ದೋಟಿಹಾಳ: ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಮಧ್ಯೆದ ವಿವಾದದಿಂದಾಗಿ ಬೀದಿ ಬಿದ್ದ ನೇಕಾರರು


Team Udayavani, Apr 23, 2022, 5:33 PM IST

Untitled-1

ದೋಟಿಹಾಳ: ಕೈಮಗ್ಗ ನೇಕಾರರ ಸಹಕಾರ ಉತ್ಪಾದಕರು ಮತ್ತು ಮಾರಾಟ ಸಂಘವನ್ನು ಮುಚ್ಚುವ ಕೆಲಸ ಸಹಕಾರಿ ಸಂಘಗಳ ಅಧಿಕಾರಿಗಳು ಮಾಡುತ್ತಿರುವುದು ಕಂಡುಬರುತ್ತಿದೆ ಎಂದು ಗ್ರಾಮದ ನೇಕಾರರು ಆರೋಪಿಸುತ್ತಿದ್ದಾರೆ.

ಗ್ರಾಮದ ಕೈಮಗ್ಗ ನೇಕಾರರ ಸಹಕಾರ ಉತ್ಪಾದಕರು ಮತ್ತು ಮಾರಾಟ ಸಂಘದ ಆಡಳಿತ ಮಂಡಳಿ ರದ್ದಾಗಿ 10ದಿನಗಳು ಕಳೆದರು ಆಡಳಿತಾಧಿಕಾರಿ ಇತ್ತ ಕಡೆ ಮುಖ ಮಾಡಿಲ್ಲ. ‘ಇತ್ತ ಇದ್ದ ಆಡಳಿತ ಮಂಡಳಿಯು ಇಲ್ಲ, ಆಡಳಿತಾಧಿಕಾರಿ ಬರುತ್ತಿಲ್ಲ’ ಇದರಿಂದಾಗಿ ಕಳೆದ ಒಂದು ವಾರದಿಂದ ಸಂಘದ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದೆ. ಸುಮಾರು 50ಕ್ಕೂ ಜನ ನೇಕಾರರ ಕುಟುಂಬಗಳಿಗೆ ತಾವು ನೇಯ್ದ ಸೀರೆಗೆ ಹಣವಿಲ್ಲದೆ ಪರದಾಡುವಂತಾಗಿದೆ.

ಕೈಮಗ್ಗ ನೇಕಾರರು ಮೊದಲೇ ಸಂಕಷ್ಟ ಅನುಭವಿಸುತ್ತಿದ್ದಾರೆ. ಈಗ ಇನ್ನೊಂದು ಸಂಕಷ್ಟಕ್ಕೆ ಎದುರಾಗಿದೆ. ಗಂಡ-ಹೆಂಡತಿಯ ಜಗಳದ ನಡುವೆ ಕೂಸು ಬಡವಾಯಿತು ಎಂಬ ಗಾದೆ ಮಾತಿನಂತೆ ಈ ನೇಕಾರರ ಸ್ಥಿತಿಗೆ ಗ್ರಾಮದ ಕೈಮಗ್ಗ ನೇಕಾರರ ಸಹಕಾರ ಉತ್ಪಾದಕರು ಮತ್ತು ಮಾರಾಟ ಸಂಘ ಸಾಕ್ಷಿಯಾಗಿದೆ. ಸಂಘದ ಆಡಳಿತ ಮಂಡಳಿ ಹಾಗೂ ರುದ್ರಮುನಿ ಬಿಜ್ಜಳ ಎಂಬ ಮಾಜಿ ನೌಕರರ ಮಧ್ಯೆದ ವಿವಾದ ಉಂಟಾಗಿ ಹೀಗ ನೇಕಾರರು ಬೀದಿಗೆ ಬೀಳುವಂತಾಗಿದೆ. ಗ್ರಾಮದ ಕೈಮಗ್ಗ ನೇಕಾರರ ಸಹಕಾರ ಸಂಘ. ಸಹಕಾರ ಸಂಘಗಳಲ್ಲಿ ರಾಷ್ಟç ಮಟ್ಟದ ಪ್ರಶಸ್ತಿ ಪಡೆದಿರುವ ಕೊಪ್ಪಳ ಜಿಲ್ಲೆಯ ಏಕೈಕ ಸಂಘಕ್ಕೆ ಈಗ ದುಸ್ಥಿತಿಗೆ ಬಂದಿದೆ.

ಕೈಮಗ್ಗ ನೇಕಾರರು ಸಹಕಾರ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯೊಬ್ಬರ ಮಧ್ಯೆದ ವಿವಾದದಿಂದಾಗಿ ಆಡಳಿತ ಮಂಡಳಿಯನ್ನು ಏ.11ರಂದು ರದ್ದಾಗಿದೆ. ಈ ಸಂಘಕ್ಕೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ನೇಮಕವಾದ ಆಡಳಿತಾಧಿಕಾರಿ ಇಲ್ಲಿಯವರೆಗೂ ಸಂಘಕ್ಕೆ ಭೇಟಿ ನೀಡಿಲ್ಲ. ಕಳೆದ 10ದಿನಗಳಿಂದ ದುಡಿದ ಸಂಘದ ನೇಕಾರರಿಗೆ ಹಣವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ದೋಟಿಹಾಳ ಸಹಕಾರ ಸಂಘದಲ್ಲಿ ಗುಮಾಸ್ತರಾಗಿರುವ ರುದ್ರಮುನಿ ಬಿಜ್ಜಳ ಎಂಬುವವರನ್ನು 2021 ರ ಸೆಪ್ಟಂಬರ್ ತಿಂಗಳಲ್ಲಿ ಅವರಿಗೆ ವೇತನವನ್ನು ಕೇವಲ 4500 ರೂಪಾಯಿ ನಿಗಿದಿ ಮಾಡಿದ್ದರು.  ವೇತನ ಕಡಿಮೆ ಮಾಡಿದ್ದನ್ನು ಪ್ರಶ್ನಿಸಿ ವೇತನ ಪಡೆಯದೆ ಇರುವದರಿಂದ ಆಡಳಿತ ಮಂಡಳಿಯವರು  ರುದ್ರಮುನಿಯವರನ್ನು ಕೆಲಸದಿಂದ ತೆಗೆದು. ದಿನಗೂಲಿ ಮೇಲೆ ನಿವೃತ್ತರೊಬ್ಬರನ್ನು ನೇಮಿಸಿಕೊಂಡಿದ್ದರು. ಇದು ನಿಯಮ ಬಾಹಿರವಾಗಿ ನೇಕಾರರ ಸಂಘಕ್ಕೆ ನೇಮಕ ಮಾಡಿಕೊಂಡಿರುವ ಬಗ್ಗೆ ರುದ್ರಮುನಿ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಿಗೆ ದೂರು ನೀಡಿದ್ದರು. ದೂರಿನನ್ವಯ ವಿಚಾರಣೆ ನಡೆಸಿದ ಉಪ ನಿಬಂಧಕರು ಎಪ್ರಿಲ್ 11 ರಂದು ಸಂಘದ ಆಡಳಿತ ಮಂಡಳಿಯನ್ನು ರದ್ದು ಮಾಡಿ, ಸಂಘಕ್ಕೆ ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ವೆಂಕರಡ್ಡಿಯವರನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಿದ್ದರು.

ನಮ್ಮ ಕೈಮಗ್ಗ ನೇಕಾರರ ಸಂಘದ ಆಡಳಿತ ಮಂಡಳಿಯನ್ನು ಸಹಕಾರ ಇಲಾಖೆಯ ಉಪನಿಬಂಧಕರ ರದ್ದು ಮಾಡಿ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿ ಆದೇಶಿಸಿದ್ದರು. ಇದುವರೆಗೂ ಸಂಘಕ್ಕೆ ಆಡಳಿತಾಧಿಕಾರಿ ಬರದೇ ಇರುವುದು ನೋಡಿದರೆ. ಸಂಘವನ್ನು ಆಶ್ವತವಾಗಿ ಮುಚ್ಚುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿರುವುದು ಕಂಡು ಬರುತ್ತಿದೆ ಎಂದು ಆರೋಪಿಸಿದರು. -ಸುರೇಶ ಮಾಳಗಿ, ಚನ್ನಪ್ಪ ಸಕ್ರಿ.ಗ್ರಾಮದ ನೇಕಾರರು.

ಇದರ ಬಗ್ಗೆ ಸಹಕಾರ ಇಲಾಖೆಯ ಉಪನಿಬಂಧಕರನ್ನು ಕೇಳಿದರೆ ನೇಮಕವಾದ ಆಡಳಿತಾಧಿಕಾರಿಯು ಕಬ್ಬರಗಿ ಸಹಕಾರ ಸಂಘದ ಚುನಾವಣೆ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ದೋಟಿಹಾಳದ ನೇಕಾರರ ಸಂಘಕ್ಕೆ ಹೋಗಿಲ್ಲ. ಅಲ್ಲಿಯ ನೇಕಾರರ ಸಮಸ್ಯೆ ಶೀಘ್ರ ಬಗೆಹರಿಸುವುದಾಗಿ ಹೇಳಿದ್ದರು.  -ಬಿ.ಎ ಕೇಸರಿಮಠ,  ಉಪನಿಬಂಧಕರು, ಜಿಲ್ಲಾ ಸಹಕಾರ ಇಲಾಖೆ ಕೊಪ್ಪಳ.

 

-ವರದಿ: ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.