ಜಿಂದಾಲ್ಗೆ ಒಂದಿಂಚೂ ಭೂಮಿ ಕೊಡಬೇಡಿ

•ರೈತರ ಹಿತಾಸಕ್ತಿ ವಿರುದ್ಧ ಸರ್ಕಾರದ ನಡೆ •27ರಂದು ತೋರಣಗಲ್ನಲ್ಲಿ ಬೃಹತ್‌ ಸಮ್ಮೇಳನ

Team Udayavani, Jul 10, 2019, 11:22 AM IST

kopala-tdy-3..

ಕೊಪ್ಪಳ: ರಾಜ್ಯ ಸರ್ಕಾರ ಜಿಂದಾಲ್ಗೆ 3,667 ಎಕರೆ ಭೂಮಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲು ಮುಂದಾಗಿದ್ದು, ಯಾವುದೇ ಕಾರಣಕ್ಕೂ ಕಾರ್ಖಾನೆಗೆ ಅಂಗುಲ ಭೂಮಿಯನ್ನು ಕೊಡುವಂತಿಲ್ಲ ಎಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟವು ಹೋರಾಟಗಾರ ವಾಟಾಳ್‌ ನಾಗರಾಜ ನೇತೃತ್ವದಲ್ಲಿ ತಾಲೂಕಿನ ಮುನಿರಾಬಾದ್‌ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡಿ ಧರಣಿ ನಡೆಸಿತು.

ಮೈತ್ರಿ ಸರ್ಕಾರವು ಕೋಟ್ಯಂತರ ರೂ. ಬೆಲೆಬಾಳುವ ಭೂಮಿಯನ್ನು ಜಿಂದಾಲ್ ಕಾರ್ಖಾನೆಗೆ ಕಡಿಮೆ ಬೆಲೆಗೆ ಮಾರಾಟ ಮಾಡಲು ಮುಂದಾಗಿದೆ. ಇದೊಂದು ಕೆಟ್ಟ ನಿರ್ಧಾರ. ರೈತರ ಹಿತಾಸಕ್ತಿಯ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಸಂಘಟನೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಹೋರಾಟಗಾರ ವಾಟಾಳ್‌ ನಾಗರಾಜ ಮಾತನಾಡಿ, ಜಿಂದಾಲ್ಗೆ ಸಾವಿರಾರು ಕೋಟಿ ಬೆಲೆ ಬಾಳುವ ಭೂಮಿ ಕೊಡುತ್ತಿರುವುದು ಅನ್ಯಾಯ. ಇದರಿಂದ ರೈತರಿಗೆ ಹಾಗೂ ಪರಿಸರಕ್ಕೆ ಅನ್ಯಾಯವಾಗುತ್ತಿದೆ. ಕಾರ್ಖಾನೆಗಳು ಈಗಾಗಲೇ ತುಂಗಭದ್ರಾ ನದಿಯಿಂದ 8 ಟಿಎಂಸಿ ಅಡಿ ನೀರು ಪಡೆಯುತ್ತಿದ್ದಾರೆ. ಈ ಅನ್ಯಾಯದಲ್ಲೂ ಜಿಂದಾಲ್ಗೆ ಭೂಮಿ ಕೊಡುತ್ತಿರುವುದನ್ನು ವಿರೋಧಿಸಿದ್ದಕ್ಕೆ ಈಗ ಸರ್ಕಾರ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಉಪ ಸಮಿತಿ ಮಾಡಿದೆ. ಇದು ಹೇಗೆ ಆಗಿದೆಯಂದ್ರೆ ತೋಳವನ್ನು ಕುರಿ ಕಾಯಿ ಎಂದರೆ, ಸಂಬಳ ಇಲ್ಲದೇ ಕುರಿ ಕಾಯುವೆ ಎಂತಂತೆ. ಜಿಂದಾಲ್ ವಿಚಾರದಲ್ಲಿ ಉಪ ಸಮಿತಿ ಸ್ಥಿತಿಯೂ ಹಾಗೆ ಆಗಿದೆ. ಉಪ ಸಮಿತಿಯನ್ನು ನಾವು ತಿರಸ್ಕಾರ ಮಾಡುತ್ತೇವೆ. ಕಮಿಟಿಗೆ ನಾವು ಬೆಲೆ ಕೊಡಲ್ಲ. ಜಿಂದಾಲ್ಗೆ ಯಾವುದೇ ಕಾರಣಕ್ಕೂ ಭೂಮಿ ಕೊಡಲ್ಲ ಎಂದರು. ಇನ್ನೂ ಜು. 27ರಂದು ತೋರಣಗಲ್ನಲ್ಲಿ ಕನ್ನಡಪರ ಸಂಘಟನೆಗಳಿಂದ ದೊಡ್ಡ ಸಮ್ಮೇಳನ ಮಾಡಲಿದ್ದೇವೆ. ಬಳ್ಳಾರಿ ಬಂದ್‌ಗೆ ಕರೆ ಕೊಡಲಿದ್ದೇವೆ. ಬಳಿಕ ಕರ್ನಾಟಕ ಬಂದ್‌ಗೆ ಕರೆ ಕೊಡಲಿದ್ದೇವೆ.

ರಾಜ್ಯದಲ್ಲಿ ವಿವಿಧೆಡೆ ಲೂಟಿಯಾಗುತ್ತಿದೆ. ಅದರಲ್ಲೂ ಬಳ್ಳಾರಿ ಜಿಲ್ಲೆಯಲ್ಲಿ ಲೂಟಿ ಮಾಡಲಾಗುತ್ತಿದೆ. ಇದನ್ನು ದರೋಡೆ ಎಂದರೂ ತಪ್ಪಲ್ಲ. ಜಿಂದಾಲ್ ಕಂಪನಿಗೆ 1995ರಿಂದ ಈ ವರೆಗೂ 11,500 ಎಕರೆ ಭೂಮಿಯನ್ನು ಕೊಟ್ಟಿದ್ದಾರೆ. ಯಾವ ಉದ್ದೇಶಕ್ಕೆ ಭೂಮಿ ಕೊಡಲಾಗಿದೆ ಎಂಬ ಷರತ್ತನ್ನು ಕೈಗಾರಿಕೆ ಮಂತ್ರಿ, ಮುಖ್ಯಮಂತ್ರಿ ನೋಡಿಲ್ಲ. ಅರಣ್ಯ ಪ್ರದೇಶವನ್ನು ಕಾರ್ಖಾನೆಗೆ ಕೊಡಲಾಗಿದೆ. ಕಾರ್ಖಾನೆ ಎಷ್ಟು ಅರಣ್ಯ ಬೆಳೆಸಿದೆ ಎನ್ನುವುದನ್ನು ಪರಿಶೀಲನೆ ಮಾಡಬೇಕು. ಜಿಂದಾಲ್ ಕಾರ್ಖಾನೆ ಮಾಲೀಕ ಇಲ್ಲಿಯವರಲ್ಲ. 1995ರಿಂದ ಎಲ್ಲ ಸರ್ಕಾರಗಳು ಜಿಂದಾಲ್ ಗುಮಾಲರಾಗಿದ್ದಾರೆ. ಜಿಂದಾಲ್ ಹೇಳಿದಂತೆ ಕೇಳಿದ್ದಾರೆ. ಈಗ 3667 ಎಕರೆ ಭೂಮಿಯನ್ನು ಎಕರೆಗೆ 1.20 ಲಕ್ಷ ರೂ.ಗೆ ಮಾರಾಟ ಮಾಡಲು ಮುಂದಾಗಿದ್ದಾರೆ. ಈ ಭೂಮಿಯಲ್ಲಿ ಏನೇನು ಸೌಲಭ್ಯವಿದೆ. ಎಂಬುದನ್ನು ನೋಡಿಲ್ಲ. ಎಷ್ಟು ಖನಿಜ ಇದೆ ಎಂಬುದನ್ನು ನೋಡಿಲ್ಲ. ಇದನ್ನು ಮೈಸೂರು ಮಿನಿರಲ್ಸ್ ಅವರು ನೋಡಿದ್ದಾರೆಯೇ? ಮೈಸೂರು ಮಿನಿರಲ್ಸ್ ಇರೋದು ದನ ಕಾಯೋಕಾ? ಈ ಭೂಮಿಯಲ್ಲಿ ಎಷ್ಟು ಖನಿಜ ಇದೆ ಎಂಬುದನ್ನು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಕ್ಕೆ ಭೂಮಿ ಕೊಟ್ಟಿರುವ ಷರತ್ತಿನ ಬಗ್ಗೆ ನೋಡುವ ಜೊತೆಗೆ ಹೊರ ರಾಜ್ಯದ ಜನರಿಗೆ ಕಾರ್ಖಾನೆಗಳಲ್ಲಿ ಕೆಲಸ ಕೊಟ್ಟಿದ್ದಾರೆ. ಆದರೆ ಕನ್ನಡಿಗರಿಗೆ ಕೆಲಸವಿಲ್ಲ. ಇದು ಅತ್ಯಂತ ಗಂಭೀರ ವಿಷಯ. ಇನ್ನೂ ಉಪ ಸಮಿತಿ ಯಾವುದೇ ಕಾರಣಕ್ಕೂ ಬಳ್ಳಾರಿಗೆ ಬರುವಂತಿಲ್ಲ. ಬಂದರೆ ನಾವು ಹೋರಾಟ ಮಾಡಲಿದ್ದೇವೆ ಎಂದು ಎಚ್ಚರಿಕೆ ನೀಡಿದರು. ಹೆದ್ದಾರಿ ಬಂದ್‌ ಮಾಡಿ ಧರಣಿ ನಡೆಸುತ್ತಿದ್ದ ವೇಳೆ ಪೊಲೀಸರು ಅವರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.

ಪ್ರತಿಭಟನೆಯ ವೇಳೆ ಕನ್ನಡಪರ ಸಂಘಟನೆಗಳ ಮುಖಂಡರಾದ ರಾಜೇಶ ಅಂಗಡಿ, ಆರ್‌. ವಿಜಯಕುಮಾರ, ಕೆ.ಎರಿಸ್ವಾಮಿ, ವಿರುಪಾಕ್ಷಗೌಡ ನಾಯಕ ಸಏರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.