ದೋಟಿಹಾಳ: ಮಳೆ ಹಾಗೂ ಚರಂಡಿ ನೀರಿನಿಂದ ಸುತ್ತುವರೆದ ಮನೆಗೆ ಭೇಟಿ ನೀಡಿದ ಜಿ.ಪಂ. ಸಿಇಓ
Team Udayavani, Oct 16, 2022, 11:50 AM IST
ದೋಟಿಹಾಳ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಗೆ ಗೋತಗಿ ಗ್ರಾಮದ ಮನೆಯ ಸುತ್ತಮುತ್ತ ಚರಂಡಿ ನೀರು ಸುತ್ತುವರೆದು ಮಹಿಳೆಯರು ತಮ್ಮ ಮನೆಯ ಒಳಗೆ ಹೋಗಿ ಬರಲು ಹರಸಾಹಸ ಪಡುವಂತಾಗಿದೆ. ಈ ಮನೆಯ ಮುಂದೆ ಸುಮಾರು ಮೂರು ಅಡಿಯಷ್ಟು ನೀರು ಸಂಗ್ರಹವಾಗಿದ್ದು, ಹೀಗಾಗಿ ಮಹಿಳೆ ತನ್ನ ಮನೆಯ ಒಳಗೆ ಹೋಗಿ ಬರಲು ಹರಸಾಹಸ ಪಡುತ್ತಿದ್ದಳು.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗೋತಗಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಹಿಸಿದ್ದ ಜಿಪಂ ಸಿಇಓ ಫೌಜಿಯಾ ತರುನ್ನಮ್ ಮಳೆ ಮತ್ತು ಚರಂಡಿ ನೀರಿನಿಂದ ನಡುಗದ್ದೆಯಾದ ರೇಣುಕಾ ಹರಿಜನ ಅವರ ಮನೆಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಕೂಡಲೇ ಜಿಪಂ, ತಾಪಂ ವಿಶೇಷ ಅನುದಾನದಲ್ಲಿ ಈ ಪ್ರದೇಶಕ್ಕೆ ಚರಂಡಿ ನಿರ್ಮಾಣ ಮಾಡಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ತಾಪಂ ಇಓ ಶಿವಪ್ಪ ಸುಭೇದಾರ, ಪಿಡಿಓ ಪಂಪಣ್ಣ, ಶಂಕ್ರಪ್ಪ ಜುಮಲಸೇರಿದಂತೆ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ