ರೈತ ಸಂಘದ ಹೋರಾಟಕ್ಕೆ ಜಿಲ್ಲಾಡಳಿತ ಸ್ಪಂದನೆ

ಎಂಎಸ್‌ಪಿಎಲ್‌ ಕಂಪನಿ ಯೂನಿಟ್‌ ವಿಸ್ತರಣೆಗೆ ವಿರೋಧ ; ರೈತರ ಹೋರಾಟಕ್ಕೆ ತಾತ್ಕಾಲಿಕ ತಡೆ

Team Udayavani, Jun 6, 2022, 2:47 PM IST

15

ಕೊಪ್ಪಳ: ಕರ್ನಾಟಕ ರೈತ ಸಂಘ ಹಾಗೂ ಭೂ ಸಂತ್ರಸ್ತ ರೈತರ ಹೋರಾಟ ಸಮಿತಿ ನೇತೃತ್ವದಲ್ಲಿ ಮೂರು ದಿನಗಳ ಹೋರಾಟಕ್ಕೆ ಕೈಗಾರಿಕೆ ಇಲಾಖೆ, ಜಿಲ್ಲಾಡಳಿತ ಸ್ಪಂದಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ ರೈತ ಸಂಘವು ಸಂತಸ ವ್ಯಕ್ತಪಡಿಸಿ, ಹೋರಾಟವನ್ನು ತಾತ್ಕಾಲಿಕ ಹಿಂಪಡೆದಿದೆ.

ಎಂಎಸ್‌ಪಿಎಲ್‌ ಕಂಪನಿಯು ಯೂನಿಟ್‌ನ್ನು ವಿಸ್ತರಣೆ ವಿರೋಧಿಸಿ, ಹೆಚ್ಚುವರಿ ರೈತರ ಭೂಮಿ ರೈತರಿಗೆ ವಾಪಾಸ್‌ ಕೊಡುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಲಾಗಿತ್ತು. ಜಿಲ್ಲಾಡಳಿತವು ಇದಕ್ಕೆ ಸ್ಪಂದಿಸಿದ್ದು, ಕಂಪನಿ ಪ್ರತಿನಿಧಿಗಳ ಜೊತೆ ಸಭೆ ನಡೆಸಿ, ರಾಜ್ಯ ಕೈಗಾರಿಕೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಕೆಲವೊಂದು ಅಂಶಗಳನ್ನು ಆ ಪತ್ರದಲ್ಲಿ ವಿವರಿಸಿದ್ದಾರೆ.

ಜಿಲ್ಲಾಧಿಕಾರಿ ಅವರು ಬರೆದ ಪತ್ರದಲ್ಲಿ ಕೈಗಾರಿಕೆಗಾಗಿ ಖರೀದಿಸಿದ ಭೂಮಿಯನ್ನು ರೈತರಿಗೆ ವಾಪಸ್‌ ಕೊಡಲು ಕೋರಿದ್ದಾರೆ. ಕಂಪನಿಯು ಕೈಗಾರಿಕೆ ವಿಸ್ತರಣೆ ಮಾಡುವ ತೀರ್ಮಾನ ಕೈ ಬಿಟ್ಟಿರುವ ಕುರಿತು ಸಭೆಯಲ್ಲಿ ತಿಳಿಸಿದ್ದಾರೆ. ಖರೀದಿ ವ್ಯವಹಾರದಲ್ಲಿ ನಡೆದ ವಂಚನೆ ಕುರಿತು ನ್ಯಾಯಾಂಗ ತನಿಖೆಗೊಪ್ಪಿಸಲು ತಿಳಿಸಿದ್ದಾರೆ. ಕೆಐಎಡಿಬಿ ಮೂಲಕ ಎಕ್ಸಾಂ ಡಿಯರ್‌ ಕಂಪೆನಿಗೆ 350 ಎಕರೆ ಭೂಮಿ ಕಳೆದುಕೊಂಡ 71 ಕುಟುಂಬಗಳ ಪೈಕಿ 41 ಕುಟುಂಬಗಳಿಗೆ ಈವರೆಗೂ ಉದ್ಯೋಗ ದೊರೆತಿಲ್ಲ. ಈ 41 ಕುಟುಂಬಗಳಿಗೆ ತಕ್ಷಣ ಕೆಲಸ ಕೊಡಬೇಕು ಮತ್ತು ಅವರು ಅರ್ಜಿ ಸಲ್ಲಿಸಿದ ದಿನಗಳಿಂದ ವೇತನ ಲೆಕ್ಕ ಹಾಕಿ ಕೊಡಬೇಕು. ಕೆಲವರಿಗೆ 4 ವರ್ಷ ಇನ್ನು ಕೆಲವರಿಗೆ 6, 8 ವರ್ಷದ ವೇತನ ಕೊಡಲು ಕಂಪನಿಗೆ ಸೂಚನೆ ಕೊಟ್ಟಿದ್ದು, ಸಂತಸ ತರಿಸಿದೆ ಎಂದು ಅವರು ತಿಳಿಸಿದ್ದಾರೆ.

ಕುಣೆಕೇರಿ, ಲಾಚನಕೇರಿ, ಚಿಕ್ಕಬಗನಾಳ, ಕುಣಿಕೇರಿ ತಾಂಡಾದ ರೈತರು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಸಂತಸ ವ್ಯಕ್ತಪಡಿಸಿದರು. ಹೋರಾಟಕ್ಕೆ ಸಿಕ್ಕ ಜಯದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಡಿ.ಎಚ್‌. ಪೂಜಾರ, ರೈತ ಸಂಘದ ಶರಣಪ್ಪ ದೊಡ್ಡಮನಿ, ಖಾದಲ ಹುಸೇನ್‌ ಕಾರಟಗಿ, ಅಲ್ಲಮಪ್ರಭು ಬೆಟ್ಟದೂರು, ಬಿ.ಎನ್‌. ಯರದಿಹಾಳ, ಬಸವರಾಜ ಶೀಲವಂತರ, ಈಶಪ್ಪ ಕುಣಿಕೇರಿ, ಬಸವರಾಜ ಕುಂಬಾರ, ಮಂಜುನಾಥ ಗಡಗಿ, ಮಂಜುನಾಥ ಕುಂಬಾರ, ಬಸವರಾಜ ನರೆಗಲ್‌, ಲಿಂಗಯ್ಯ ಶಶಿಮಠ, ಪಂಪಯ್ಯ ಹಿರೇಮಠ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.