ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ವಿತರಿಸಿ
Team Udayavani, Apr 16, 2020, 6:01 PM IST
ಯಲಬುರ್ಗಾ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ತಕ್ಷಣವೇ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸುವಂತೆ ಶಾಸಕ ಹಾಲಪ್ಪ ಆಚಾರ ತಾಲೂಕು ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿಗೆ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಕೋವಿಡ್ 19 ತುರ್ತು ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಮನೆ-ಮನೆಗೆ ಹೋಗಿ ನಿತ್ಯ ಜನತೆಯನ್ನು ಜಾಗೃತಿ ಮಾಡುತ್ತಾರೆ. ಅವರ ರಕ್ಷಣೆಯ ಜವಾಬ್ದಾರಿಯೂ ಇಲಾಖೆ ಮೇಲಿರುತ್ತದೆ. ಇಲಾಖೆಯಿಂದ ಬರುವ ಮಾಸ್ಕ್ಗಳನ್ನು ತಾಲೂಕಿನ ಎಲ್ಲ ಕಾರ್ಯಕರ್ತೆಯರಿಗೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮಾಸ್ಕ್ ವಿತರಿಸಿ, ತಾಲೂಕು ಆರೋಗ್ಯ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ ನಿತ್ಯ ಸಂಜೆ ತಾಲೂಕಿನ ವರದಿ ಒಪ್ಪಿಸುವಂತೆ ಸೂಚಿಸಿದರು.
ನೆಪ ಮಾತ್ರಕ್ಕೆ ಕೆಲಸ ಮಾಡಬೇಡಿ. ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಇಲ್ಲದಿದ್ದರೆ ಜಾಗ ಖಾಲಿ ಮಾಡಿ ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ತಾಲೂಕಿನಯಲಬುರ್ಗಾ, ಬೇವೂರು ಪೊಲೀಸ್ಠಾಣೆ ವ್ಯಾಪ್ತಿಯಲ್ಲಿ ಲಾಕ್ಡೌನ್ ಸರಿಯಾಗಿಪಾಲನೆಯಾಗಿಲ್ಲ. ಜನತೆ ವಿನಾಕಾರಣ ಹೊರಗಡೆ ಸಂಚಾರ ಮಾಡುತ್ತಿದ್ದಾರೆ. ಶೀಘ್ರದಲ್ಲಿ ಜನತೆಯನ್ನು ನಿಯಂತ್ರಣ ಮಾಡುವ ಕ್ರಮಕ್ಕೆ ಮುಂದಾಗಿ ಎಂದು ಸಿಪಿಐ ಎಂ. ನಾಗರಡ್ಡಿಗೆ ತಿಳಿಸಿದರು.
ತಹಶೀಲ್ದಾರ್ ಶ್ರೀಶೈಲ ತಳವಾರ, ಕಿರಣಕುಮಾರ, ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿ, ತಾಪಂ ಇಒ ಜಯರಾಂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ