Koppala; ‘ಫ್ಯಾಕ್ಟ್ ಚೆಕ್ ಮಾಡಿ..’ ಕಾಂಗ್ರೆಸ್ ಅಪಘಾತ ಟ್ವೀಟ್ ಗೆ ಸಿ.ಟಿ ರವಿ ತಿರುಗೇಟು


Team Udayavani, Jan 5, 2024, 3:28 PM IST

Koppala; ‘ಫ್ಯಾಕ್ಟ್ ಚೆಕ್ ಮಾಡಿ..’ ಕಾಂಗ್ರೆಸ್ ಅಪಘಾತ ಟ್ವೀಟ್ ಗೆ ಸಿ.ಟಿ ರವಿ ತಿರುಗೇಟು

ಕೊಪ್ಪಳ: ‘ನಾನೂ ಕರಸೇವಕ, ನನ್ನನ್ನೂ ಬಂಧಿಸಿ’ ಎಂದು ಪ್ರತಿಭಟನೆ ನಡೆಸುತ್ತಿದ್ದ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್, ‘ಅಪಘಾತ’ದ ವಿಚಾರವಾಗಿ ಟೀಕೆ ಮಾಡಿದೆ. ಇದಕ್ಕೆ ಸಿ.ಟಿ ರವಿ ತಿರುಗೇಟು ನೀಡಿದ್ದು, ಈ ಪ್ರಕರಣದ ಸಿಸಿ ಕ್ಯಾಮರಾ ಪರಿಶೀಲಿಸಬೇಕು. ಸರ್ಕಾರ ಸುಳ್ಳುಗಳನ್ನು ಪತ್ತೆ ಮಾಡುವ ಫ್ಯಾಕ್ಟ್ ಚೆಕ್ ತಂಡಕ್ಕೆ ವಹಿಸಬೇಕು. ಸರಕಾರದ 14 ಕೋಟಿ ರೂಪಾಯಿ ಸರಕಾರದ ಹಣ ಖರ್ಚು ಮಾಡುತ್ತಿದ್ದಿರಿ. ನನ್ನ ಕಾರ್ ಅಪಘಾತದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪೋಸ್ಟ್ ಚೆಕ್ ಮಾಡಬೇಕು. ಇದು ಸುಳ್ಳು ಎಂದಾದರೆ ನಿಮ್ಮ ಮೇಲೆ ಕೇಸ್ ದಾಖಲಿಸುತ್ತೇನೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಲ್ಲಿ ಹಿಂದೂ  ವಿರೋಧಿ ಡಿಎನ್ಎ ಮನೋಭಾವವಿದೆ. ಹಿಂದೂ ಕಾರ್ಯಕರ್ತರಲ್ಲಿ ಭಯ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಿಮ್ಮ ಬೆದರಿಕೆಗಳಿಗೆ ನಾವು ಬಗ್ಗುವುದಿಲ್ಲ. ಶ್ರೀಕಾಂತ್ ಪೂಜಾರಿ ಏನು ಅತ್ಯಾಚಾರ, ಕಳ್ಳತನ ಮಾಡಿದ್ದಾನೆಯೇ? 31 ವರ್ಷದ ಬಳಿಕ ಬಂಧನ ಏಷ್ಟು ಸರಿ ಎಂದು ಪ್ರಶ್ನಿಸಿದರು.

ದೇಶದ ಕಾನೂನು ಎಲ್ಲರಿಗೂ ಒಂದೇ ಎನ್ನುವ ಡಾ. ಜಿ ಪರಮೇಶ್ವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಹಾಗಾದರೆ ಈಗ ಜ್ಞಾನೋದಯವಾಯಿತೆ? ಡಿ ಕೆ ಶಿವಕುಮಾರ್ ಪ್ರಕರಣ ದಾಖಲಿಸಿದ್ದಾಗ ರಾಜ್ಯದಾದ್ಯಂತ ಯಾಕೆ ಹೋರಾಟ ಮಾಡಿದರು ಎಂದರು.

ಗೋಧ್ರಾ ಹತ್ಯೆಯಂಥಹ ಪ್ರಕರಣ ನಡೆಯಬಹುದು ಎಂದು ಹರಿಪ್ರಸಾದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹರಿಪ್ರಸಾದ ಹಿರಿಯರಿದ್ದಾರೆ. ಈ ರೀತಿ ಘಟನೆ ನಡೆಯುತ್ತಿದ್ದರೆ ಮೊದಲು ಪೊಲೀಸರಿಗೆ ತಿಳಿಸಬೇಕಿತ್ತು. ಹರಿಪ್ರಸಾದ ಹೇಳಿಕೆ ನಂತರ ರಾಮಭಕ್ತರಿಗೆ ರಕ್ಷಣೆ ಬೇಕಿದೆ. ರಾಮಮಂದಿರಕ್ಕಾಗಿ ಹಿಂದೂ ಪರ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿದ್ದಾರೆ. ಕರಸೇವೆ ಮಾಡಿದ್ದು ಹಿಂದೂ ಕಾರ್ಯಕರ್ತರು. ಕಾಂಗ್ರೆಸ್ ನವರು ಕರಸೇವೆಯಲ್ಲಿದ್ದರಾ?  ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡೋದು ಕಾಂಗ್ರೆಸ್ ನೀತಿಯೇ? ಈ ಕೆಟ್ಟ ನೀತಿಯಿಂದ ದೇಶದಲ್ಲಿ 40 ಸೀಟು, ರಾಜ್ಯದಲ್ಲಿ ಈಗ ಒಂದೇ ಲೋಕಸಭಾ ಸ್ಥಾನ ಗೆದ್ದಿದೆ. ನಮ್ಮ ತಪ್ಪಿನಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈ ನೀತಿ ಮುಂದುವರಿಸಿದರೆ ಲೋಕಸಭೆಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನ ಗೆಲ್ಲುವುದಿಲ್ಲ ಎಂದರು.

ಲೋಕಸಭೆಗೆ ಸ್ಪರ್ಧಿಸುವ ವಿಚಾರಕ್ಕೆ ಕೇಳಿದ ಪ್ರಶ್ನಗೆ ಉತ್ತರಿಸಿದ ಅವರು, ಎಲ್ಲವನ್ನೂ ಪಾರ್ಟಿ ನಿರ್ಧರಿಸುತ್ತದೆ. ನಾನು ಏನನ್ನು ಬಯಸಿಲ್ಲ. ಪಕ್ಷ ಸೂಚಿಸಿದಂತೆ ಕೆಲಸ ಮಾಡುತ್ತೇನೆ ಎಂದರು.

ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಅಭಿವೃದ್ದಿ ಆಗಲಿದೆ. ಹಿಂದಿನ ಸರಕಾರದಲ್ಲಿ 121 ಕೋಟಿ ರೂಪಾಯಿ ಮಂಜೂರು ಮಾಡಿದೆ. ಈಗಿನ ಸರಕಾರ ಸ್ಥಳೀಯ ಪಾಲುದಾರಿಕೆಯಲ್ಲಿ ಅಭಿವೃದ್ದಿ ಪಡಿಸಬೇಕು ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.