Koppala; ಶೆಟ್ಟರ್ ಆಡಿದ ನುಡಿಮುತ್ತು ಗಮನಿಸಿ ಎಂಎಲ್ ಸಿ ಮಾಡಿದ್ದೆವು: ಡಿಕೆ ಶಿವಕುಮಾರ್


Team Udayavani, Jan 27, 2024, 5:29 PM IST

Koppala; ಶೆಟ್ಟರ್ ಆಡಿದ ನುಡಿಮುತ್ತು ಗಮನಿಸಿ ಎಂಎಲ್ ಸಿ ಮಾಡಿದ್ದೆವು: ಡಿಕೆ ಶಿವಕುಮಾರ್

ಕೊಪ್ಪಳ: ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಗೆ ಬಿಜೆಪಿಯವರಿಂದಾದ ಅನ್ಯಾಯದಿಂದ ಬಂದಿದ್ದರು. ಕಾಂಗ್ರೆಸ್ ನಿಂದ ಟಿಕೆಟ್ ಕೊಟ್ಟಿದ್ದೆವು, ಗೆಲ್ಲುತ್ತಾರೆ ಎಂದುಕೊಂಡಿದ್ದೆವು. ಆದರೆ ಅವರು ಬಹಳ ಅಂತರದಿಂದ ಸೋತರು. ಮಾಜಿ ಸಿಎಂ ಬಂದರೆಂದು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತ ಮಾಡಿದ್ದೆವು. ಬಿಜೆಪಿ ಬಗ್ಗೆ ಆಡಿದ ಮಾತು, ನುಡಿದಂತಹ ನುಡಿಮುತ್ತು ಗಮನಿಸಿ ಎಂಎಲ್ ಸಿ ಮಾಡಿದ್ದೆವು. ಆದರೆ ಈಗ ಪಕ್ಷ ಬಿಟ್ಟು ಹೋದರು. ಸಿಎಂ, ಡಿಸಿಎಂ ಆದವರು ನಮ್ಮ ಮನೆಗೆ ಬಂದರು ಎಂದುಕೊಂಡಿದ್ದೆವು. ಆದರೆ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಹೋದರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಯಾವಾಗಲೂ ನಿಂತ ನೀರಲ್ಲ. ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೋಗುತ್ತಾರೆ, ಬರುತ್ತಾರೆ. ಹೋಗುವುದು, ಬರುವುದು ಸಾಮಾನ್ಯ ವಿಚಾರ. ಆದರೆ ಯಾರೇ ಪಕ್ಷಕ್ಕೆ ಬರುವಾಗ ಪೂರ್ವಾಪರ ತಿಳಿದುಕೊಂಡು ಸೇರಿಸಿಕೊಳ್ಳಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದ್ದಾರೆ ಎಂದರು.

ತುಂಗಭದ್ರಾ ಸಮಾನಾಂತರ ಜಲಾಶಯ ವಿಚಾರಕ್ಕೆ ಮಾತನಾಡಿ, ಸಮಾನಾಂತರ ಜಲಾಶಯ ನಿರ್ಮಾನಕ್ಕೆ ಸರಕಾರ ಬದ್ಧವಿದೆ. ಆಂಧ್ರಪ್ರದೇಶ, ತೆಲಂಗಾಣ ಸಿಎಂಗಳಿಗೆ ಪತ್ರ ಬರೆದಿದ್ದೇನೆ. ಮೂರು ರಾಜ್ಯದ ಸಚಿವರು ತೀರ್ಮಾನಕ್ಕೆ ಬರೋಣ ಎಂದಿದ್ದಾರೆ. ತೆಲಂಗಾಣ ರಾಜ್ಯದವರು ಚುನಾವಣಾ ಬ್ಯೂಸಿಯಲ್ಲಿ ಇದ್ದಾರೆ. ಹೀಗಾಗಿ ನಮಗೆ ಎರಡೂ ರಾಜ್ಯದವರು ಸಮಯ ಕೊಟ್ಟಿಲ್ಲ. ಸುಖಾಸುಮ್ಮನೆ 30 ಟಿಎಂಸಿ ನೀರು ಕಳೆದುಕೊಳ್ತಿದ್ದೇವೆ. ಇದು ಕರ್ನಾಟಕ ರಾಜ್ಯಕ್ಕೆ ದೊಡ್ಡ ನಷ್ಟ. ಸಮಾನಾಂತರ ಜಲಾಶಯ ಕಟ್ಟಬೇಕೆಂದು ಬಹಳ ದಿನದ ಕನಸು. ಬಹಳ ವರ್ಷದಿಂದ ಸಾವಿರಾರು ಜನರು ಹೋರಾಟ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಸಹ ಅಧಿವೇಶನದಲ್ಲಿ ಮಾತಾಡಿದ್ದಾರೆ ಎಂದರು.

ಗವಿ ಮಠದ ಇತಿಹಾಸ ನಾನು ಕೇಳಿದ್ದೆ. ಬಹಳ ದಿನದ ಆಸೆ, ತುಡಿತವಿತ್ತು. ಈ ಭಾಗದ ನಾಯಕರುಗಳು ಬರಲು ಬಹಳ ಒತ್ತಾಯ ಮಾಡಿದರು. ಹೀಗಾಗಿ ನಾನು ಗವಿಸಿದ್ದೇಶ್ವರ ಜಾತ್ರೆಗೆ ಬಂದಿದ್ದೇನೆ. ಉತ್ತರ ಕರ್ನಾಟಕ ಭಾಗದಲ್ಲಿ ಬಹಳ ಕ್ರಾಂತಿ ನಡೆಯುತ್ತಿದೆ. ಶ್ರೀಗಳಿಂದ ಕೊಪ್ಪಳದಲ್ಲಿ ಬಹಳ ಬದಲಾವಣೆಯಾಗುತ್ತಿದೆ. ಈ ಭಾಗದ ಜನಕ್ಕೆ ಗವಿ ಶ್ರೀಗಳು ಶಕ್ತಿ ತುಂಬಿದ್ದಾರೆ. ಸರ್ಕಾರದಿಂದಲೂ ಮಠಕ್ಕೆ ಶಕ್ತಿ ತುಂಬಲು ಬಂದಿದ್ದೇನೆ. ರಾಜ್ಯದ ಬೃಹತ್ ಕಾರ್ಯಕ್ರಮಗಳಲ್ಲಿ ಇದೊಂದು ದೊಡ್ಡ ಧಾರ್ಮಿಕ ಜಾತ್ರೆ. ಜನರ ಭಾವನೆ, ನಂಬಿಕೆ ಜೊತೆಗೆ ಇದ್ದೇನೆ ಎಂದರು.

ಬಿಜೆಪಿ ಸರ್ಕಾರದಲ್ಲಿ ಗವಿ ಮಠಕ್ಕೆ ಮಂಜೂರಾದ ಹಣವನ್ನು ಕಾಂಗ್ರೆಸ್ ತಡೆಹಿಡಿದಿದೆ ಎಂಬ ಆರೋಪಕ್ಕೆ ಮಾತನಾಡಿದ ಅವರು, ಆರೋಪ ಮಾತನಾಡುವುದು ಮುಖ್ಯವಲ್ಲ, ಜೋಬಲ್ಲಿ ದುಡ್ಡು ಬಂದರೆ ಮಾತಾಡಬೇಕು. ಐದು ಗ್ಯಾರಂಟಿ ಕೊಟ್ಟಿದ್ದೇವೆ, ಜನರಿಗೆ ಉಪಯೋಗವಾಗುತ್ತಿದೆ. ಬಿಜೆಪಿಯವರು ಆದೇಶ ಮಾಡಿದ್ದಾರೆ, ಮಠಕ್ಕೆ ಹಣ ಕೊಟ್ಟಿಲ್ಲ. ಐದು ಗ್ಯಾರಂಟಿ ಅವರು ಭಾವನೆ ಮೇಲೆ ಹೋಗುತ್ತಿದ್ದಾರೆ ಎಂದರು.

ನಿಗಮ ಮಂಡಳಿ ಸ್ಥಾನ ಬಹಳ ಜನ ಬೇಡ ಅಂದಿದ್ದಾರೆ. ಬಹಳ ಜನರು ಅಧ್ಯಕ್ಷ ಸ್ಥಾನ ಬೇಡ ಅಂದಿದ್ದಾರೆ. ಬೇಡ ಎಂದವರನ್ನ ಕರೆಸಿ ಮಾತಾಡಿ ಸರಿ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.