ಕುಷ್ಟಗಿ: 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳ ಆಯೋಜನೆ ಕುರಿತು ಚರ್ಚೆ


Team Udayavani, Nov 4, 2022, 10:52 AM IST

news-5

ಕುಷ್ಟಗಿ: ತಾಲೂಕಿನ ಹನುಮಸಾಗರದಲ್ಲಿ ನಿಗದಿಯಾಗಿದ್ದ ಕೋವಿಡ್ 2ನೇ ಅಲೆ ಕಾರಣದಿಂದ ಮುಂದೂಡಿದ್ದ 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮತ್ತೆ ಆಯೋಜಿಸುವುದು ಯಾವಾಗ ಎಂಬ ಪ್ರಶ್ನೆ ಸಾಹಿತ್ಯ ವಲಯದಲ್ಲಿ ವ್ಯಕ್ತವಾಗಿದೆ.

ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಹಿಂದಿನ ಅಧ್ಯಕ್ಷ ರಾಜಶೇಖರ ಅಂಗಡಿ ನೇತೃತ್ವದಲ್ಲಿ ಕಳೆದ 2021ರ ಏಪ್ರೀಲ್ 1-2ರಂದು ಸಮ್ಮೇಳನ ಆಯೋಜಿಸಲು ಉತ್ಸುಕರಾಗಿದ್ದರು. ಆಗ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ತಜ್ಞ ಡಾ. ಉದಯ ಪುರಾಣಿಕರನ್ನು ಸಮ್ಮೇಳನಾಧ್ಯಕರನ್ನಾಗಿ ಆಯ್ಕೆಯೂ ಆಗಿತ್ತು.

ಸಮ್ಮೇಳನಾಧ್ಯಕ್ಷರಿಗೆ ಕಸಾಪ ಅಧಿಕೃತ ಅಹ್ವಾನ ನೀಡಲಾಗಿತ್ತು. ಇನ್ನೇನು ಸಮ್ಮೇಳನ ಕೇವಲ ನಾಲ್ಕು ದಿನಗಳು ಇರುವಾಗಲೇ ಆಗಿನ ತಹಶೀಲ್ದಾರ ಎಂ.ಸಿದ್ದೇಶ‌, ಸರ್ಕಾರದ ಕೋವಿಡ್ ಮುನ್ನೆಚ್ಚರಿಕೆ ಆದೇಶ ನೆಪವೊಡ್ಡಿ ಕೋವಿಡ್ 2ನೇ ಅಲೆ ಕಾರಣದಿಂದ ಅವಕಾಶ ನಿರಾಕರಿಸಿದ್ದರಿಂದ ಸಮ್ಮೇಳನ ಅನಿವಾರ್ಯವಾಗಿ ಮುಂದೂಡಬೇಕಾಯಿತು.

ಕಳೆದ ಅವಧಿಯ ಕಸಾಪ ಜಿಲ್ಲಾಧ್ಯಕ್ಷರಾಗಿದ್ದ ರಾಜಶೇಖರ ಅಂಗಡಿ, ಹನುಮಸಾಗರದಲ್ಲಿ ನಿಗದಿಯಾಗಿದ್ದ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದ್ದು, ರದ್ದುಪಡಿಸಿಲ್ಲ. ಮುಂದಿನ ಅಧ್ಯಕ್ಷರ ನೇತೃತ್ವದಲ್ಲಿ ಸಮ್ಮೇಳನ ಆಯೋಜನೆಯಾಗಲಿದ್ದು, ಸಮ್ಮೇಳನ ಸ್ಥಳ, ಸರ್ವಾಧ್ಯಕ್ಷರು ಬದಲಾಗದು ಎಂದಿದ್ದರು.

ನಂತರ ಕಸಾಪ ಚುನಾವಣೆಗಳು ನಡೆದು ಕಸಾಪ ಜಿಲ್ಲಾ ಅಧ್ಯಕ್ಷರಾಗಿ‌ ಶರಣಗೌಡ ಪೊಲೀಸ ಪಾಟೀಲ ಚುನಾಯಿತರಾದ ಬಳಿಕ ಅಧ್ಯಕ್ಷರ ನೇತೃತ್ವದಲ್ಲಿ ಸಮ್ಮೇಳನ ಆಯೋಜಿಸುವ ಬಗ್ಗೆ ಚಕಾರವೆತ್ತದೇ ಇರುವುದು ಇದೀಗ ಪ್ರಶ್ನೆಯಾಗಿದೆ.

ಸದ್ಯ ಯಾವುದೇ ಕೋವಿಡ್ ಭಯ ಇಲ್ಲ. ಕೋವಿಡ್ ಕಾರಣದಿಂದ 2020-21ನೇ ಜಿಲ್ಲಾ ಸಮ್ಮೇಳನದ ಅನುದಾನ 5 ಲಕ್ಷ ರೂ. ಬಳಸಿಕೊಳ್ಳದೆ ಹಾಗೆಯೇ ಇದ್ದು, ಈ ಅನುದಾನವನ್ನು 2022-23ನೇ ಸಾಲಿನ ಅನುದಾನದಲ್ಲಿ ಮುಂದೂಡಿದ ಸಮ್ಮೇಳನ ವಾರ್ಷಾಂತ್ಯದಲ್ಲಿ ಆಯೋಜಿಸಬೇಕೆನ್ನುವ ಹಕ್ಕೋತ್ತಾಯ ಸಾಹಿತ್ಯಾಸಕ್ತರಿಂದ ವ್ಯಕ್ತವಾಗಿದೆ.

ಕಸಾಪ ರಾಜ್ಯಾಧ್ಯಕ್ಷರ ಅನುಮತಿ?:

ಜಿಲ್ಲೆಯಲ್ಲಿ ತಾಲೂಕು- ಜಿಲ್ಲಾ ಸಮ್ಮೇಳನ ರಾಜ್ಯಾಧ್ಯಕ್ಷ ಡಾ.ಮಹೇಶ ಜೋಷಿ ಅನುಮತಿ ಪಡೆದುಕೊಳ್ಳುವ ನಿಯಮವಿದೆ. ಅದರೆ ಹಾವೇರಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಬಳಿಕ ತಾಲೂಕು-ಜಿಲ್ಲಾ ಸಮ್ಮೇಳನ ಆಯೋಜಿಸಬೇಕೆನ್ನುವ ನಿರ್ದೇಶನ ಸರಿ ಅಲ್ಲ. ಹಾವೇರಿಯ ರಾಜ್ಯ ಮಟ್ಟದ ಅಖಿಲ ಭಾರತ ಸಮ್ಮೇನಳನ ಮುಗಿಯುವವರೆಗೂ ಕಾಯಬೇಕೆ? ಎನ್ನುವ ಪ್ರಶ್ನೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.