ನಂದಿಹಳ್ಳಿಯಲ್ಲಿ ಜಿಲ್ಲಾಧಿಕಾರಿ ಸಂಧಾನ ಸಭೆ

ಗುಂಪು ಘರ್ಷಣೆಗೆ ಅಕ್ರಮ ಮರಳು ಸಾಗಾಟ ಕಾರಣ

Team Udayavani, May 24, 2022, 4:54 PM IST

20

ಕಾರಟಗಿ: ಗುಂಪು ಘರ್ಷಣೆ ನಡೆದ ತಾಲೂಕಿನ ನಂದಿಹಳ್ಳಿ ಗ್ರಾಮಕ್ಕೆ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಹಾಗೂ ಅಧಿಕಾರಿಗಳು ಸೋಮವಾರ ಭೇಟಿ ಸಂಧಾನ ಸಭೆ ನಡೆಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಮಾತನಾಡಿ, ಶನಿವಾರ ರಾತ್ರಿ ನಡೆದ ಘಟನೆ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ನಡೆದಿದ್ದು, ಇದು ಕಾನೂನು ಬಾಹಿರ ಚಟುವಟಿಕೆಯಾಗಿದೆ. ಗ್ರಾಮದ ಯಾರೇ ಆಗಲಿ ಮರಳು ಸಾಗಾಟದಲ್ಲಿ ತೊಡಗಿಸಿಕೊಳ್ಳಬಾರದು. ಈಗಾಗಲೇ ಜಿಲ್ಲಾಡಳಿತ ಸಂಪೂರ್ಣ ನಿಗಾವಹಿಸಿದ್ದು, ಅಕ್ರಮದಲ್ಲಿ ತೊಡಗುವವರ ಮೇಲೆ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.

ಹಲ್ಲೆಗೊಳಗಾದವರಿಗೆ ಪಶು ಇಲಾಖೆಯಿಂದ ಪಶುಪಾಲನೆಗೆ, ಕಿರಾಣಿ ಅಂಗಡಿ ತೆರೆಯುವವರಿಗೆ ಸೇರಿದಂತೆ ಯಾವುದೇ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳುವವರಿಗೆ ಆದಿ ಜಾಂಬವ ನಿಗಮದಿಂದ ಸಾಲ ಸೌಲಭ್ಯ, ಧನ ಸಹಾಯ, ಇನ್ನು ದಲಿತರು ಸೇರಿದಂತೆ ಎಲ್ಲರಿಗೂ ನಿವೇಶನ ನೀಡುವುದಕ್ಕೆ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಅಪರಾಧಿಗಳನ್ನು ಗುರುತಿಸಿ ಸೂಕ್ತ ಕ್ರಮಕ್ಕೆ ಮುಂದಾಗುತ್ತೇವೆ. ಘಟನೆ ಹಿನ್ನೆಲೆ ಜಿಲ್ಲಾಡಳಿತ ಸೂಕ್ತ ನಿಗಾ ವಹಿಸಿದೆ. ಸಾಮರಸ್ಯ ಮೂಡಿಸಲು ಇನ್ನೊಂದು ಸಾರಿ ಬೇಕಾದರೂ ಸಂಧಾನ ಸಭೆ ಏರ್ಪಡಿಸುವುದಾಗಿ ತಿಳಿಸಿದ ಅವರು, ಸಭೆಯಲ್ಲಿ ಉಪಸ್ಥಿತರಿದ್ದ ವಿವಿಧ ಇಲಾಖೆಯ ತಾಲೂಕು ಅಧಿಕಾರಿಗಳಿಗೆ ಸಮಸ್ಯೆಯನ್ನು ನಿಭಾಯಿಸಿ. ಘಟನೆ ಮರುಕಳಿಸದಂತೆ ಎಚ್ಚರ ವಹಿಸುವಂತೆ ಸೂಚನೆ ನೀಡಿದರು.

ದಲಿತ ಮುಖಂಡರಾದ ಎಚ್‌.ಎನ್‌. ಬಡಿಗೇರ್‌ ಮತ್ತು ಯಲ್ಲಪ್ಪ ಕಟ್ಟಿಮನಿ ಮಾತನಾಡಿ, ಇತ್ತೀಚಿಗೆ ನಂದಿಹಳ್ಳಿ ಸೇರಿ ವಿವಿಧೆಡೆ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯವಾಗಿ ದಲಿತರಿಗೆ ರಕ್ಷಣೆಯೊಂದಿಗೆ ಕೇರಿಗಳಿಗೆ ಮೂಲ ಸೌಕರ್ಯ ಹಾಗೂ ಹಲ್ಲೆಗೊಳಗಾದವರಿಗೆ ಆಹಾರ ಕಿಟ್‌, ಧನ ಸಹಾಯ, ಸ್ವಯಂ ಉದ್ಯೋಗಕ್ಕೆ ವ್ಯವಸ್ಥೆ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.

ಜಿಪಂ ಸಿಇಒ ಪೌಜಿಯಾ ತರನ್ನುಮ್‌, ಎಸ್‌ಪಿ ಅರುಣಾಂಗುÏ ಗಿರಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚಿದಾನಂದಪ್ಪ, ತಹಸೀಲ್ದಾರ್‌ ರವಿ ಅಂಗಡಿ, ಇಒ ಡಾ| ಆರ್‌. ಮೋಹನ್‌, ಡಿವೈಎಸ್‌ಪಿ ಆರ್‌.ಎಸ್‌. ಉಜ್ಜಿನಿಕೊಪ್ಪ, ಪಿಐ ವೀರಭದ್ರಯ್ಯ ಹಿರೇಮಠ, ಸಮಾಜ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ತುಗಲೆಪ್ಪ ದೇಸಾಯಿ, ಸಿಬ್ಬಂದಿ ಗಂಗಪ್ಪ ಹಾಗೂ ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ, ಸದಸ್ಯ ಜಡಿಯಪ್ಪ ಬೂದಗುಂಪಾ, ಭರತರಾಜ್‌ ಗಂಗಾವತಿ ಇನ್ನಿತರರು ಇದ್ದರು.

ಕಾರಟಗಿ ತಾಲೂಕು ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಆದರೆ ಇತ್ತೀಚಿಗೆ ಮರಳು ತುಂಬುವ ಸಂಬಂಧ ಕೆಲವರು ಗಲಾಟೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ಈ ಅಕ್ರಮ ತಡೆಯಲು ಜಿಲ್ಲಾಡಳಿತ ಸದಾ ಎಚ್ಚರಿಕೆಯಿಂದ ಇರುತ್ತದೆ. ಈ ರೀತಿಯ ಘಟನೆಗಳು ಮರುಕಳಿಸಬಾರದು. ಎಲ್ಲರೂ ಸಹೋದರ ಭಾವನೆಯಿಂದ ಇರಬೇಕು. ಪರಸ್ಪರ ಗೌರವ ವಿನಿಮಯವಾಗಲೇಬೇಕು. ನಾವೆಲ್ಲರೂ ಈ ನಿಟ್ಟಿನಲ್ಲಿ ಕೆಲಸ ಮಾಡೋಣ. ಶಾಂತಿಯನ್ನು ಕಾಪಾಡೋಣ.    –ವಿಕಾಸ್‌ ಕಿಶೋರ್‌ ಸುರಳ್ಕರ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.