ಫೆ. 22ಕ್ಕೆ ಶುಕಮುನಿಸ್ವಾಮಿ ರಥೋತ್ಸವ

ಭಕ್ತಿ ಹೆಸರಲ್ಲಿ ಆಸ್ತಿಪಾಸ್ತಿ ಹಾನಿಗೊಳಿಸಿದರೆ ಕ್ರಮ ಜಾತ್ರೆಗೆ ಬರುವ ಭಕ್ತರಿಗೆ ವ್ಯವಸ್ಥೆ  ಕಲ್ಪಿಸಿ

Team Udayavani, Jan 23, 2020, 5:03 PM IST

23-January-21

ದೋಟಿಹಾಳ: ಗ್ರಾಮದ ಶುಕಮುನಿಸ್ವಾಮಿ ತಾತನ ಜಾತ್ರೆ ತಾಲೂಕಿನಲ್ಲಿ ದೊಡ್ಡ ಜಾತ್ರೆ ಎಂದು ಪ್ರಸಿದ್ಧಿ ಪಡೆದಿದೆ. ಆದರೆ ಜಾತ್ರೆಗೆ ಬರುವ ಭಕ್ತರಿಗೆ ಸರಿಯಾದ ವ್ಯವಸ್ಥೆಯಿಲ್ಲ ಎಂದು ಮೂರು ವರ್ಷಗಳಿಂದ ಚರ್ಚೆ ಮಾಡಲಾಗುತ್ತಿದೆಯೇ ಹೊರತು ಕಾರ್ಯರೂಪಕ್ಕೆ ಬರುತ್ತಿಲ್ಲ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.

ಗ್ರಾಮದ ಅವದೂತ ಶುಕಮುನಿಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಜಾತ್ರೆ
ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು. ಈ ಮಠ ಮುಜರಾಯಿ ಇಲಾಖೆಗೆ ಒಳಪಟ್ಟಿದೆ. ಜಾತ್ರೆಗೆ ಬರುವ ಮಹಿಳೆಯರಿಗಾಗಿ ಸಾನ್ನಗೃಹ ನಿರ್ಮಿಸಬೇಕೆಂಬ ಎರಡ್ಮೂರು ವರ್ಷಗಳ ಬೇಡಿಕೆ ಇಂದಿಗೂ ಈಡೇರಿಲ್ಲ. ಜಾತ್ರೆ ಹತ್ತಿರ ಬರುತ್ತಿದ್ದರೂ ಮಠದ ಆವರಣದಲ್ಲಿ ಸಂಗ್ರಹವಾಗಿರುವ ತ್ಯಾಜ್ಯ ಸ್ವಚ್ಛತೆ ಮಾಡಿಲ್ಲ. ರಥ ಬೀದಿಯಲ್ಲಿ ನೀರು ನಿಂತು ಚರಂಡಿಯಾಗಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಸಭೆಯಲ್ಲಿ ತಿಳಿಸಿದರು.

ಸಿಪಿಐ ಜೆ. ಚಂದ್ರಶೇಖರ ಮಾತನಾಡಿ. ಪಲ್ಲಕ್ಕಿ ಉತ್ಸವದಲ್ಲಿ ಸಾರ್ವಜನಿಕರ
ಆಸ್ತಿ-ಪಾಸ್ತಿಗೆ ಹಾನಿ ಮಾಡಿದರೆ. ಯಾವುದೇ ಮುಲಾಜಿಲ್ಲದೆ ಅಂತಹ ವ್ಯಕ್ತಿಗಳ ವಿರುದ್ಧ
ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಇಲಾಖೆಯಿಂದ ವಿಶೇಷವಾಗಿ ತಂಡ ರಚನೆ ಮಾಡಲಾಗುತ್ತದೆ. ಪಲ್ಲಕ್ಕಿ ಉತ್ಸವ ಆರಂಭದಿಂದ ಕೊನೆಯವರಿಗೆ ವೀಡಿಯೊ ಚಿತ್ರೀಕರಣ ಮಾಡಲಾಗುವುದು. ಒಂದು ವೇಳೆ ಸಾರ್ವಜನಿಕರು ಭಕ್ತಿಯ ನೆಪದಲ್ಲಿ ಸಾರ್ವಜನಿಕರ ಆಸ್ತಿ-ಪಾಸ್ತಿಗಳಿಗೆ ತೊಂದರೆ ಮಾಡಿದರೆ ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು ಎಂದು ತಿಳಿಸಿದರು.

ತಹಶೀಲ್ದಾರ್‌ ಎಂ. ಸಿದ್ದೇಶ ಮಾತನಾಡಿ,ಮಹಿಳಾ ಯಾತ್ರಿಕರಿಗೆ ಕೂಡಲೇ ಸಾನ್ನಗೃಹ ನಿರ್ಮಾಣ ಮಾಡುತ್ತೇವೆ. ಶ್ರದ್ಧಾಭಕ್ತಿಯಿಂದ ತಾತನ ಜಾತ್ರೆ, ಪಲ್ಲಕ್ಕಿ ಉತ್ಸವ ಆಚರಿಸಿ
ದೇವರ ಕೃಪೆಗೆ ಪಾತ್ರರಾಗಿ. ಇದನ್ನು ಬಿಟ್ಟು ಮನಸ್ಸು ಬಂದಂತೆ ಆಚರಣೆ ಮಾಡಿ ಸಾರ್ವಜನಿಕರ ಆಸ್ತಿ-ಪಾಸ್ತಿ ಹಾನಿ ಮಾಡುವುದು ತಪ್ಪು. ಜಾತ್ರೆಯನ್ನು ಶಾಂತಿಯುತವಾಗಿ ಆಚರಿಸಬೇಕು. ರಥ ಬೀದಿಯ ಸ್ವತ್ಛತೆಯ ಬಗ್ಗೆ ಈಗಾಗಲೇ ಶಾಸಕರ ಜೊತೆ ಚರ್ಚೆ ಮಾಡಲಾಗಿದೆ.

1-2 ದಿನಗಳಲ್ಲಿ ಸೂಕ್ತ ಕ್ರಮಕೈಗೊಳ್ಳತ್ತೇವೆ. ಪಲ್ಲಕಿ ಮೆರವಣಿಗೆಯನ್ನು ಸ್ಥಳೀಯ
ಸಂಘಗಳಿಗೆ ವಹಿಸಲಾಗುತ್ತದೆ. ಪ್ರತಿದಿನ ಒಂದು ಸಂಘದ ಸದಸ್ಯರ ಸಮ್ಮುಖದಲ್ಲಿ ತಾತಾ ಪಲ್ಲಕಿ ಉತ್ಸವ ನಡೆಯುತ್ತದೆ. ಪಲ್ಲಕ್ಕಿ ಉತ್ಸವದಲ್ಲಿ ಭಾಗವಹಿಸುವ ಸಂಘಗಳಿಗೆ ಟಿ-ಶರ್ಟ್‌ ವ್ಯವಸ್ಥೆ ಮಾಡಲಾಗುತ್ತದೆ. ದಾಸೋಹ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆ ಮಾಡಲಾಗುತ್ತದೆ. ದಾಸೋಹ ಸೇವೆ ಮಾಡುವ ಭಕ್ತರು ಮುಂಚಿತವಾಗಿ ದೇವಸ್ಥಾನದ ಕಮಿಟಿಯವರಿಗೆ ತಿಳಿಸಬೇಕು.

ನೇರವಾಗಿ ಅಡುಗೆ ಮಾಡುವಂತಿಲ್ಲ. ಹೀಗಾಗಿ ಭಕ್ತರು ಮಠಕ್ಕೆ ನೀಡುವ ದಾಸೋಹದ
ಧಾನ್ಯವನ್ನು ಕಮಿಟಿಯಲ್ಲಿ ಒಪ್ಪಿಸಿ ಅವರಿಂದ ರಶೀದಿ ಪಡೆದುಕೊಳ್ಳಬೇಕು. ಕಮಿಟಿಯವರು ಪ್ರಸಾದ ವ್ಯವಸ್ಥೆ ಮಾಡುತ್ತಾರೆ ಎಂದು ಹೇಳಿದರು. ಫೆ. 16ರಿಂದ ಫೆ. 24ರವರೆಗೆ ನಡೆಯುವ
ಶ್ರೀ ಅವಧೂತ ಶುಕಮುನಿಸ್ವಾಮಿ ಪಲ್ಲಕ್ಕಿ ಉತ್ಸವದಲ್ಲಿ ಮದ್ಯಪಾನ ಮಾಡಿದವರು ಭಾಗವಸುವಂತಿಲ್ಲ. ಫೆ. 22ರಂದು ಸಂಜೆ 5ಕ್ಕೆ ಮಹಾರಥೋತ್ಸವ ಜರುಗಲಿದೆ.

ಜಾತ್ರೆಯನ್ನು ಶಾಂತಿಯುತವಾಗಿ ಆಚರಿಸಲು ಫೆ. 21, 22ರಂದು ಗ್ರಾಮದಲ್ಲಿ
ಮದ್ಯಪಾನ ನಿಷೇಧ ಮಾಡವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ದೋಟಿಹಾಳ ಮತ್ತು ಕೇಸೂರ ಗ್ರಾಪಂ ಸದಸ್ಯರು, ಕಮಿಟಿ ಸದಸ್ಯರು ಮತ್ತು ಊರಿನ ಭಕ್ತರು ಹಾಗೂ ಗ್ರಾಮದ ಮುಖಂಡರು, ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ಕಳೆದ ವರ್ಷ ಪಲ್ಲಕ್ಕಿ ಉತ್ಸವದಲ್ಲಿ ನಡೆದ ಘಟನೆ ಮತ್ತೂಮ್ಮೆ ಮರುಕಳಿಸಬಾರದು.
ಒಂದು ವೇಳೆ ಇಂತಹ ಘಟನೆ ನಡೆದರೆ. ಘಟನೆಗೆ ಕಾರಣರಾದ ವ್ಯಕ್ತಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹನುಮಸಾಗರ ಪಿಎಸ್‌ಐ ಅಮರೇಶ ಹುಬ್ಬಳ್ಳಿ ಅವರು ಖಡಕ್ಕಾಗಿ ಎಚ್ಚರಿಗೆ ನೀಡಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.