ಡೆಂಘೀಗೆ ಭಯ ಪಡುವ ಅಗತ್ಯವಿಲ್ಲ
•ನೀರಿನ ಪಾತ್ರೆಗಳನ್ನು ಸದಾ ಮುಚ್ಚಿಡಿ•ಜ್ವರ ಬಂದರೆ ವೈದ್ಯರಲ್ಲಿ ಶೀಘ್ರ ತಪಾಸಣೆ ಮಾಡಿಸಿಕೊಳ್ಳಿ
Team Udayavani, May 18, 2019, 2:25 PM IST
ಕೊಪ್ಪಳ: ನಗರದಲ್ಲಿ ಆರೋಗ್ಯ ಇಲಾಖೆ ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ| ಲಿಂಗರಾಜ್ ಚಾಲನೆ ನೀಡಿದರು.
ಕೊಪ್ಪಳ: ನಗರದ ಹಳೇ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಡೆಂಘೀ ದಿನಾಚರಣೆಯ ಅಂಗವಾಗಿ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡ ಜನ ಜಾಗೃತಿ ಜಾಥಕ್ಕೆ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ| ಲಿಂಗರಾಜ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಡೆಂಘೀ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲದಿದ್ದರೂ ಜನರೂ ಭಯಪಡುವ ಅವಶ್ಯಕತೆಯಿಲ್ಲ. ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಮತ್ತು ಪ್ರಯೋಗಾಲಯ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಜನರು ಅನಗತ್ಯ ಭಯಕ್ಕೆ ಒಳಗಾಗದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಜಂಬಯ್ಯ ಬಿ. ಮಾತನಾಡಿ, ಡೆಂಘೀ ಜ್ವರವು ಈಡಿಸ್ ಜಾತಿಯ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಇವು ಹಗಲು ಹೊತ್ತಿನಲ್ಲೇ ಕಚ್ಚುತ್ತವೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ ಶುದ್ಧ ನೀರಿನಲ್ಲಿಯೇ ಸಂತಾನಾಭಿವೃದ್ಧಿ ಮಾಡುತ್ತವೆ. ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರ ವಹಿಸಿ ಸೊಳ್ಳೆ ಉತ್ಪತ್ತಿಯನ್ನು ತಡೆಗಟ್ಟಲು, ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಲು ಜನಸಮುದಾಯಕ್ಕೆ ತಿಳಿಸಿದರು.
ಜಿಲ್ಲಾ ಕೀಟಜನ್ಯ ರೋಗಗಳ ಸಲಹೆಗಾರ ರಮೇಶ್ ಕೆ. ಮಾತನಾಡಿ, ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಬೇಕು. ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣೆ ಸಲಕರಣೆಗಳನ್ನು ಖಾಲಿ ಮಾಡಿ ಸ್ವಚ್ಛಗೊಳಿಸಿ ನೀರು ತುಂಬಿ ಮುಚ್ಚಿಡಲು ಜನಸಮುದಾಯಕ್ಕೆ ಮನವಿ ಮಾಡಿದರು. ಡೆಂಘೀ ಜ್ವರ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನ ಜಾಗೃತಿಯೊಂದೇ ಪರಿಹಾರ ಮಾರ್ಗ ಎಂದರು.
ಕೊಪ್ಪಳ ತಾಲೂಕು ಆರೋಗ್ಯಾಧಿಕಾರಿ ಡಾ| ರಾಮಾಂಜನೇಯಲು, ರಸಾಯನಿಕ ಪರೀಕ್ಷಕ ಡಾ| ಪ್ರಶಾಂತ್, ಉಪ ಜಿಲ್ಲಾ ಆರೋಗ್ಯ ಶಿಕ¡ಣಾಧಿಕಾರಿ ಶಿವಾನಂದ ಪೂಜಾರ ಸೇರಿದಂತೆ ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿ, ಕಿರಿಯ ಮಹಿಳಾ ತರಬೇತಿ ಕೇಂದ್ರದ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು, ಕೊಪ್ಪಳ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಹಾಗೂ ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು