Ganesha ವಿಸರ್ಜನೆ: ಹಿಂದೂ ಯುವಕರ ಮೇಲಿನ ಕೇಸ್ ಕೈ ಬಿಡುವಂತೆ ಸಂಸದ ಕರಡಿ ಸಂಗಣ್ಣ ಆಗ್ರಹ


Team Udayavani, Oct 7, 2023, 7:50 PM IST

Ganesha ವಿಸರ್ಜನೆ: ಹಿಂದೂ ಯುವಕರ ಮೇಲಿನ ಕೇಸ್ ಕೈ ಬಿಡುವಂತೆ ಸಂಸದ ಕರಡಿ ಸಂಗಣ್ಣ ಆಗ್ರಹ

ಗಂಗಾವತಿ: ಗಣೇಶನ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪೊಲೀಸರು ಹಿಂದೂ ಮಹಾಮಂಡಳಿಯ ಐವರು ಕಾರ್ಯಕರ್ತರ ಮೇಲೆ ಕಾಣದ ಕೈಗಳ ಒತ್ತಡ ಮಣಿದು ಕೇಸ್ ದಾಖಲಿಸಿದ್ದಾರೆ. ಕೂಡಲೇ ಕೇಸ್ ವಾಪಸ್ ಪಡೆಯುವಂತೆ ಸಂಸದ ಕರಡಿ ಸಂಗಣ್ಣ ಹಾಗೂ ಮಾಜಿ ಶಾಸಕ ಪರಣ್ಣ ಮುನವಳ್ಳಿ ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಅವರು ಶನಿವಾರ ಕೇಸ್ ದಾಖಲಾಗಿರುವ ಹಿಂದೂ ಕಾರ್ಯಕರ್ತರ ಮನೆ ತೆರಳಿ ಕುಟುಂಬದವರಿಗೆ ಧೈರ್ಯ ತುಂಬಿ ಮಾತನಾಡಿದರು.

ಘಟನೆ ಸತ್ಯಾಸತ್ಯತೆಯನ್ನು ಪರಿಶೀಲಿಸದೇ ಪೊಲೀಸರು ಯುವಕರ ವಿರುದ್ಧ ಪ್ರಕರಣ ದಾಖಲಿಸಿರುವುದು ಖಂಡನೀಯವಾಗಿದ್ದು, ತಕ್ಷಣ ಈ ಪ್ರಕರಣವನ್ನು ಹಿಂದಕ್ಕೆ ಪಡೆಯುಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮತ್ತು ಡಿವೈಎಸ್‌ಪಿ ಅವರಿಗೆ ಒತ್ತಾಯಿಸಲಾಗುತ್ತದೆ. ಗಂಗಾವತಿಯಲ್ಲಿ ಅನವಶ್ಯಕವಾಗಿ ಈ ರೀತಿ ಪ್ರಕರಣ ದಾಖಲು ಮಾಡಿ ಭಯ, ಭೀತಿ ಸೃಷ್ಟಿ ಮಾಡಬಾರದು ಎಂದು ಸರಕಾರದ ಗಮನಕ್ಕೂ ತರಲಾಗುವುದು ಎಂದರು.

ಗಂಗಾವತಿಯಲ್ಲಿ ಕಳೆದ ಎಂಟತ್ತು ವರ್ಷಗಳಿಂದ ಸೌಹಾರ್ದತೆಯಿಂದ ಗಣೇಶ ಹಬ್ಬ ಆಚರಿಸುತ್ತಾ ಬರಲಾಗುತ್ತಿದೆ. ಪ್ರತಿ ವರ್ಷವು ಗಣೇಶ ಮೆರವಣಿಗೆಯಲ್ಲಿ ಆರತಿ ಮಾಡಿ ವಿವಿಧ ರೀತಿಯಲ್ಲಿ ನೃತ್ಯ ಮಾಡುವುದು ವಾಡಿಕೆಯಾಗಿದೆ. ಆದರೆ ಇಷ್ಟು ವರ್ಷ ಯಾವುದೇ ಪ್ರಕರಣ ದಾಖಲಿಸದ ಪೊಲೀಸರು ಈ ವರ್ಷ ಹಿಂದು ಸಂಘಟನೆ ಐದು ಜನ ಕಾರ್ಯಕರ್ತರು ಮತ್ತು ಗಣೇಶ ಸಮಿತಿಯ ಒಂಬತ್ತು ಯುವಕರ ವಿರುದ್ಧ ಪ್ರಚೋದನಕಾರಿ ಘಟನೆ ನಡೆಸಿದ್ದಾರೆ ಎಂಬ ಕಾರಣ ನೀಡಿ ಪ್ರಕರಣ ದಾಖಲಿಸಿರುವುದು ಸರಿಯಲ್ಲ. ತಕ್ಷಣ ಪೊಲೀಸ್ ಅಧಿಕಾರಿಗಳು ಪ್ರಕರಣವನ್ನು ಹಿಂದಕ್ಕೆ ಪಡೆಯಬೇಕು. ಮುಂದೆ ನಡೆಯುವ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಸೂಕ್ತ ಬಂದೋಬಸ್ತ್ ನೀಡಿ ಸುಸೂತ್ರವಾಗಿ ಮೆರವಣಿಗೆ ನಡೆಸಲು ಪೊಲೀಸರು ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ತಿಪ್ಪೇರುದ್ರಸ್ವಾಮಿ ವಕೀಲರು,ˌ ಚನ್ನಪ್ಪ ಮಳಗಿ, ಕಾಶಿನಾಥ ಚಿತ್ರಗಾರ, ಶಿವು ಹರಿಕೇರಿˌ ಮಹಾಲಿಂಗಪ್ಪˌ ಹಿಂದು ಮುಖಂಡರಾದˌಅಯ್ಶನಗೌಡ ˌ ನೀಲಕಂಕ ನಾಗಶೆಟ್ಟಿˌ ಶ್ರೀಕಾಂತ ಹೊಸ್ಕೇರಿˌˌಹೆಚ್. ಬಸಣ್ಣˌಡಾ. ಜೀಡಿˌ ವೆಂಕಟೇಶ .ಕೆ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.