು ಬುಧವಾರ ಸಾಮೂಹಿಕ ಅನಿರ್ಧಿಷ್ಟಾವಧಿ ರಜೆ ಮಂಜೂರು ಮಾಡುವಂತೆ ಒತ್ತಾಯಿಸಿ ತಹಶೀಲ್ದಾರ್ ರಮೇಶ ಅಳವಂಡಿಕರಗೆ ಮನವಿ ಸಲ್ಲಿಸಿದರು.
ಪೌರ ಸೇವಾ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕುಮಾರ ಸರಗಣಾಚಾರ ಮಾತನಾಡಿ, ಪಪಂನಲ್ಲಿ ಕಾರ್ಯನಿರ್ವಹಿಸುವ ಪೌರ ನೌಕರರಿಗೆ ಐದಾರು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಸಕಾಲಕ್ಕೆ ವೇತನ ಸಿಗದೇ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ. ಸ್ಥಗಿತ ವೇತನ ಹಾಗೂ ಹಬ್ಬದ ಮುಂಗಡ ಕೂಡ ಪಾವತಿಸಲಿಲ್ಲ, ಹೀಗಾಗಿ ಹಬ್ಬಗಳ ಆಚರಣೆ ಮಾಡದೇ ನಮ್ಮ ಕುಟುಂಬಗಳು ಆರ್ಥಿಕ ಸಂಕಷ್ಟದಲ್ಲಿವೆ. ವೇತನ ಪಾವತಿಯಾಗದೇ ಇರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗಿದೆ. ಶೀಘ್ರದಲ್ಲಿ ಬಾಕಿ ವೇತನ ಪಾವತಿ ಮಾಡಬೇಕು ಇಲ್ಲದಿದ್ದರೇ ಪೌರ ಸೇವಾ ನೌಕರರು ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟ ರಜೆಯಲ್ಲಿ ಮುಂದುವರಿಯುತ್ತೇವೆ ಎಂದು ಎಚ್ಚರಿಸಿದರು.
ಮನವಿ ಪತ್ರ ಸ್ವೀಕರಿಸಿ ತಹಶೀಲ್ದಾರ್ ರಮೇಶ ಅಳವಂಡಿಕರ್ ಮಾತನಾಡಿ, ಪೌರ ನೌಕರರ ಬೇಡಿಕೆಗಳು ನ್ಯಾಯಯುತವಾಗಿವೆ. ಶೀಘ್ರದಲ್ಲಿ ವೇತನ ಮಂಜೂರು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿ ವೇತನ ಪಾವತಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂಬ ಭರವಸೆ ನೀಡಿದರು. ಪೌರ ಸೇವಾ ನೌಕರರಾದ ರಮೇಶ ಬೆಲೇರಿ, ಬಸವಲಿಂಗಪ್ಪ ಭಾಸ್ಕರ್, ರವಿ ಪೋತೆದಾರ್, ಉಮೇಶ ಬೇಲಿ, ನಾರಾಯಣ ಗಂಗಾಖೇಡ, ಯಂಕಣ್ಣ ಜೋಶಿ, ಚೆನ್ನಯ್ಯ ಹಿರೇಮಠ, ಸುಭಾಷ ಭಾವಿಮನಿ, ಸೀಮಣ್ಣ ಬನ್ನಿಮರದ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ