ಧರ್ಮ ಒಡೆಯುವ ಕೆಲಸ ನಡೆಯದು: ಡಾ| ಅನ್ನದಾನ ಶ್ರೀ
ಕಾಯಕವೇ ಕೈಲಾಸವೆಂದು ಬದುಕಿದರೆ ಜೀವನ ಸಾರ್ಥಕ
Team Udayavani, May 8, 2019, 1:37 PM IST
ಕನಕಗಿರಿ: ಪಟ್ಟಣದ ಸುವರ್ಣಗಿರಿ ವಿರಕ್ತಮಠದಲ್ಲಿ ಡಾ| ಅನ್ನದಾನ ಸ್ವಾಮೀಜಿಗೆ ಗುರುವಂದನೆ ಸಲ್ಲಿಸಲಾಯಿತು.
ಕನಕಗಿರಿ: ವೀರಶೈವ ಮತ್ತು ಲಿಂಗಾಯತ ಧರ್ಮ ಎರಡು ಒಂದೇಯಾಗಿದ್ದು, ಬೇರೆ ಬೇರೆ ಎನ್ನುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅನ್ನದಾನೀಶ್ವರ ಸಂಸ್ಥಾನಮಠ ಮುಂಡರಗಿಯ ನಾಡೋಜ ಡಾ| ಅನ್ನದಾನ ಸ್ವಾಮೀಜಿ ಹೇಳಿದರು.
ಪಟ್ಟಣ ಸುರ್ವಣಗಿರಿ ವಿರಕ್ತಮಠದ ಆವರಣದಲ್ಲಿ ಬಸವ ಜಯಂತಿ ಪ್ರಯುಕ್ತ ನಡೆದ ಗುರುವಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಲವರು ವೀರಶೈವ, ಲಿಂಗಾಯತ ಧರ್ಮದ ಆಚಾರ ವಿಚಾರ ಗೊತ್ತಿರದೇ ಧರ್ಮವನ್ನು ಒಡೆಯುವ ಕೆಲಸದಲ್ಲಿ ತೋಡಗಿದ್ದಾರೆ. ಧರ್ಮ ಒಡೆಯುವ ಕೆಲಸ ಎಂದು ನಡೆಯದು, ಅಂತಹವರಿಗೆ ಜನರು ಈಗಾಗಲೇ ತಕ್ಕ ಪಾಠ ಕಲಿಸಿದ್ದಾರೆ. ಬಸವಣ್ಣನವರು ಹಾಕಿಕೊಟ್ಟ ಮಾರ್ಗದಡಿ ಕಾಯಕವೇ ಕೈಲಾಸವೆಂದು ಜೀವನ ಮಾಡಿದಾಗ ಜೀವನ ಸಾರ್ಥಕವಾಗುತ್ತದೆ. ಶಿಕ್ಷಣ, ಅನ್ನ ದಾಸೋಹ ಮಾಡುವ ಮೂಲಕ ಕನಕಗಿರಿ ಸುವರ್ಣಗಿರಿ ವಿರಕ್ತಮಠ ಸಮಾಜಕ್ಕೆ ತನ್ನದೇ ಆದ ಕೂಡುಗೆಯನ್ನು ನೀಡಿದೆ ಎಂದರು.
ಅನ್ನದಾನೀಶ್ವರ ಸಂಸ್ಥಾನಮಠ ಮುಂಡರಗಿಯ ನಾಡೋಜ ಡಾ| ಅನ್ನದಾನ ಸ್ವಾಮೀಜಿ ಪಟ್ಟಾಧಿಕಾರದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಪಟ್ಟಣದ ಸುವರ್ಣಗಿರಿ ವಿರಕ್ತಮಠದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ದೂರದರ್ಶನ ಮತ್ತು ಆಕಾಶವಾಣಿ ಕಲಾವಿದ ಅಂಬಯ್ಯ ನೂಲಿ ವಿಶೇಷ ಸಂಗೀತ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನಂತರ ಮಠದವತಿಯಿಂದ ಸುವರ್ಣಗಿರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸುವರ್ಣಗಿರಿ ವಿರಕ್ತಮಠದ ಡಾ| ಚನ್ನಮಲ್ಲಸ್ವಾಮೀಜಿ, ಪ್ರಭುಶಂಕರೇಶ್ವರ ಸಂಸ್ಥಾನಮಠ ಅಮೀನಗಡದ ಶಂಕರರಾಜೇಂದ್ರ ಸ್ವಾಮೀಜಿ, ಅನ್ನದಾನೀಶ್ವರ ಸಂಸ್ಥಾನಮಠದ ಉತ್ತರಾಧಿಕಾರ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀನಗರ ಗಡ್ಡಿಮಠದ ಶಾಂತಲಿಂಗ ಸ್ವಾಮೀಜಿ, ಗಚ್ಚಿನ ಹಿರೇಮಠದ ವರರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಅನ್ನದಾನೀಶ್ವರ ದೇವಮಂದಿರದ ಅಭಿನವ ಮೃತ್ಯುಂಜಯ ಸ್ವಾಮೀಜಿ, ಶ್ರೀವಿರಕ್ತಮಠ ನರಗುಂದದ ಶಿವಕುಮಾರ ಸ್ವಾಮೀಜಿ, ಪಶ್ಚೀಮಾದ್ರಿ ವಿರಕ್ತಮಠ ನೀರಗಡಗೊಂಬದ ಪಂಚಮ ಸಿದ್ದಲಿಂಗ ಸ್ವಾಮೀಜಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ