ಗಂಗಾವತಿ: ಜಿಲ್ಲಾ ಶೈಕ್ಷಣಿಕ ಸಮಾವೇಶ; ದೇಶದ ಅಭಿವೃದ್ಧಿಯಲ್ಲಿ ಶಿಕ್ಷಕ, ಕೃಷಿಕ ಮತ್ತು ಸೈನಿಕರ ಪಾತ್ರ ಅಮೂಲ್ಯವಾದದು


Team Udayavani, Jan 22, 2023, 3:27 PM IST

10—gangavathi

ಗಂಗಾವತಿ: ದೇಶದ ಅಭಿವೃದ್ಧಿ ಶಿಕ್ಷಕ, ಕೃಷಿಕ ಮತ್ತು ಸೈನಿಕ ರಿಂದ ಸಾಧ್ಯವಾಗುತ್ತದೆ. ಆದ್ದರಿಂದ ಇವರ ಮಾರ್ಗದರ್ಶನ ಅವಶ್ಯ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.

ಅವರು ಜಿಲ್ಲಾ ಪದವಿಪೂರ್ವ ಕಾಲೇಜುಗಳ ನೌಕರರ ಒಕ್ಕೂಟದ ವತಿಯಿಂದ ಅಮರ ಜ್ಯೋತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಿಲ್ಲಾ ಶೈಕ್ಷಣಿಕ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.

ಶೈಕ್ಷಣಿಕವಾಗಿ ಕೊಪ್ಪಳ ಜಿಲ್ಲೆಯ ಪ್ರಗತಿಗೆ ಉಪನ್ಯಾಸಕರು, ಶಿಕ್ಷಕರು ಕಾರಣರಾಗಿದ್ದಾರೆ. ಐಎಎಸ್,ಐಪಿಎಸ್, ಐಆರ್ ಎಸ್ ಐಎಎಫ್ ಮತ್ತು ಐಎಫ್ ಎಸ್ ಪರೀಕ್ಷೆಯಲ್ಲಿ ಸಾಧನೆ ಮಾಡಿ ಕೊಪ್ಪಳ ಜಿಲ್ಲೆಗೆ ಕೀರ್ತಿ ತಂದಿದ್ದು ಇದಕ್ಕೆ ಶಿಕ್ಷಕರು ಮತ್ತು ಉಪನ್ಯಾಸಕರು ಕಾರಣರಾಗಿದ್ದಾರೆ. ಶಿಕ್ಷಣ ಪಡೆದ ವ್ಯಕ್ತಿ ಸಮಾಜ ಸುಧಾರಣೆಗೆ ಕಾರಣರಾಗುತ್ತಾನೆ ಎಂದರು.

ಶೈಕ್ಷಣಿಕ ಕ್ಷೇತ್ರದ ಕುರಿತು ಸಮಾವೇಶದಲ್ಲಿ ಚಿಂತನೆ ನಡೆದು ಎನ್.ಇ.ಪಿ. ಅನುಷ್ಠಾನಕ್ಕೆ ನೆರವಾಗಬೇಕಿದೆ. ಸರಕಾರದ ಸೌಕರ್ಯ ಬಳಕೆ ಮಾಡಿಕೊಂಡು ಪ್ರತಿಯೊಬ್ಬರು ಮುಂದೆ ಬರುವಂತೆ ಕರೆ ನೀಡಿದರು.

ವಿಧಾನಪರಿಷತ್ ಸದಸ್ಯ ಶಶಿನಮೋಶಿ ಮಾತನಾಡಿ, ವಿದ್ಯಾರ್ಥಿಗಳ ಸಾಮಾರ್ಥ್ಯ ಹೆಚ್ಚಿಸುವ ಕಾರ್ಯ ಮಾಡಿ ಅವರ ಬದುಕನ್ನು ರೂಪಿಸುವ ಶಿಕ್ಷಕ ಉಪನ್ಯಾಸಕ ಮತ್ತು ಪ್ರಾಧ್ಯಾಪಕ ವೃತ್ತಿ ಅತ್ಯಂತ ಪವಿತ್ರವಾಗಿದೆ.  ಎನ್ ಇಪಿ ಅನುಷ್ಠಾನದ ಮೂಲಕ ದೇಶದ ಶೈಕ್ಷಣ ಕ ಕ್ಷೇತ್ರ ವಿಶ್ವ ಮಟ್ಟದಲ್ಲಿ ಉಪಯುಕ್ತವಾಗುತ್ತದೆ ಎಂದರು.

ಸಮಾವೇಶದಲ್ಲಿ ಎಂಎಲ್ಸಿ ಶಶಿಲ್ ನಮೋಶಿ, ಶಾಸಕ ಪರಣ್ಣ ಮುನವಳ್ಳಿ, ಶಿಕ್ಷಣ ಪ್ರೇಮಿ ನೆಕ್ಕಂಟಿ ಸೂರಿಬಾಬು, ಪ್ರಾಚಾರ್ಯರ ಸಂಘದ ಜಿಲ್ಲಾಧ್ಯಕ್ಷ ಅನೀಲಕುಮಾರ, ಪಿಯು ಇಲಾಖೆ ಉಪನಿರ್ದೇಶಕ ಮೃಣಾಲ್ ಸಾಹುಕಾರ, ಪ್ರಾಚಾರ್ಯರ ಸಂಘದ ರಾಜ್ಯಾಧ್ಯಕ್ಷ ಹಾಗೂ ಎಂಎಲ್‌ಸಿ ಶ್ರೀ ಕಂಠೇಗೌಡ, ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ನಿಂಗೇಗೌಡ, ಬಳ್ಳಾರಿ ವಿವಿ ವಿದ್ಯಾ ವಿಷಯಕ್ ಪರಿಷತ್ ಸದಸ್ಯ ಶಿವಾನಂದ ಮೇಟಿ, ಶಂಕ್ರಯ್ಯ ಅಜ್ಜಿಗೇರಿಮಠ, ಜಿಲ್ಲಾಧ್ಯಕ್ಷ ಸೋಮಶೇಖರ್ ಗೌಡ, ಉಪನ್ಯಾಸಕರ ಸಂಘದ ಈಶ್ವರ ಶೆಟ್ಟಿ, ಜಿ.ಎಂ. ಭೂಸನೂರುಮಠ, ಡಾ.ರವಿ ಚವ್ಹಾಣ, ಬಸಪ್ಪ ನಾಗೋಲಿ, ಎಚ್.ಬಿ.ಜಗ್ಗಲ್, ಸಂಜಯ್ ಬಡಿಗೇರ್, ಮಹೆಬೂಬ್ ಅಲಿ, ಮಹಾಬಲೇಶ್ವರ, ಪತ್ರೆಪ್ಪ ಚತ್ರಕಿ, ಫಕೀರಪ್ಪ ವಜ್ರಬಂಡಿ, ರಮೇಶ ಗಬ್ವೂರು, ರುದ್ರೇಶ ಇದ್ದರು.

ದ್ವಿತಿಯಾ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ನಿವೃತ್ತ ಉಪನ್ಯಾಸಕರನ್ನು ಸನ್ಮಾನಿಸಲಾಯಿತು.

ಪ್ರಾದೇಶಿಕ ಅಸಮಾನತೆ ಹೋಗಲಾಡಿಸಲು ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆಗಳಿಗೆ ಸಂವಿಧಾನದ ಕಲಂ 371(ಜೆ) ಅನುಷ್ಠಾನ ಮಾಡಲಾಗಿದ್ದು ನೇಮಕಾತಿ, ಪ್ರವೇಶ ಮತ್ತು ಭಡ್ತಿ ಸೇರಿ ಸರಕಾರದ ಸೌಕರ್ಯ ಕಲ್ಪಿಸಲು ಕೆಲ ಅಧಿಕಾರಿಗಳು ದಾರಿ ತಪ್ಪಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಭಕ್ತ ವಸ್ತಲ್ ಕಮೀಟಿ ಘೋಷಣೆಯಂತೆ ಕಲಂ 371(ಜೆ) ಅನುಷ್ಠಾನ ಎಸ್ಸಿ ಎಸ್ಟಿ ಮೀಸಲಾತಿ ಯಷ್ಟೆ ಮಹತ್ವವಿದೆ. ಅದನ್ನು ಎಚ್ಚರಿಕೆಯಿಂದ ಅನುಷ್ಠಾನ ಮಾಡಬೇಕು. ಕಲ್ಯಾಣ ಕರ್ನಾಟಕ ಭಾಗದವರು ಸಾಮಾನ್ಯ ಮೀಸಲಾತಿ ಯಲ್ಲಿ ಸಾಧನೆ ಮಾಡಿದರೆ ಮೊದಲು ಅದನ್ನು ಪರಿಗಣ ಸಬೇಕು. ಜತೆಗೆ ಭಡ್ತಿ ಸೇರಿ ಸರಕಾರದ ಸೌಲಭ್ಯಗಳನ್ನು ಪಡೆಯಲು ಕಲಂ 371(ಜೆ) ಅನ್ವಯಿಸಲು ಸಚಿವ ಬಿ. ಶ್ರೀರಾಮುಲು ನೇತೃತ್ವದ ಉಪ ಸಮಿತಿ ಸರಕಾರಕ್ಕೆ ಶಿಫಾರಸ್ಸು ಮಾಡಿದೆ. ಒಂದು ವಾರದಲ್ಲಿ ಸರ್ಕಾರದ ಆದೇಶ ಹೊರಬೀಳಲಿದೆ. –ಶಶಿ ಜಿ ನಮೋಶಿ ಎಂಎಲ್ಸಿ.

ನಗರದ ಅಮರಜ್ಯೋತಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಿಲ್ಲಾ ಪದವಿಪೂರ್ವ ಕಾಲೇಜು ಗಳ ನೌಕರರ ಒಕ್ಕೂಟದ ಜಿಲ್ಲಾ ಶೈಕ್ಷಣಿಕ ಸಮಾವೇಶದ ವೇದಿಕೆಯಲ್ಲಿ ಮಹಿಳಾ ಉಪನ್ಯಾಸಕರನ್ನು ಸಂಘಟಕರು ನಿರ್ಲಕ್ಷ್ಯ ಮಾಡಿದ್ದು, ಕಂಡು ಬಂದಿದೆ. ಸುಮಾರು 30 ಗಣ್ಯರು ವೇದಿಕೆಯಲ್ಲಿದ್ದರೂ ಇವರಲ್ಲಿ ಒಬ್ಬರು ಮಹಿಳಾ ಅತಿಥಿಗಳಿಲ್ಲದಿರುವುದು ಸರಿ ಎನ್ನಿಸುತ್ತಿಲ್ಲ. ಅಕ್ಷರದವ್ವ ಸಾವಿತ್ರಿ ಭಾಪುಲೆ ಭಾವಚಿತ್ರವಿಟ್ಟಿದ್ದು ಹೆಮ್ಮೆಯಾದರೂ ಕಾರ್ಯಕ್ರಮದ ಪಟ್ಟಿಯಲ್ಲಿ ಮಹಿಳಾ ಅತಿಥಿಗಳಿರದಿರುವುದು ನೋವು ತಂದಿದೆ.   -ಹೆಸರೇಳಲು ಇಚ್ಛಿಸದ ಮಹಿಳಾ ಉಪನ್ಯಾಸಕಿ.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.