ದೋಟಿಹಾಳ ಗ್ರಾಮವನ್ನು ಕಂದಾಯ ಹೋಬಳಿ ಕೇಂದ್ರವಾಗಿ ಮಾಡಲು ಹೋರಾಟ


Team Udayavani, Jul 26, 2022, 12:09 PM IST

ದೋಟಿಹಾಳ ಗ್ರಾಮವನ್ನು ಕಂದಾಯ ಹೋಬಳಿ ಕೇಂದ್ರವಾಗಿ ಮಾಡಲು ಹೋರಾಟ

ದೋಟಿಹಾಳ:  ಗ್ರಾಮವನ್ನು ಕುಷ್ಟಗಿ ತಾಲೂಕಿನ ಕಂದಾಯ ಹೋಬಳಿ ಕೇಂದ್ರವನ್ನಾಗಿ ರಾಜ್ಯ ಸರ್ಕಾರ ಘೋಷಿಸುವವರೆಗೂ ನಮ್ಮ ಹೋರಾಟ ನಿಲ್ಲಿಸುವದಿಲ್ಲ ಎಂದು ದೋಟಿಹಾಳ ಹೋಬಳಿ ಕೇಂದ್ರ ಹೋರಾಟ ಸಮಿತಿಯ ಅಧ್ಯಕ್ಷ ರಾಜಸಾಬ್ ಯಲಬುರ್ಗಿ ಅವರು ಹೇಳಿದರು.

ಗ್ರಾಮದ  ಶುಕಮುನಿಸ್ವಾಮಿಗಳ ಮಠದಿಂದ ಹೋರಾಟಗಾರರು ಮೆರವಣಿಗೆ ಮೂಲಕ ಆಗಮಿಸಿ ಬಸ್ಸ ನಿಲ್ದಾಣದ ಹತ್ತಿರ ತಮ್ಮ ಹೋರಾಟವನ್ನು ಆರಂಭಿಸಿ ಅವರು ಮಾತನಾಡಿದ ಅವರು ನಮ್ಮ ದೋಟಿಹಾಳ ಗ್ರಾಮವು ಕಂದಾಯ ಹೋಬಳಿಗೆ ಬೇಕಾಗಿರುವಂತಹ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹೊಂದಿದ್ದು ಈ ಗ್ರಾಮವನ್ನು ಕಂದಾಯ ಹೋಬಳಿಯನ್ನಾಗಿ ಮಾಡಲು  ಇಂದಿನಿಂದ ಅನಿರ್ಧಿಷ್ಟಾವಧಿಯ ಹೋರಾಟವನ್ನು ಆರಂಭಿಸಿದ್ದೇವೆ ಎಂದು ಹೇಳಿದರು ಎಂದರು.

ಈ ನಮ್ಮ ಹೋರಾಟದ ಯಶಸ್ವಿಗೆ ದೋಟಿಹಾಳ ಸೇರಿದಂತೆ ಅಕ್ಕಪಕ್ಕದ ಕೇಸೂರು, ಶಿರಗುಂಪಿ, ಬಿಜಕಲ್ ಹಾಗೂ ಕ್ಯಾದಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು, ಉದ್ಯಮಿಗಳು ಹಾಗೂ ಸಾರ್ವಜನಿಕರು ಸಹಕಾರವಿದೆ. ಕ್ಯಾದಿಗುಪ್ಪಾ, ಕೇಸೂರ, ಬಿಜಕಲ್ಲ, ಶಿರಗುಂಪಿ ಗ್ರಾಪಂಗಳಿಗೆ ದೋಟಿಹಾಳ ಕೇಂದ್ರ ಸ್ಥಾನವಾಗಿದೆ. 5 ಗ್ರಾ.ಪಂ.ಗಳ ವ್ಯಾಪ್ತಿಗೆಯಲ್ಲಿ ಸುಮಾರು 30ಸಾವಿರ ಜನಸಂಖ್ಯೆ ಒಳಗೊಂಡಿದೆ. ದೋಟಿಹಾಳ ಕೇಂದ್ರ ಸ್ಥಾನವನ್ನಾಗಿಸಿ ಹೋಬಳಿಯನ್ನು ರಚಿಸಿದರೆ ಜನರಿಗೆ ಅನುಕೂಲವಾಗಲಿದೆ.

ಸದ್ಯ ಕ್ಯಾದಿಗುಪ್ಪಾ ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳು ಪ್ರಸ್ತುತ ಹನುಮಸಾಗರ ಹೋಬಳಿ ವ್ಯಾಪ್ತಿಗೆ ಬರುತ್ತವೆ. ಇಲ್ಲಿಯ ಜನ ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಸುಮಾರು 40 ಕಿಲೋಮೀಟರ್ ದೂರದ ಹನುಮಸಾಗರಕ್ಕೆ ಕ್ರಮಿಸಬೇಕಾಗುತ್ತದೆ. ಇದರಿಂದ ಜನರ ಸಮಯ ಮತ್ತು ಹಣ ವೆಚ್ಚವಾಗಲಿದೆ. ಹೀಗಾಗಿ ದೋಟಿಹಾಳ ಹೋಬಳಿ ಕೇಂದ್ರವಾದರೆ ಇವರಿಗೆ ಸಮಯ, ಹಣ ಉಳಿತಾಯ ವಾಗುತ್ತದೆ. ದೋಟಿಹಾಳ ಗ್ರಾಮವು ಹೋಬಳಿ ಮುಖ್ಯ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ. ದೋಟಿಹಾಳ ಗ್ರಾಮವು ಕುಷ್ಟಗಿ ತಾಲೂಕಿನಲ್ಲಿ ಅಭಿವೃದ್ಧಿ ಹೊಂದುತ್ತಿರುವ ಗ್ರಾಮಗಳಲ್ಲಿ ಒಂದಾಗಿದ್ದು ಇಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, 33/11ಕೆವಿ ಮುಖ್ಯ ವಿತರಣೆ ವಿದ್ಯುತ್ ಉಪಕೇಂದ್ರ, ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಎರಡು ಪ್ರಾಥಮಿಕ ಶಾಲೆಗಳು, ಎರಡು ಖಾಸಗಿ ಶಾಲೆಗಳು, ಕಸ್ತೂರಿಬಾ ವಸತಿ ನಿಲಯ, ಬಾಲಕರ ವಸತಿ ನಿಲಯ, ಸರಿಯಾದ ಸಮರ್ಪಕ ಸಾರಿಗೆ ವ್ಯವಸ್ಥೆ ಸೇರಿದಂತೆ ಹತ್ತಾರು ಮೂಲಭೂತ ಸೌಕರ್ಯಗಳನ್ನು ಹೊಂದಿದ್ದು ಹಾಗೂ ನಮ್ಮ ಗ್ರಾಮಕ್ಕೆ ಸಮೀಪ ಇರುವ ಕೇಸೂರ ಗ್ರಾಮ ಪಂಚಾಯಿತಿ, ಬಿಜಕಲ್ ಗ್ರಾಮ ಪಂಚಾಯಿತಿ, ಕ್ಯಾದಿಗುಪ್ಪ ಗ್ರಾಮ ಪಂಚಾಯಿತಿ, ಶಿರಗುಂಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು ಇಪ್ಪತ್ತೂಕ್ಕೂ ಹೆಚ್ಚು ಹಳ್ಳಿಗಳಿಗೆ ವ್ಯಾಪಾರ ಹಾಗೂ ವಾಣಿಜ್ಯ ಕೇಂದ್ರವಾಗಿ ದೋಟಿಹಾಳ ಇದೆ. ಸಂಬಂದಪಟ್ಟ ಇಲಾಖೆಯ ಅಧಿಕಾರಿಗಳು, ದೋಟಿಹಾಳ ಹೋಬಳಿಯನ್ನಾಗಿ ಘೋಷಿಸಲು ಕ್ರಮಕೈಗೊಳ್ಳಬೇಕಾಗಿದೆ ಎಂದರು.

ನಮ್ಮ ಪ್ರತಿಭಟನೆಯ ಸ್ಥಳಕ್ಕೆ ಕೊಪ್ಪಳ ಉಸ್ತುವಾರಿ ಮಂತ್ರಿ ಆನಂದಸಿಂಗ್, ಜಿಲ್ಲಾಧಿಕಾರಿಗಳು ಹಾಗೂ ಜನಪ್ರತಿನಿಧಿ ಗಳು ಆಗಮಿಸಿ ಮನವಿ ಸ್ವೀಕರಿಸಿ ಭರವಸೆಯ ಪತ್ರ ನೀಡುವವರೆಗೂ ನಮ್ಮ ಅನಿರ್ದಿಷ್ಟಾವಧಿ ಧರಣಿ ಮುಂದುವರಿಯಲಿದೆ. ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಶ್ರೀನಿವಾಸ ಕಂಟ್ಲಿ ಅವರು ಸಷ್ಟ ಪಡಿಸಿದರು.

ಈ ವೇಳೆ ದೋಟಿಹಾಳ ಹೋಬಳಿ ಕೇಂದ್ರ ಹೋರಾಟ ಸಮಿತಿಯ ಪ್ರಮುಖರಾದ ಬಸವರಾಜ ಕಡಿವಾಲ, ಪ್ರಕಾಶ ಪಟ್ಟೇದ, ಮಂಜೂರಅಲಿ ಬನ್ನು, ಪರಶುರಾಮ್ ಈಳಗೇರ, ಯಮನೂರಪ್ಪ ಕ್ಯಾದಿಗುಪ್ಪಿ, ಹೈ.ಕ. ರಕ್ಷಣಾ ಸಮಿತಿ ಅಧ್ಯಕ್ಷ, ಸುರೇಶ ಹುನಗುಂದ, ಮಾಜಿ ತಾಪಂ ಸದಸ್ಯ ಯಂಕಪ್ಪ ಚವ್ಹಾಚ, ಕೇಶಪ್ಪ ನೀಲಿ,  ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.