ಕಿಮ್ಸ್‌ಗೆ ಮಹಾಂತ ದೇವರು ತಾಯಿ ಮೃತದೇಹ ದಾನ!


Team Udayavani, Feb 8, 2019, 10:17 AM IST

8-february-22.jpg

ಕೊಪ್ಪಳ: ಈ ದೇಹ ಮಣ್ಣಲ್ಲಿ ಮಣ್ಣಾಗುವ ಬದಲು ಅಭ್ಯಾಸ ಮಾಡುವ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಲಿ ಎನ್ನುವ ತಾತ್ವಿಕತೆ ಅರಿತ ಬಾಗಲಕೋಟೆ ಜಿಲ್ಲೆಯ ಸ್ವಾಮೀಜಿ ಒಬ್ಬರು ತಮ್ಮ ತಾಯಿಯ ಮೃತದೇಹವನ್ನೇ ದಾನ ಮಾಡಿ ಸಮಾಜಕ್ಕೆ ಜಾಗೃತಿಯ ಸಂದೇಶ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬನಹಟ್ಟಿಯ ಶರಣರ ಕುಟೀರದ ಸ್ವಾಮೀಜಿ ಮಹಾಂತ ದೇವರು ತಮ್ಮ ತಾಯಿ ಕಮಲಮ್ಮ (82) ಅವರ ಮೃತದೇಹವನ್ನು ವೈದ್ಯಕೀಯ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳ ಅಧ್ಯಯನಕ್ಕೆ ದಾನ ಮಾಡಿದ್ದಾರೆ. ಮಹಾಂತ ದೇವರು ಅವರ ತಾಯಿ ಕಮಲಮ್ಮ ಜ.22ರಂದೇ ಮೃತಪಟ್ಟಿದ್ದಾರೆ. ಸ್ವಾಮೀಜಿಗಳು ತಮ್ಮ ತಾಯಿಯ ಮೃತದೇಹವನ್ನು ಬೈಲಹೊಂಗದಲ್ಲಿನ ಡಾ| ರಾಮಣ್ಣವರ್‌ ಪ್ರತಿಷ್ಠಾನಕ್ಕೆ ಹಸ್ತಾಂತರ ಮಾಡಿದ್ದಾರೆ. ಈ ಪ್ರತಿಷ್ಠಾನವು ಹಲವು ವರ್ಷಗಳಿಂದ ಮೃತದೇಹ ದಾನದ ಕುರಿತು ಜಾಗೃತಿ ಮೂಡಿಸುತ್ತಿದೆ. ದೇಹ ಮಣ್ಣಲ್ಲಿ ಮಣ್ಣಾಗುವ ಬದಲು ನಾಲ್ಕಾರು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗಲಿದೆ ಎಂದು ವೈಜ್ಞಾನಿಕ ತಿಳಿವಳಿಕೆ ನೀಡುತ್ತಿದೆ. ಪ್ರತಿಷ್ಠಾನದ ಕಾರ್ಯದರ್ಶಿ ಡಾ| ಮಹಾಂತೇಶ ರಾಮಣ್ಣವರ್‌ ಅವರು ಆ ದೇಹವನ್ನು ಬೈಲಹೊಂಗಲದ ಎಸ್‌.ಜಿ.ವಿ. ಆರ್ಯುವೇದ ಕಾಲೇಜಿಗೆ ಹಸ್ತಾಂತರ ಮಾಡಿದ್ದಾರೆ.

ಕಿಮ್ಸ್‌ಗೆ ಮೃತದೇಹ ಬಂದಿದ್ದು ಹೇಗೆ?: ಕೊಪ್ಪಳ ಮೆಡಿಕಲ್‌ ಕಾಲೇಜಿನಲ್ಲಿ ಮೃತದೇಹದ ಕೊರತೆ ಇದೆ. ಎಂಸಿಐ ನಿಯಮದ ಪ್ರಕಾರ 10 ವಿದ್ಯಾರ್ಥಿಗಳಿಗೆ ಒಂದು ಮೃತದೇಹದ ಅಧ್ಯಯನಕ್ಕೆ ಬೇಕು. ಆದರೆ ಕಿಮ್ಸ್‌ನಲ್ಲಿ 5 ಮೃತದೇಹಗಳು ಮಾತ್ರ ಇವೆ. ಹಾಗಾಗಿ ವಿದ್ಯಾರ್ಥಿಗಳಿಗೆ ಮೃತದೇಹದ ಕೊರತೆಯಾದ ಕಾರಣ ಕಿಮ್ಸ್‌ ಬೈಲಹೊಂಗಲದ ಆರ್ಯುವೇದ ಕಾಲೇಜಿಗೆ ಹಾಗೂ ಪ್ರತಿಷ್ಠಾನವನ್ನು ಸಂಪರ್ಕಿಸಿ ಮೃತದೇಹ ದಾನಕ್ಕಾಗಿ ಮನವಿ ಮಾಡಿತ್ತು. ಕಿಮ್ಸ್‌ಗೆ ಸ್ವಾಮೀಜಿ ಅವರ ತಾಯಿ ಮೃತದೇಹವೇ ರವಾನೆಯಾಗಿರುವುದು ವಿಶೇಷವಾಗಿದೆ. ಅದು ಈ ಭಾಗದ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪುಣ್ಯವೇ ಸರಿ. ಮಂಗಳವಾರದಂದೇ ಮೃತದೇಹ ಆಗಮಿಸಿದ್ದು, ಶ್ರದ್ಧಾಂಜಲಿ ಅರ್ಪಿಸುವ ಮೂಲಕ ಮೃತದೇಹಕ್ಕೆ ನಮನ ಸಲ್ಲಿಸಿ, ಅಂಗರಚನಾ ವಿಭಾಗಕ್ಕೆ ದೇಹವನ್ನು ರವಾನೆ ಮಾಡಲಾಗಿದೆ.

ಕಿಮ್ಸ್‌ಗೆ ಮೃತದೇಹಗಳ ಕೊರತೆಯಿತ್ತು. ಇದಕ್ಕಾಗಿ ಡಾ| ರಾಮಣ್ಣವರ್‌ ಪ್ರತಿಷ್ಠಾನವನ್ನು ಸಂಪರ್ಕಿಸಿದ್ದೆವು. ಅವರ ನೆರವಿನಿಂದ ಒಬ್ಬ ಸ್ವಾಮೀಜಿ ಅವರ ತಾಯಿಯ ಮೃತದೇಹವನ್ನು ಬೈಲಹೊಂಗಲದ ಆರ್ಯುವೇದ ಕಾಲೇಜಿನ ಮೂಲಕ ಕೊಪ್ಪಳ ಕಿಮ್ಸ್‌ಗೆ ಕಳುಹಿಸಿದ್ದಾರೆ. ದೇಹ ಮಣ್ಣಲ್ಲಿ ಮಣ್ಣಾಗುವ ಬದಲು ವಿದ್ಯಾರ್ಥಿಗಳ ಅಧ್ಯಯನಕ್ಕೆ ನೆರವಾಗತ್ತದೆ ಎಂದು ಸ್ವಾಮೀಜಿಗಳು ತಮ್ಮ ತಾಯಿ ದೇಹದಾನ ಮಾಡಿರುವುದು ಶ್ಲಾಘನೀಯ.
• ಡಾ| ಚನ್ನಬಸವನಗೌಡ,
ಕಿಮ್ಸ್‌ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರು

ಈ ಹಿಂದೆ ಬನಹಟ್ಟಿಯಲ್ಲಿ ಮೃತದೇಹ ದಾನದ ಕುರಿತು ಉಪನ್ಯಾಸ ನೀಡಿ ಜಾಗೃತಿ ಮೂಡಿಸಿದ್ದೆ. ಅದರಿಂದ ಪ್ರೇರೇಪಿತರಾಗಿ ಮಹಾಂತ ದೇವರು ಸ್ವಾಮೀಜಿಗಳು ತಮ್ಮ ತಾಯಿಯ ಮೃತದೇಹ ದಾನ ಮಾಡಿದ್ದಾರೆ. ಅವರ ಒಪ್ಪಿಗೆ ಮೇರೆಗೆ ಬೈಲಹೊಂಗಲ ಕಾಲೇಜು ಮೂಲಕ ಕೊಪ್ಪಳ ಕಿಮ್ಸ್‌ಗೆ ರವಾನೆ ಮಾಡಿದ್ದೇವೆ. ಕಿಮ್ಸ್‌ನಲ್ಲಿ ತುಂಬ ಅವಶ್ಯವಿದ್ದ ಕಾರಣ ಅಲ್ಲಿಗೆ ರವಾನೆ ಮಾಡಿದ್ದೇವೆ. ಭಾವನಾತ್ಮಕತೆ ಬಿಟ್ಟು ತಮ್ಮ ದೇಹ ದಾನ ಮಾಡಲು ಮುಂದೆ ಬರಬೇಕು.
• ಡಾ| ಮಹಾಂತೇಶ ರಾಮಣ್ಣನವರ್‌,
ಡಾ| ರಾಮಣ್ಣವರ್‌ ಪ್ರತಿಷ್ಠಾನದ ಕಾರ್ಯದರ್ಶಿ, ಬೈಲಹೊಂಗಲ

•ದತ್ತು ಕಮ್ಮಾರ

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.