Dotihal: ಹಳ್ಳಕ್ಕೆ ಬಿದ್ದ ಮಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್
Team Udayavani, Oct 15, 2023, 6:37 PM IST
ದೋಟಿಹಾಳ: ಕುಷ್ಟಗಿ ತಾಲ್ಲೂಕಿನ ಮಿಯ್ಯಾಪೂರ ಗ್ರಾಮದ ಹತ್ತಿರ ಇರುವ ಹಳ್ಳದಲ್ಲಿ ದೋಟಿಹಾಳದಿಂದ ಮಂಗಳೂರು ಹೋಗುವ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಿದ್ದ ಘಟನೆ ರವಿವಾರ ಸಂಜೆ 4 ಗಂಟೆ ಸುಮಾರಿಗೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು 3ನೇ ಡಿಪೋದ ಕೆಎ:57 ಎಫ್:4537 ಬಸ್ ದೋಟಿಹಾಳ ಗ್ರಾಮದಿಂದ ಹನುಮಸಾಗರ ಮಾರ್ಗವಾಗಿ ಮಂಗಳೂರಿಗೆ ಹೋಗುವ ಸಾರಿಗೆ ಬಸ್ ಮಿಯ್ಯಾಪೂರ ಗ್ರಾಮದ ಬಳಿಯ ಹಳ್ಳದಲ್ಲಿ ಬಿದ್ದಿದ್ದೆ. ಹಳ್ಳದ ಎರಡು ಬದಿಗಳಲ್ಲಿ ತಡೆಗೋಡೆ ಇಲ್ಲದೆ ಇರುವದು ಈ ಅನಾಹುತಕ್ಕೆ ಕಾರಣ ಎನ್ನಲಾಗಿದೆ.
ಈ ಬಸ್ಸಿನಲ್ಲಿ ದೋಟಿಹಾಳ, ಕಲಿಕೇರಿ ಕ್ಯಾದಗುಪ್ಪಾ, ಮೇಣಸಗೇರಿ ಹಾಗೂ ಮಿಯಾಪೂರು ಗ್ರಾಮದ ಪ್ರಯಾಣಿಕರು ಸೇರಿದಂತೆ ಸುಮಾರು 20 ಕ್ಕೆ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭಿಸಿಲ್ಲ. ಕೆಲವರಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ತಾಲೂಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
ಸ್ಥಳಕ್ಕೆ ಹನುಮಸಾಗರ, ಕುಷ್ಟಗಿ ಪಿಎಸೈ ಹಾಗೂ ಕುಷ್ಟಗಿ ಸಾರಿಗೆ ಡಿಪೋದ ಸಿಬ್ಬಂದಿಗಳು ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ