ದೋಟಿಹಾಳ: ಲಕ್ಷಾಂತರ ರೂ. ಖರ್ಚಾದರೂ ಶುದ್ಧ ನೀರಿಲ್ಲ

ಅನುಷ್ಠಾನ ಮಾಡಬೇಕೆಂಬುದೇ ಪ್ರಜ್ಞಾವಂತ ನಾಗರಿಕರ ಕಳಕಳಿಯಾಗಿದೆ.

Team Udayavani, Feb 6, 2023, 6:10 PM IST

ದೋಟಿಹಾಳ: ಲಕ್ಷಾಂತರ ರೂ. ಖರ್ಚಾದರೂ ಶುದ್ಧ ನೀರಿಲ್ಲ

ದೋಟಿಹಾಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಸರಕಾರ ಹೊಸ ಹೊಸ ಯೋಜನೆ ಜಾರಿಗೆ ತಂದಿದೆ. ಆದರೆ ಅವುಗಳು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳ್ಳುತ್ತಿಲ್ಲ. ಹೌದು, ತಾಲೂಕಿನ ಅನೇಕ ಹಳ್ಳಿಗಳಲ್ಲಿ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ಸಹಯೋಗದೊಂದಿಗೆ ನಿರ್ಮಿಸಲಾದ ಶುದ್ಧ ನೀರಿನ ಘಟಕಗಳು ಹಲವು ವರ್ಷಗಳಾದರೂ ಆರಂಭವಾಗದೇ ಸರಕಾರದ ಲಕ್ಷಾಂತರ ರೂ. ಹಣ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಸಮೀಪದ ಹೆಸರೂರು ಗ್ರಾಮದಲ್ಲಿ ಎರಡು ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಿಲಾಗಿದೆ. ಒಂದು ಉದ್ಘಾಟನೆಗೊಂಡು ಕೆಲವೇ ತಿಂಗಳಿನಲ್ಲಿ ಸ್ಥಗಿತಗೊಂಡಿದೆ. ಮತ್ತೂಂದು ಘಟಕ ನಿರ್ಮಾಣಕ್ಕೆ ಬಾಕ್ಸ್‌ ಇಟ್ಟು (ನಿರ್ಮಿಸಿ) ವರ್ಷಗಳಾದರೂ ಅದು ಕಾರ್ಯರೂಪಕ್ಕೆ ಬರದೇ ಹಾಳಾಗಿದೆ. ಇದೇ ರೀತಿ ತೋನಸಿಹಾಳ ತಾಂಡಾದಲ್ಲಿ ಎರಡು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದರೂ ಜನರಿಗೆ ಮಾತ್ರ ಶುದ್ಧ ನೀರು ಸಿಗುತ್ತಿಲ್ಲ. ತಾಂಡಾದಲ್ಲಿರುವ ಎರಡು
ಘಟಕಗಳು ಉದ್ಘಾಟನೆಯಾಗಿ ಹಾಳಾಗಿವೆ. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿದ್ದೇ ಒಂದು ದೊಡ್ಡ ಸಾಧನೆ ಎಂಬಂತೆ ಜನಪ್ರತಿನಿಧಿಗಳು ಬಿಂಬಿಸುತ್ತಿದ್ದಾರೆ. ಆದರೆ ಅವುಗಳು ಇನ್ನೂ ಕಾರ್ಯರೂಪಕ್ಕೆ ಬಾರದೇ ಘಟಕದ ಯಂತ್ರಗಳು ಕೆಟ್ಟು ಮೂಲೆ ಸೇರಿವೆ.

ತಾಲೂಕಿನ ಇಂತಹ ಅನೇಕ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿ ವರ್ಷಗಳಾದರೂ ಇನ್ನೂ ಆರಂಭವಾಗಿದೆ ಯಂತ್ರ ಧೂಳು ತಿನ್ನುತ್ತಿವೆ. ಹಳ್ಳಿಗಳ ಜನರ ಆರೋಗ್ಯಕ್ಕಾಗಿ ಸರಕಾರ ಫ್ಲೋರೈಡ್‌ ಮುಕ್ತ ನೀರನ್ನು ಕಲ್ಪಿಸಲು ಲಕ್ಷಾಂತರ ರೂ. ಹಣ್ಣ ಖರ್ಚು ಮಾಡಿ ಸಮಗ್ರ ಕುಡಿಯುವ ನೀರಿನ ಜಲ ನಿರ್ಮಲ ಯೋಜನೆ ಅನುಷ್ಠಾನಗೊಳಿಸಿದೆ.

ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ಇವರ ಸಹಯೋಗದೊಂದಿಗೆ ಹೆಸರೂರ, ತೋನಸಿಹಾಳ ತಾಂಡಾ ಗ್ರಾಮಗಳು ಸೇರಿದಂತೆ ಅನೇಕ ಕಡೆಗಳಲ್ಲಿ ನೀರಿನ ಶುದ್ಧೀಕರಣ ಘಟಕ ಸ್ಥಾಪಿಸಲಾಗಿದೆ. ಹಲವು ವರ್ಷಗಳಾದರೂ ಅದು ಜನರ ಉಪಯೋಗಕ್ಕೆ ಬರುತ್ತಿಲ್ಲ. ಸರ್ಕಾರ ಲಕ್ಷಾಂತರ ರೂ. ವೆಚ್ಚದಲ್ಲಿ ನೀರು ಶುದ್ಧೀಕರಣ ಘಟಕಕ್ಕೆ ಯಂತ್ರವನ್ನು ಅಳವಡಿಸಲಾಗಿದೆ. ಶುದ್ಧೀಕರಣ ಘಟಕವು ಸಿದ್ಧವಾಗಿ ವರ್ಷಗಳಾದರೂ
ಕಾರ್ಯಾರಂಭ ಮಾಡಿಲ್ಲ.

ತಾಂಡಾದಲ್ಲಿ ಶುದ್ಧ ನೀರಿನ ಘಟಕ ಸ್ಥಾಪನೆ ಮಾಡಿ ಮೂರ್‍ನಾಲ್ಕುì ವರ್ಷಗಳಾಗಿವೆ. ಆದರೆ ಶುದ್ಧೀಕರಣ ಘಟಕ ಕಾರ್ಯಾ ರಂಭವಾಗದೇ ಯಂತ್ರ ಹಾಳಾಗಿ ಮೂಲೆ ಸೇರಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಸರಕಾರದ ಯೋಜನೆಗಳನ್ನು ಜನರಿಗೆ ಸಿಗುವ ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡಬೇಕೆಂಬುದೇ ಪ್ರಜ್ಞಾವಂತ ನಾಗರಿಕರ ಕಳಕಳಿಯಾಗಿದೆ.

ತೋನಸಿಹಾಳ ತಾಂಡಾದಲ್ಲಿರುವ ಎರಡು ಶುದ್ಧ ನೀರಿನ ಘಟಕಗಳ ಪೈಕಿ ಒಂದು ಘಟಕ ಕೆಟ್ಟು ಹೋಗಿದ್ದು, ಇನ್ನೊಂದು ಘಟಕವನ್ನು ರಿಪೇರಿ ಮಾಡಿಸಿದ್ದೇವೆ. ಆದರೆ ಸಾರ್ವಜನಿಕರು ಶುದ್ಧ ನೀರಿನ ಘಟಕದಿಂದ ನೀರು ಒಯ್ಯಲು ಹಿಂಜರಿಯುತ್ತಿದ್ದಾರೆ.
ಅಮೀನ್‌ ಅಲಂದಾರ್‌, ಕೇಸೂರು ಗ್ರಾಪಂ ಪಿಡಿಒ

ಹೇಸರೂರು ಗ್ರಾಮದ ಜನತಾ ಬಡಾವಣೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ನಿಂತಿದೆ. ಇದನ್ನು ರಿಪೇರಿ ಮಾಡಿಸಲು ತಿಳಿಸಿದ್ದೇವೆ ಹಾಗೂ ಮುಖ್ಯ ರಸ್ತೆಯಲ್ಲಿರುವ ಇನ್ನೊಂದು ಘಟಕಕ್ಕೆ ಯಂತ್ರೋಪಕರಣ ಬರದ ಕಾರಣ ಹಾಳಾಗುತ್ತಿದೆ.
ಮುತ್ತಪ್ಪ ಛಲವಾದಿ, ದೋಟಿಹಾಳ ಗ್ರಾಪಂ ಪಿಡಿಒ

ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯಗೆ ಶರಣಾದ ವಿವಾಹಿತ ಜೋಡಿ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿವಾಹಿತ ಜೋಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.