ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ;ಪೌಷ್ಠಿಕ ಅಕ್ಕಿ ಎಂದು ಸ್ಪಷ್ಟನೆ ನೀಡಿದ ಆಹಾರ ಇಲಾಖೆ
Team Udayavani, Oct 31, 2022, 12:15 PM IST
ಗಂಗಾವತಿ: ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿ ಹಾಗೂ ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಗೊಂದಲಕ್ಕೀಡಾಗಿದ್ದಾರೆ. ಇದರಿಂದ ಅಕ್ಕಿಯನ್ನು ಬಳಸದೆ ಅಕ್ಕಿ ಖರೀದಿದಾರರಿಗೆ ಮಾರಾಟ ಮಾಡುವ ದಂಧೆ ವ್ಯಾಪಕವಾಗಿದೆ.
ಕಳೆದ 2-3 ತಿಂಗಳಿಂದ ಸಾರ್ವಜನಿಕ ಪಡಿತರ ಅಕ್ಕಿ ವಿತರಣೆಯಲ್ಲಿ ಸ್ವಲ್ಪ ಪ್ರಮಾಣದ ಅಕ್ಕಿ ನೀರಿನಲ್ಲಿ ಕರಗದೆ ಮೇಲೆ ತೇಲುವ ಅಕ್ಕಿ ಪೂರೈಕೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಆತಂಕಗೊಂಡು ಪಡಿತರ ಅಕ್ಕಿಯನ್ನು ಬಳಸದೆ ಮಾರಾಟದಲ್ಲಿ ತೊಡಗಿದ್ದಾರೆ.
ಇದರಿಂದ ಸರ್ಕಾರದ ಧ್ಯೇಯೋದ್ದೇಶ ಉಲ್ಲಂಘನೆಯಾಗಿದ್ದು, ಪ್ಲಾಸ್ಟಿಕ್ ಅಕ್ಕಿ ಎನ್ನುವ ಭ್ರಮೆಯಲ್ಲಿ ಇರುವವರಿಗೆ ಸೂಕ್ತ ವೈಜ್ಞಾನಿಕ ಮಾಹಿತಿ ವಿತರಣೆ ಮಾಡುವಲ್ಲಿ ಆಹಾರ ಇಲಾಖೆ ವಿಫಲವಾಗಿದೆ. ಹೈದ್ರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆಯ ಸಮಸ್ಯೆಯಿಂದಾಗಿ ಗರ್ಭಿಣಿಯರು ಮತ್ತು ನವಜಾತ ಶಿಶುಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪೌಷ್ಠಿಕಾಂಶ ತರುವ ಉದ್ದೇಶದಿಂದ ಸರ್ಕಾರ ಉತ್ತರ ಕರ್ನಾಟಕದ 14 ಜಿಲ್ಲೆಗಳಿಗೆ ಪೌಷ್ಠಿಕಾಂಶವುಳ್ಳ ಅಕ್ಕಿಯನ್ನು ಪೂರೈಕೆ ಮಾಡುತ್ತಿದೆ.
ಸಾರ್ವಜನಿಕ ಪಡಿತರ ಅಕ್ಕಿಯ ಜತೆಗೆ ಶೇ.25 ರಷ್ಟು ಪೌಷ್ಠಿಕಾಂಶವುಳ್ಳ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದು, ಅಪೌಷ್ಠಿಕತೆಯಿಂದ ಬಳಲುತ್ತಿರುವವರಿಗೆ ಸರಕಾರ ಪೌಷ್ಟಿಕಾಂಶ ಹೆಚ್ಚಿಸಲು ಪೌಷ್ಠಿಕಾಂಶವುಳ್ಳ ಅಕ್ಕಿಯನ್ನು ದಾನ ಮಾಡುತ್ತಿದೆ. ಜನರು ಇದನ್ನು ತಪ್ಪಾಗಿ ಅರ್ಥೈಸಿಕೊಂಡು ಪ್ಲಾಸ್ಟಿಕ್ ಅಕ್ಕಿ ವಿತರಣೆಯಾಗುತ್ತಿದೆ ಎಂಬ ಆರೋಪ ಮಾಡುತ್ತಿದ್ದಾರೆ.
ಪೌಷ್ಠಿಕಾಂಶವುಳ್ಳ ಅಕ್ಕಿ ವಿತರಣೆ ಬಗ್ಗೆ ಆಹಾರ ಇಲಾಖೆ ಜಿಲ್ಲಾಡಳಿತ, ತಾಲೂಕಾಡಳಿತ, ಹೋಬಳಿವಾರು ಸಾರ್ವಜನಿಕೆ ಜಾಗೃತಿಯನ್ನುಂಟು ಮಾಡಿ ಸಾರ್ವಜನಿಕ ಪಡಿತರ ಅಕ್ಕಿಯನ್ನು ಮಾರಾಟ ಮಾಡದೆ ಊಟಕ್ಕೆ ಬಳಸುವಂತೆ ಸಲಹೆ ನೀಡಬೇಕಿದೆ.
ಸಾರ್ವಜನಿಕರಿಗೆ ತಪ್ಪು ಮಾಹಿತಿ: ಸಾರ್ವಜನಿಕ ಪಡಿತರ ಅಕ್ಕಿ ವಿತರಣೆಯಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ ಎಂಬ ಸುಳ್ಳು ಸುದ್ದಿ ಹರಡುತ್ತಿದ್ದು, ಇದು ಸರಿಯಾದ ಮಾಹಿತಿಯಲ್ಲ. ಸಾರ್ವಜನಿಕರು ಇದನ್ನು ನಂಬಬಾರದು. ಅಪೌಷ್ಟಿಕ ಕೊರತೆಯಿಂದ ಬಳಲುತ್ತಿರುವ ಜನರಿಗೆ ಪೌಷ್ಟಿಕಾಂಶ ನೀಡುವ ಉದ್ದೇಶದಿಂದ ಸರಕಾರ ಕಳೆದ ಕೆಲವು ತಿಂಗಳಿಂದ ಪಡಿತರ ಅಕ್ಕಿಯ ಜೊತೆಗೆ ಸ್ವಲ್ಪ ಪ್ರಮಾಣದ ಪೌಷ್ಠಿಕಾಂಶ ಉಳ್ಳ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಣೆ ಮಾಡುತ್ತಿದೆ. ಸಾರ್ವಜನಿಕರು ತಪ್ಪು ಮಾಹಿತಿಗೆ ಕಿವಿ ಕೊಡದೆ ಪಡಿತರ ಅಕ್ಕಿಯನ್ನು ಮಾರಾಟ ಮಾಡದೆ ಊಟಕ್ಕೆ ಬಳಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಜಿಲ್ಲಾ ಉಪನಿರ್ದೇಶಕ ಮಲ್ಲಿಕಾರ್ಜುನ ಉದಯವಾಣಿ ಜೊತೆ ಮಾತನಾಡಿದಾಗ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ