ಖಾಸಗಿ ಶಾಲೆಗಳಲ್ಲಿ ಡೋನೇಶನ್‌: ಖಂಡನೆ

•ವಿವಿಧ ಸಂಘಟನೆಗಳಿಂದ ಪ್ರತಿಭಟನೆ-ಮನವಿ•ಖಾಸಗಿ ಶಾಲೆಗಳು ಸರ್ಕಾರದ ನಿಯಮ ಪಾಲಿಸುತ್ತಿಲ್ಲ

Team Udayavani, Jun 20, 2019, 11:33 AM IST

kopala-tdy-3..

ಕುಷ್ಟಗಿ: ಹೆಚ್ಚುವರಿ ಡೋನೇಶನ್‌ ವಸೂಲಿ ಮಾಡುತ್ತಿರುವ ಶಾಲೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಸದಸ್ಯರು ಬಿಇಒ ಚನ್ನಬಸಪ್ಪ ಮಗ್ಗದ್‌ ಅವರಿಗೆ ದೂರು ನೀಡಿದರು.

ಕುಷ್ಟಗಿ: ಖಾಸಗಿ ಶಾಲೆಗಳಲ್ಲಿ ಡೋನೇಶನ್‌ ಸುಲಿಗೆ ಖಂಡಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ಇಲ್ಲಿನ ಬಿಇಒ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಕಾರ್ಗಿಲ್ ವೃತ್ತದಿಂದ ಕರ್ನಾಟಕ ವಿದ್ಯಾರ್ಥಿ ಸಂಘಟನೆ, ಕರವೇ ಸ್ವಾಭಿಮಾನಿ ಬಣ, ರೈತ ಸಂಘಗಳ ಸಹಯೋಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ನಂತರ ಬಿಇಒ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು, ಸರ್ಕಾರ ನಿಗದಿ ಪಡಿಸಿದ ಶುಲ್ಕದ ಹೊರತಾಗಿಯೂ ಹೆಚ್ಚುವರಿ ವಸೂಲಿ ಮಾಡುತ್ತಿದ್ದಾರೆ. ಪಟ್ಟಣದ ವಿವಿಧ ಖಾಸಗಿ ಶಾಲೆಗಳಲ್ಲಿ ಸರ್ಕಾರಿ ಶುಲ್ಕ ನೀತಿ ಉಲ್ಲಂಘಿಸಿ ಹೆಚ್ಚುವರಿ ಡೋನೇಶನ್‌ ವಸೂಲಿಗೆ ಸಾಕ್ಷಿಯಾಗಿ ವೀಡಿಯೋ ಮಾಡಿರುವುದನ್ನು ಬಿಇಒ ಅವರಿಗೆ ಪ್ರದರ್ಶಿಸಿದರೂ ಯಾವುದೇ ಶಿಸ್ತು ಕ್ರಮ ಕೈಗೊಳ್ಳದೇ ಇರುವುದಕ್ಕೆ ರಾಜೀನಾಮೆಗೆ ಒತ್ತಾಯಿಸಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ದೇವರಾಜ್‌ ಹಜಾಳ ಮಾತನಾಡಿ, ಜೂ. 18ರಂದು ಪಟ್ಟಣದ ವಿವಿಧ ಖಾಸಗಿ ಶಾಲೆಗಳಲ್ಲಿ ಪಾಲಕರಿಂದ ಡೋನೇಶನ್‌ ವಸೂಲಿ ಮಾಡಿದ ವೀಡಿಯೋ ಸಾಕ್ಷಿ ನೀಡಿದರೂ ಕ್ರಮ ಕೈಗೊಂಡಿಲ್ಲ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದರು.

ರೈತ ಸಂಘದ ಜಿಲ್ಲಾಧ್ಯಕ್ಷ ಅಬ್ದುಲ್ ನಜೀರಸಾಬ್‌ ಮೂಲಿಮನಿ ಮಾತನಾಡಿ, ಶೈಕ್ಷಣಿಕವಾಗಿ ಖಾಸಗಿ ಶಾಲೆಗಳು ಆರಂಭಿಸಲು ಯಾವುದೇ ಅಭ್ಯಂತರವಿಲ್ಲ. ಆದರೆ ಸರ್ಕಾರ ನಿಯಮ ಉಲ್ಲಂಘಿಸಿದರೆ ನಮ್ಮ ವಿರೋಧವಿದೆ ಎಂದರು.

ಮನವಿ ಸ್ವೀಕರಿಸಿದ ಬಿಇಒ ಚನ್ನಬಸಪ್ಪ ಮಗ್ಗದ್‌ ಅವರು, ಸರ್ಕಾರದ ನಿಗದಿತ ಶುಲ್ಕ ಬದಲಿಗೆ ಹೆಚ್ಚುವರಿ ಶುಲ್ಕದ ರಶೀದಿ ನೀಡಿದರೆ ಆ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಶಾಲೆಗಳ ಶಾಲಾ ವಾರು ಶುಲ್ಕ ಪ್ರತ್ಯೇಕವಾಗಿದ್ದು ಏಕರೂಪವಾಗಿಲ್ಲ. ಲೆಕ್ಕ ಪರಿಶೋಧನಾ ವರದಿಯಾನುಸಾರ ಶುಲ್ಕ ನಿಗದಿಯಾಗಿರುತ್ತದೆ. ಹೆಚ್ಚವರಿ ಹಣ ತೆಗೆದುಕೊಂಡಿದ್ದರೆ ಪಾಲಕರಿಗೆ ವಾಪಾಸ್‌ ದೊರಕಿಸಿಕೊಡುವ ಜವಾಬ್ದಾರಿ ನಮ್ಮದು. ಸಂಘಟನೆಗಳು ದೂರು ನೀಡಿರುವ ಶಾಲೆಗಳಿಗೆ ನೋಟಿಸ್‌ ನೀಡಲಾಗುವುದು ಎಂದರು.

ರೈತ ಸಂಘದ ಮಹಿಳಾ ಘಟಕದ ಮಹಾಂತಮ್ಮ ಪಾಟೀಲ, ಮಾರುತಿ ನಾಯಕ್‌, ಮುರಳೀಧರ, ಸಂಚಾಲಕ ತೊಂಡೆಪ್ಪ ಚೂರಿ, ರಾಘವೇಂದ್ರ ದಾಸ್‌, ಮನೋಜ್‌ ಪಟ್ಟಣಶೆಟ್ಟರ, ಪ್ರಕಾಶ ತಾಳಕೇರಿ, ಹುಲಗಪ್ಪ ಚೂರಿ, ಹನುಮೇಶ ಬೂತಬಿಲ್ಲಿ, ರಾಘವೇಂದ್ರ, ರಫಿ ಬಂಗಾಳಿಮ ಅಡಿವೆಪ್ಪ ನಾಯಕ್‌, ಮುತ್ತುರಾಜ್‌, ರಾಜಶೇಖರ, ನವೀನ್‌ ಕಲಾಲ್ ಇತರರಿದ್ದರು.

ಸರ್ಕಾರ ನಿಗದಿಪಡಿಸಿ ಶುಲ್ಕ ವಸೂಲಿ ಮಾಡಬೇಕು. ಶುಲ್ಕದ ಮಾಹಿತಿಯನ್ನು ಶಾಲೆಯ ನೋಟಿಸ್‌ ಬೋರ್ಡ್‌ನಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕು. ಹೆಚ್ಚುವರಿ ಡೋನೇಶನ್‌ ವಸೂಲಿ ಮಾಡಿದರೆ ಶಾಲೆಯ ನವೀಕರಣ, ಶಾಲೆಯ ನೋಂದಣಿ ರದ್ದತಿಗೆ ಮೇಲಾಧಿಕಾರಿಗೆ ಪತ್ರ ಬರೆಯುವೆ. ಈ ಪ್ರಕರಣದಿಂದಾದರೂ ಖಾಸಗಿ ಶಾಲೆಗಳು ಮುಚ್ಚಿದರೆ ಆಗುವ ಮೊದಲ ಸಂತೋಷ ನನಗೆ • ಚನ್ನಬಸಪ್ಪ ಮಗ್ಗದ್‌, ಬಿಇಒ ಕುಷ್ಟಗಿ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.